AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 21 ರನ್​ಗಳಿಗೆ 6 ವಿಕೆಟ್; ಶಾರ್ದೂಲ್ ಸುನಾಮಿಗೆ ತತ್ತರಿಸಿದ ಅಸ್ಸಾಂ..!

Ranji Trophy 2024: ಭಾರತ ತಂಡದಿಂದ ಹೊರಗುಳಿದಿರುವ ವೇಗದ ಬೌಲರ್ ಶಾರ್ದೂಲ್ ಠಾಕೂರ್ ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆಯುತ್ತಿರುವ ಅಸ್ಸಾಂ ವಿರುದ್ಧದ ರಣಜಿ ಪಂದ್ಯದಲ್ಲಿ ಕೇವಲ 21 ರನ್ ನೀಡಿ 6 ವಿಕೆಟ್ ಪಡೆದಿದ್ದಾರೆ. ಶಾರ್ದಲ್ ದಾಳಿಗೆ ತತ್ತರಿಸಿದ ಅಸ್ಸಾಂನ ಮೊದಲ ಇನ್ನಿಂಗ್ಸ್ ಕೇವಲ 84 ರನ್‌ಗಳಿಗೆ ಕುಸಿದಿದೆ.

Ranji Trophy: 21 ರನ್​ಗಳಿಗೆ 6 ವಿಕೆಟ್; ಶಾರ್ದೂಲ್ ಸುನಾಮಿಗೆ ತತ್ತರಿಸಿದ ಅಸ್ಸಾಂ..!
ಶಾರ್ದೂಲ್ ಠಾಕೂರ್
ಪೃಥ್ವಿಶಂಕರ
|

Updated on:Feb 16, 2024 | 8:00 PM

Share

ಭಾರತ ತಂಡದಿಂದ ಹೊರಗುಳಿದಿರುವ ಶಾರ್ದೂಲ್ ಠಾಕೂರ್ (Shardul Thakur) ಪ್ರಸ್ತುತ 2024 ರ ರಣಜಿ ಟ್ರೋಫಿಯಲ್ಲಿ (Ranji Trophy 2024) ಸದ್ದು ಮಾಡುತ್ತಿದ್ದಾರೆ. ಮುಂಬೈ ಪರ ಆಡುತ್ತಿರುವ ಶಾರ್ದೂಲ್ ಠಾಕೂರ್ ಅಸ್ಸಾಂ ವಿರುದ್ಧ (Assam vs Mumbai) ನಡೆಯುತ್ತಿರುವ ಪಂದ್ಯದಲ್ಲಿ 10 ಓವರ್‌ ಬೌಲ್ ಮಾಡಿ ಕೇವಲ 21 ರನ್ ನೀಡಿ ಬರೋಬ್ಬರಿ 6 ವಿಕೆಟ್ ಪಡೆದರು. ಶಾರ್ದೂಲ್ ಅವರ ಈ ಮಾರಕ ಬೌಲಿಂಗ್ ಮುಂದೆ ಅಸ್ಸಾಂನ ಆರು ಬ್ಯಾಟ್ಸ್‌ಮನ್‌ಗಳು ಎರಡಂಕಿ ದಾಟಲು ಸಾಧ್ಯವಾಗಲಿಲ್ಲ. ಇದರಿಂದಾಗಿ ಅಸ್ಸಾಂನ ಮೊದಲ ಇನಿಂಗ್ಸ್ ಕೇವಲ 84 ರನ್‌ಗಳಿಗೆ ಕುಸಿಯಿತು.

21 ರನ್ ನೀಡಿ 6 ವಿಕೆಟ್

ಮೊದಲ ಇನ್ನಿಂಗ್ಸ್​ನಲ್ಲಿ ಅಸ್ಸಾಂ ತಂಡವನ್ನು 84 ರನ್‌ಗಳಿಗೆ ಕಟ್ಟಿಹಾಕಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಮುಂಬೈ 6 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿದೆ. ಇನ್ನು ಬೌಲಿಂಗ್​ನಲ್ಲಿ ಅಸ್ಸಾಂ ವಿರುದ್ಧ ಬಿರುಸಿನ ಬೌಲಿಂಗ್ ಮಾಡಿದ ಶಾರ್ದೂಲ್ ಕೇವಲ 21 ರನ್ ನೀಡಿ 6 ವಿಕೆಟ್ ಪಡೆದರು. ಅಸ್ಸಾಂ ತಂಡದ ಪರ್ವೇಜ್ ಮುಸ್ರಫ್, ಎಸ್‌ಸಿ ಘಡಿಗಾಂವ್ಕರ್, ಡ್ಯಾನಿಶ್ ದಾಸ್, ಕುನಾಲ್ ಶರ್ಮಾ, ಸುನೀತ್ ಲಚಿತ್ ಮತ್ತು ದಿಬಾಕರ್ ಜೊಹೊರಿ ಅವರಿಗೆ ಎರಡಂಕಿ ದಾಟಲು ಶಾರ್ದೂಲ್ ಅವಕಾಶ ನೀಡಲಿಲ್ಲ. ಶಾರ್ದೂಲ್ ಮಾರಕ ದಾಳಿಯಿಂದಾಗಿ ಮುಂಬೈ ತಂಡ ಅಸ್ಸಾಂ ತಂಡವನ್ನು ಕೇವಲ 84 ರನ್‌ಗಳಿಗೆ ಆಲೌಟ್ ಮಾಡಿತು.

