AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ರಣಜಿಯಲ್ಲಿ ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಪಂಜಾಬ್​ಗೆ ಹೀನಾಯ ಸೋಲು

Ranji Trophy: ಡಿ.ಆರ್. ಬೇಂದ್ರೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಸೀಸನ್​ನ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ಪಂಜಾಬ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದೆ. ಪಂಜಾಬ್ ನೀಡಿದ 52 ರನ್​ಗಳ ಅಲ್ಪ ಗುರಿಯನ್ನು ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

Ranji Trophy: ರಣಜಿಯಲ್ಲಿ ಗೆಲುವಿನ ಶುಭಾರಂಭ ಮಾಡಿದ ಕರ್ನಾಟಕ; ಪಂಜಾಬ್​ಗೆ ಹೀನಾಯ ಸೋಲು
ಕರ್ನಾಟಕ ತಂಡ
ಪೃಥ್ವಿಶಂಕರ
|

Updated on:Jan 08, 2024 | 4:30 PM

Share

ಡಿ.ಆರ್. ಬೇಂದ್ರೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಸೀಸನ್​ನ ಮೊದಲ ರಣಜಿ ಪಂದ್ಯದಲ್ಲಿ (Ranji Trophy) ಕರ್ನಾಟಕ ತಂಡ ಪಂಜಾಬ್ ತಂಡವನ್ನು (Punjab vs Karnataka) 7 ವಿಕೆಟ್​ಗಳಿಂದ ಮಣಿಸಿದೆ. ಈ ಮೂಲಕ ರಣಜಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡ ಮೊದಲ ಇನ್ನಿಂಗ್ಸ್​ನಲ್ಲಿ 152 ರನ್​ಗಳಿಗೆ ಆಲೌಟ್ ಆಯಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ 514 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ಎರಡನೇ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್ ದಿಟ್ಟ ಹೋರಾಟ ನೀಡಿ 413 ರನ್ ಕಲೆಹಾಕಿತು. ಈ ಮೂಲಕ ಕರ್ನಾಟಕಕ್ಕೆ 52 ರನ್​ಗಳ ಅಲ್ಪ ಗುರಿ ನೀಡಿತು. ಈ ಸುಲಭ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.

ಪಂಜಾಬ್ ಮೊದಲ ಇನ್ನಿಂಗ್ಸ್

ಮೊದಲ ಇನ್ನಿಂಗ್ಸ್​ನಲ್ಲಿ ವೇಗಿ ವಿ ಕೌಶಿಕ್ ದಾಳಿಗೆ ನಲುಗಿದ ಪಂಜಾಬ್ ಕೇವಲ 152 ರನ್​ ಕಲೆಹಾಕಲಷ್ಟೇ ಶಕ್ತವಾಯಿತು. ತಂಡದ ಪರ ನೆಹಾಲ್ ವಧೇರಾ ಅತ್ಯಧಿಕ 44 ರನ್​ಗಳ ಇನ್ನಿಂಗ್ಸ್ ಆಡಿದರೆ, ಅಭಿಷೇಕ್ ಶರ್ಮಾ 26 ರನ್, ಗೀತಾಂಶ ಖೇರಾ 27 ರನ್ ಹಾಗೂ ಮಯಾಂಕ್ ಮಾರ್ಕಂಡೆ 26 ರನ್​ಗಳ ಕೊಡುಗೆ ನೀಡಿದರು. ಕರ್ನಾಟಕದ ಪರ ಬೌಲಿಂಗ್​ನಲ್ಲಿ ಮಿಂಚಿದ ಕೌಶಿಕ್ 7 ವಿಕೆಟ್ ಪಡೆದು ಮಿಂಚಿದರು.

ಅತಿ ಕಿರಿ ವಯಸ್ಸಿನಲ್ಲಿ ರಣಜಿಗೆ ಪದಾರ್ಪಣೆ; ಇತಿಹಾಸ ಸೃಷ್ಟಿಸಿದ ಬಿಹಾರದ ಯುವ ಕ್ರಿಕೆಟಿಗ..!

