AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಕರ್ನಾಟಕ ವಿರುದ್ಧ ಪಂಜಾಬ್ ತಂಡದಿಂದ ದಿಟ್ಟ ಹೋರಾಟ

Karnataka vs Punjab: ಮೊದಲ ಇನಿಂಗ್ಸ್​ನಲ್ಲಿ ವಾಸುಕಿ ಕೌಶಿಕ್ ಕರಾರುವಾಕ್ ದಾಳಿಗೆ ತತ್ತರಿಸಿದ ಪಂಜಾಬ್ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ದೇವದತ್ ಪಡಿಕ್ಕಲ್ (193) ಹಾಗೂ ಮನೀಶ್ ಪಾಂಡೆ (118) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

Ranji Trophy 2024: ಕರ್ನಾಟಕ ವಿರುದ್ಧ ಪಂಜಾಬ್ ತಂಡದಿಂದ ದಿಟ್ಟ ಹೋರಾಟ
Prabhsimran Singh-Abhishek
TV9 Web
| Edited By: |

Updated on: Jan 08, 2024 | 7:49 AM

Share

ಹುಬ್ಬಳ್ಳಿಯ ಕೆಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿ (Ranji Trophy 2024) ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಪಂಜಾಬ್ ದಿಟ್ಟ ಹೋರಾಟ ಪ್ರದರ್ಶಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡವನ್ನು ಅಲ್ಪ ಮೊತ್ತಕ್ಕೆ ಆಲೌಟ್ ಮಾಡುವಲ್ಲಿ ಕರ್ನಾಟಕ ಬೌಲರ್​ಗಳು ಯಶಸ್ವಿಯಾಗಿದ್ದರು.

ಮೊದಲ ಇನಿಂಗ್ಸ್​ನಲ್ಲಿ ವಾಸುಕಿ ಕೌಶಿಕ್ ಕರಾರುವಾಕ್ ದಾಳಿಗೆ ತತ್ತರಿಸಿದ ಪಂಜಾಬ್ ತಂಡವು ಕೇವಲ 152 ರನ್​ಗಳಿಗೆ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಪರ ದೇವದತ್ ಪಡಿಕ್ಕಲ್ (193) ಹಾಗೂ ಮನೀಶ್ ಪಾಂಡೆ (118) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು.

ಈ ಶತಕಗಳ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು 514 ರನ್​ ಬಾರಿಸಿ ಕರ್ನಾಟಕ ತಂಡವು ಇನಿಂಗ್ಸ್ ಡಿಕ್ಲೇರ್ ಘೋಷಿಸಿತು. 362 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿತು.

ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಮೊದಲ ವಿಕೆಟ್​ಗೆ 192 ರನ್​ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ 91 ರನ್​ಗಳಿಸಿದ್ದ ಅಭಿಷೇಕ್ ವಿಕೆಟ್ ಪಡೆಯುವಲ್ಲಿ ರವಿಕುಮಾರ್ ಸಮರ್ಥ್ ಯಶಸ್ವಿಯಾದರು. ಇದಾಗ್ಯೂ ಮತ್ತೊಂದೆಡೆ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಪ್ರಭ್​ಸಿಮ್ರಾನ್ ಸಿಂಗ್ 146 ಎಸೆತಗಳಲ್ಲಿ 17 ಫೋರ್​ಗಳೊಂದಿಗೆ ಶತಕ ಸಿಡಿಸಿ ವಿಧ್ವತ್ ಕಾವೇರಪ್ಪಗೆ ವಿಕೆಟ್ ಒಪ್ಪಿಸಿದರು.

ಆ ಬಳಿಕ ಕಣಕ್ಕಿಳಿದ ನಮನ್ ಧಿರ್ 20 ರನ್​ಗಳಿಸಿ ಔಟಾದರೆ, ನಾಯಕ ಮಂದೀಪ್ ಸಿಂಗ್ (20) ಹಾಗೂ ನೆಹಾಲ್ ವಧೇರ (9) ತಂಡಕ್ಕೆ ಆಸರೆಯಾಗಿ ನಿಂತರು. ಪರಿಣಾಮ ಮೂರನೇ ದಿನದಾಟದ ಮುಕ್ತಾಯದ ವೇಳೆಗೆ ಪಂಜಾಬ್ ತಂಡವು 3 ವಿಕೆಟ್ ಕಳೆದುಕೊಂಡು 238 ರನ್​ ಕಲೆಹಾಕಿದೆ.

ಇದಾಗ್ಯೂ ಪಂಜಾಬ್ ತಂಡ 124 ರನ್​ಗಳ ಹಿನ್ನಡೆ ಹೊಂದಿದ್ದು, ನಾಲ್ಕನೇ ದಿನದಾಟದಲ್ಲಿ ಪಂದ್ಯದ ಮೇಲೆ ಹಿಡಿತ ಸಾಧಿಸುವ ವಿಶ್ವಾಸದಲ್ಲಿದ್ದಾರೆ ಕರ್ನಾಟಕ ಬೌಲರ್​ಗಳು.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ರವಿಕುಮಾರ್ ಸಮರ್ಥ್ , ಮನೀಶ್ ಪಾಂಡೆ , ನಿಕಿನ್ ಜೋಸ್ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಶುಭಾಂಗ್ ಹೆಗ್ಡೆ , ವಿಜಯ್ ಕುಮಾರ್ ವೈಶಾಕ್ , ರೋಹಿತ್ ಕುಮಾರ್ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್.

ಇದನ್ನೂ ಓದಿ: David Warner: ದಾಖಲೆಯೊಂದಿಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

ಪಂಜಾಬ್ ಪ್ಲೇಯಿಂಗ್ 11: ಪ್ರಭ್‌ಸಿಮ್ರಾನ್ ಸಿಂಗ್ , ಅಭಿಷೇಕ್ ಶರ್ಮಾ , ಮನ್‌ದೀಪ್ ಸಿಂಗ್ (ನಾಯಕ) , ನೆಹಾಲ್ ವಧೇರ , ನಮನ್ ಧೀರ್ , ಗೀತಾಂಶ್ ಖೇರಾ (ವಿಕೆಟ್ ಕೀಪರ್) , ಬಲ್ತೇಜ್ ಸಿಂಗ್ , ಮಯಾಂಕ್ ಮಾರ್ಕಾಂಡೆ , ಪ್ರೀತ್ ದತ್ತಾ , ಸಿದ್ದಾರ್ಥ್ ಕೌಲ್ , ಅರ್ಷದೀಪ್ ಸಿಂಗ್.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?