250 ವಿಕೆಟ್ ಪೂರೈಸಿದ ಶಾರ್ದೂಲ್

ಅಸ್ಸಾಂ ತಂಡದ ಮೂರನೇ ವಿಕೆಟ್‌ ಪಡೆಯುವ ಶಾರ್ದೂಲ್ ಠಾಕೂರ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳನ್ನು ಪೂರೈಸಿದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 79 ಪಂದ್ಯಗಳನ್ನಾಡಿರುವ ಶಾರ್ದೂಲ್ ಈ ಮಾದರಿಯಲ್ಲಿ 14ನೇ ಬಾರಿಗೆ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಭಾರತ ಪರ 11 ಟೆಸ್ಟ್ ಪಂದ್ಯಗಳನ್ನು ಆಡಿರುವ ಠಾಕೂರ್ 28.38ರ ಸರಾಸರಿಯಲ್ಲಿ 31 ವಿಕೆಟ್ ಪಡೆದಿದ್ದಾರೆ.

ಇಂಜುರಿಯಿಂದಾಗಿ ಟೀಂ ಇಂಡಿಯಾದಿಂದ ಔಟ್

ಭಾರತದ ಪರ ಕೊನೆಯದಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದ ಶಾರ್ದೂಲ್, ಈ ಪ್ರವಾಸದ ವೇಳೆ ಪಾದದ ಗಾಯಕ್ಕೆ ತುತ್ತಾದರು. ಆ ಬಳಿಕ ಟೀಂ ಇಂಡಿಯಾದಿಂದ ಹೊರಬಿದ್ದಿರುವ ಶಾರ್ದೂಲ್ ಠಾಕೂರ್ ಕಳೆದ ವಾರ ರಾಯ್‌ಪುರದಲ್ಲಿ ಛತ್ತೀಸ್‌ಗಢ ವಿರುದ್ಧ ರಣಜಿ ಅಖಾಡಕ್ಕಿಳಿದರು. ಮೊದಲ ಪಂದ್ಯದಲ್ಲಿ ಅವರ ಪ್ರದರ್ಶನ ವಿಶೇಷವೇನೂ ಆಗಿರಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ 6 ವಿಕೆಟ್ ಪಡೆಯುವ ಮೂಲಕ ನಾಕೌಟ್ ಪಂದ್ಯಗಳಿಗೆ ಮುನ್ನವೇ ಎದುರಾಳಿ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಿಎಸ್​ಕೆ ತಂಡದಲ್ಲಿ ಶಾರ್ದೂಲ್

ಈ ಬಾರಿ ಶಾರ್ದೂಲ್ ಠಾಕೂರ್ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 4 ಕೋಟಿ ರೂ.ಗಳ ಬೃಹತ್ ಮೊತ್ತ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ. ಶಾರ್ದೂಲ್ ಠಾಕೂರ್ ಈ ಹಿಂದೆ 2018 ಮತ್ತು 2021 ರ ನಡುವೆ ಧೋನಿ ನಾಯಕತ್ವದಲ್ಲಿ ಆಡಿದ್ದರು. ಶಾರ್ದೂಲ್ ಠಾಕೂರ್ ಈ ಅವಧಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 48 ಪಂದ್ಯಗಳಲ್ಲಿ 55 ವಿಕೆಟ್ ಪಡೆದಿದ್ದರು. ನಂತರ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಶಾರ್ದೂಲ್ ಠಾಕೂರ್ ಅವರನ್ನು ಬಿಡುಗಡೆ ಮಾಡಿತು. ನಂತರ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆಡಿದ್ದ ಶಾರ್ದೂಲ್​ರನ್ನು 2023 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ ತಂಡ ಖರೀದಿಸಿತ್ತು. ಇದೀಗ ಮತ್ತೊಮ್ಮೆ ಶಾರ್ದೂಲ್ ತನ್ನ ಹಳೆಯ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಆಡಲಿದ್ದಾರೆ.

Published On - 7:48 pm, Fri, 16 February 24

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್