AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿಯಲ್ಲಿ ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಪಂಜಾಬ್​ಗೆ ಹೀನಾಯ ಸೋಲು

Ranji Trophy: ಡಿ.ಆರ್. ಬೇಂದ್ರೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಸೀಸನ್​ನ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಪಂಜಾಬ್ ನೀಡಿದ 52 ರನ್​ಗಳ ಅಲ್ಪ ಗುರಿಯನ್ನು ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

Ranji Trophy: ರಣಜಿಯಲ್ಲಿ ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಪಂಜಾಬ್​ಗೆ ಹೀನಾಯ ಸೋಲು
ಕರ್ನಾಟಕ ತಂಡ
ಪೃಥ್ವಿಶಂಕರ
|

Updated on:Jan 08, 2024 | 4:30 PM

Share

ಡಿ.ಆರ್. ಬೇಂದ್ರೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಸೀಸನ್​ನ ಮೊದಲ ರಣಜಿ ಪಂದ್ಯದಲ್ಲಿ (Ranji Trophy) ಕರ್ನಾಟಕ ತಂಡ ಪಂಜಾಬ್ ತಂಡವನ್ನು (Punjab vs Karnataka) 7 ವಿಕೆಟ್​ಗಳಿಂದ ಮಣಿಸಿದೆ. ಈ ಮೂಲಕ ರಣಜಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 152 ರನ್​ಗಳಿಗೆ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 514 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್ ದಿಟ್ಟ ಹೋರಾಟ ನೀಡಿ 413 ರನ್ ಕಲೆಹಾಕಿತು. ಈ ಮೂಲಕ ಕರ್ನಾಟಕಕ್ಕೆ 52 ರನ್​ಗಳ ಅಲ್ಪ ಗುರಿ ನೀಡಿತು. ಈ ಸುಲಭ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಪಂಜಾಬ್ ಮೊದಲ ಇನ್ನಿಂಗ್ಸ್

ಮೊದಲ ಇನ್ನಿಂಗ್ಸ್​ನಲ್ಲಿ ವೇಗಿ ವಿ ಕೌಶಿಕ್ ದಾಳಿಗೆ ನಲುಗಿದ ಪಂಜಾಬ್ ಕೇವಲ 152 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ನೆಹಾಲ್ ವಧೇರಾ ಅತ್ಯಧಿಕ 44 ರನ್​ಗಳ ಇನ್ನಿಂಗ್ಸ್ ಆಡಿದರೆ, ಅಭಿಷೇಕ್ ಶರ್ಮಾ 26 ರನ್, ಗೀತಾಂಶ ಖೇರಾ 27 ರನ್ ಹಾಗೂ ಮಯಾಂಕ್ ಮಾರ್ಕಂಡೆ 26 ರನ್​ಗಳ ಕೊಡುಗೆ ನೀಡಿದರು. ಕರ್ನಾಟಕದ ಪರ ಬೌಲಿಂಗ್​ನಲ್ಲಿ ಮಿಂಚಿದ ಕೌಶಿಕ್ 7 ವಿಕೆಟ್ ಪಡೆದು ಮಿಂಚಿದರು.

ಅತಿ ಕಿರಿ ವಯಸ್ಸಿನಲ್ಲಿ ರಣಜಿಗೆ ಪದಾರ್ಪಣೆ; ಇತಿಹಾಸ ಸೃಷ್ಟಿಸಿದ ಬಿಹಾರದ ಯುವ ಕ್ರಿಕೆಟಿಗ..!

193 ರನ್ ಸಿಡಿಸಿದ ಪಡಿಕಲ್

ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಇಬ್ಬರು ಆಟಗಾರರ ಶತಕ ಹಾಗೂ 1 ಅರ್ಧಶತಕದ ಆಧಾರದ ಮೇಲೆ 8 ವಿಕೆಟ್​ ಕಳೆದುಕೊಂಡು 514 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ತಂಡದ ಪರ ದೇವದತ್ ಪಡಿಕಲ್ 193 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರೆ, ಮನೀಶ್ ಪಾಂಡೆ 118 ರನ್ ಸಿಡಿಸಿದರು. ಹಾಗೆಯೇ ಶ್ರೀನಿವಾಸ್ ಶರತ್ ಕೂಡ 76 ರನ್​ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಪಂಜಾಬ್ ಎರಡನೇ ಇನ್ನಿಂಗ್ಸ್

362 ರನ್​ಗಳ ಬೃಹತ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್​ಗೆ ಈ ಬಾರಿ ಆರಂಭಿಕರು ನೆರವಾದರು. ಆರಂಭಿಕ ಅಭಿಷೇಕ್ ಶರ್ಮಾ 91 ರನ್ ಸಿಡಿಸಿದರೆ, ಮತ್ತೊಬ್ಬ ಆರಂಭಿಕ ಶತಕದ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಗೀತಾಂಶ ಖೇರಾ 43 ರನ್​ಗಳ ಕೊಡುಗೆ ನೀಡಿದರು. ಹೀಗಾಗಿ ತಂಡ ಎರಡನೇ ಇನ್ನಿಂಗ್ಸ್​ನಲ್ಲಿ 413 ರನ್ ಕಲೆಹಾಕಿ ಕರ್ನಾಟಕಕ್ಕೆ ಕೇವಲ 52 ರನ್​ಗಳ ಟಾರ್ಗೆಟ್ ನೀಡಿತು. ಎರಡನೇ ಇನ್ನಿಂಗ್ಸ್​ನಲ್ಲಿ ಕರ್ನಾಟಕದ ಪರ ರೋಹಿತ್ ಕುಮಾರ್ ಹಾಗೂ ಶುಭಾಂಗ್ ಹೆಗ್ಡೆ ತಲಾ 3 ವಿಕೆಟ್ ಪಡೆದು ಮಿಂಚಿದರು.

ಎರಡೂ ಇನ್ನಿಂಗ್ಸ್​ನಲ್ಲೂ ಮಯಾಂಕ್ ಶೂನ್ಯಕ್ಕೆ ಔಟ್

52 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ತಂಡದ ಪರ ಆರ್​. ಸಮರ್ಥ್​ 21 ರನ್, ಶರತ್ ಅಜೇಯ 21 ರನ್ ಹಾಗೂ ಮನೀಶ್ ಪಾಂಡೆ ಅಜೇಯ 10 ರನ್ ಸಿಡಿಸಿದರು. ಆದರೆ ಆಡಿದ ಎರಡೂ ಇನ್ನಿಂಗ್ಸ್​ಗಳಲ್ಲಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಖಾತೆಯನ್ನೇ ತೆರೆಯದಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Mon, 8 January 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