193 ರನ್ ಸಿಡಿಸಿದ ಪಡಿಕಲ್

ಇನ್ನು ಮೊದಲ ಇನ್ನಿಂಗ್ಸ್ ಆರಂಭಿಸಿದ ಕರ್ನಾಟಕ ಇಬ್ಬರು ಆಟಗಾರರ ಶತಕ ಹಾಗೂ 1 ಅರ್ಧಶತಕದ ಆಧಾರದ ಮೇಲೆ 8 ವಿಕೆಟ್​ ಕಳೆದುಕೊಂಡು 514 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ತಂಡದ ಪರ ದೇವದತ್ ಪಡಿಕಲ್ 193 ರನ್​ಗಳ ಸ್ಮರಣೀಯ ಇನ್ನಿಂಗ್ಸ್ ಆಡಿದರೆ, ಮನೀಶ್ ಪಾಂಡೆ 118 ರನ್ ಸಿಡಿಸಿದರು. ಹಾಗೆಯೇ ಶ್ರೀನಿವಾಸ್ ಶರತ್ ಕೂಡ 76 ರನ್​ಗಳ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಪಂಜಾಬ್ ಎರಡನೇ ಇನ್ನಿಂಗ್ಸ್

362 ರನ್​ಗಳ ಬೃಹತ್ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಪಂಜಾಬ್​ಗೆ ಈ ಬಾರಿ ಆರಂಭಿಕರು ನೆರವಾದರು. ಆರಂಭಿಕ ಅಭಿಷೇಕ್ ಶರ್ಮಾ 91 ರನ್ ಸಿಡಿಸಿದರೆ, ಮತ್ತೊಬ್ಬ ಆರಂಭಿಕ ಶತಕದ ಇನ್ನಿಂಗ್ಸ್ ಆಡಿದರು. ಕೆಳಕ್ರಮಾಂಕದಲ್ಲಿ ಗೀತಾಂಶ ಖೇರಾ 43 ರನ್​ಗಳ ಕೊಡುಗೆ ನೀಡಿದರು. ಹೀಗಾಗಿ ತಂಡ ಎರಡನೇ ಇನ್ನಿಂಗ್ಸ್​ನಲ್ಲಿ 413 ರನ್ ಕಲೆಹಾಕಿ ಕರ್ನಾಟಕಕ್ಕೆ ಕೇವಲ 52 ರನ್​ಗಳ ಟಾರ್ಗೆಟ್ ನೀಡಿತು. ಎರಡನೇ ಇನ್ನಿಂಗ್ಸ್​ನಲ್ಲಿ ಕರ್ನಾಟಕದ ಪರ ರೋಹಿತ್ ಕುಮಾರ್ ಹಾಗೂ ಶುಭಾಂಗ್ ಹೆಗ್ಡೆ ತಲಾ 3 ವಿಕೆಟ್ ಪಡೆದು ಮಿಂಚಿದರು.

ಎರಡೂ ಇನ್ನಿಂಗ್ಸ್​ನಲ್ಲೂ ಮಯಾಂಕ್ ಶೂನ್ಯಕ್ಕೆ ಔಟ್

52 ರನ್​ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು. ತಂಡದ ಪರ ಆರ್​. ಸಮರ್ಥ್​ 21 ರನ್, ಶರತ್ ಅಜೇಯ 21 ರನ್ ಹಾಗೂ ಮನೀಶ್ ಪಾಂಡೆ ಅಜೇಯ 10 ರನ್ ಸಿಡಿಸಿದರು. ಆದರೆ ಆಡಿದ ಎರಡೂ ಇನ್ನಿಂಗ್ಸ್​ಗಳಲ್ಲಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಖಾತೆಯನ್ನೇ ತೆರೆಯದಿರುವುದು ತಂಡಕ್ಕೆ ಕೊಂಚ ಹಿನ್ನಡೆಯನ್ನುಂಟು ಮಾಡಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Mon, 8 January 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