AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಅತ್ಯಲ್ಪ ಮೊತ್ತಕ್ಕೆ ಕರ್ನಾಟಕ ತಂಡ ಆಲೌಟ್

Tamil Nadu vs Karnataka: ತಮಿಳುನಾಡು ವಿರುದ್ಧದ ಈ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕರ್ನಾಟಕ ತಂಡದ ಯುವ ಆಟಗಾರ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. 218 ಎಸೆತಗಳನ್ನು ಎದುರಿಸಿದ ಪಡಿಕ್ಕಲ್ 6 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 151 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

Ranji Trophy 2024: ಅತ್ಯಲ್ಪ ಮೊತ್ತಕ್ಕೆ ಕರ್ನಾಟಕ ತಂಡ ಆಲೌಟ್
Tamil Nadu vs Karnataka
TV9 Web
| Edited By: |

Updated on: Feb 12, 2024 | 7:24 AM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ತಮಿಳುನಾಡು ನಡುವಣ ರಣಜಿ ಪಂದ್ಯವು (Ranji Trophy 2024) ರಣರೋಚಕದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (151) ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಈ ಶತಕದ ನೆರವಿನಿಂದ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 366 ರನ್ ಪೇರಿಸಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ತಮಿಳುನಾಡು ತಂಡವು ಕರ್ನಾಟಕ ಬೌಲರ್​ಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 151 ರನ್​ಗಳಿಗೆ ಆಲೌಟ್ ಆಯಿತು. ಕರ್ನಾಟಕ ಪರ ವಿಜಯಕುಮಾರ್ ವೈಶಾಕ್ 4 ವಿಕೆಟ್ ಕಬಳಿಸಿದರೆ, ಶಶಿಕುಮಾರ್ 3 ವಿಕೆಟ್ ಪಡೆದು ಮಿಂಚಿದರು.

215 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕರಾದ ರವಿಕುಮಾರ್ ಸಮರ್ಥ್ (2) ಹಾಗೂ ಮಯಾಂಕ್ ಅಗರ್ವಾಲ್ (11) ಬೇಗನೆ ನಿರ್ಗಮಿಸಿದರು. ಇನ್ನು ದೇವದತ್ ಪಡಿಕ್ಕಲ್ 36 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರು.

ಅನುಭವಿ ಆಟಗಾರ ಮನೀಶ್ ಪಾಂಡೆ ಕೇವಲ 14 ರನ್​ಗಳಿಸಲಷ್ಟೇ ಶಕ್ತರಾದರು. ಪರಿಣಾಮ 88 ರನ್​ಗಳಿಸುವಷ್ಟರಲ್ಲಿ ಕರ್ನಾಟಕ ತಂಡವು 5 ವಿಕೆಟ್ ಕಳೆದುಕೊಂಡಿತು. ಅತ್ತ ಪಂದ್ಯದ ಮೇಲೆ ಹಿಡಿತ ಸಾಧಿಸಿದ ತಮಿಳುನಾಡು ಬೌಲರ್​ಗಳು ಕರ್ನಾಟಕ ತಂಡವನ್ನು ಕೇವಲ 139 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ತಮಿಳುನಾಡು ಅತ್ಯುತ್ತಮ ದಾಳಿ ಸಂಘಟಿಸಿದ ಅಜಿತ್ ರಾಮ್ 19.4 ಓವರ್​ಗಳಲ್ಲಿ ಕೇವಲ 61 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.

ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ ತಮಿಳುನಾಡು ತಂಡ 355 ರನ್​ಗಳ ಗುರಿ ಪಡೆದಿದೆ. ಅಲ್ಲದೆ 3ನೇ ದಿನದಾಟದ ಅಂತ್ಯಕ್ಕೆ  1 ವಿಕೆಟ್ ನಷ್ಟಕ್ಕೆ 36 ರನ್ ಕಲೆಹಾಕಿದೆ. ಇನ್ನು 2 ದಿನದಾಟಗಳು ಬಾಕಿಯಿದ್ದು ತಮಿಳುನಾಡು ತಂಡಕ್ಕೆ 319 ರನ್​ಗಳ ಅವಶ್ಯಕತೆಯಿದ್ದರೆ, ಕರ್ನಾಟಕ ತಂಡದ ಗೆಲುವಿಗೆ 9 ವಿಕೆಟ್​ಗಳ ಅಗತ್ಯತೆಯಿದೆ.

ತಮಿಳುನಾಡು ಪ್ಲೇಯಿಂಗ್ 11: ಸುರೇಶ್ ಲೋಕೇಶ್ವರ್ , ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್) , ಪ್ರದೋಶ್ ಪೌಲ್ , ಬಾಬಾ ಇಂದ್ರಜಿತ್ , ವಿಜಯ್ ಶಂಕರ್ , ವಿಮಲ್ ಖುಮಾರ್ , ಬೂಪತಿ ಕುಮಾರ್ , ರವಿಶ್ರೀನಿವಾಸನ್ ಸಾಯಿ ಕಿಶೋರ್ (ನಾಯಕ) , ಎಸ್ ಅಜಿತ್ ರಾಮ್ , ಎಂ ಮುಹಮ್ಮದ್ , ಸಂದೀಪ್ ವಾರಿಯರ್.

ಇದನ್ನೂ ಓದಿ: Virat Kohli: ಕಿಂಗ್ ಕೊಹ್ಲಿಯ ರಿಎಂಟ್ರಿ ಯಾವಾಗ? ಇಲ್ಲಿದೆ ಮಾಹಿತಿ

ಕರ್ನಾಟಕ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ನಿಕಿನ್ ಜೋಸ್ , ಮನೀಶ್ ಪಾಂಡೆ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಹಾರ್ದಿಕ್ ರಾಜ್ , ಕಿಶನ್ ಬೇಡರೆ , ಶಶಿ ಕುಮಾರ್ ಕೆ , ವಿಜಯ್ ಕುಮಾರ್ ವೈಶಾಕ್ , ವಿಧ್ವತ್ ಕಾವೇರಪ್ಪ.

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು