AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ವಿದರ್ಭಗೆ ಭರ್ಜರಿ ಜಯ: ರಣಜಿ ಟ್ರೋಫಿ ಫೈನಲ್​ಗೆ ಎಂಟ್ರಿ

Vidarbha vs Madhya Pradesh: ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ತಂಡ ಸೋಲನುಭವಿಸಿದೆ. ಅತ್ತ ಭರ್ಜರಿ ಪ್ರದರ್ಶನ ನೀಡುವ ಮೂಲಕ ಗೆಲುವು ಸಾಧಿಸಿರುವ ವಿದರ್ಭ ತಂಡವು ಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಈ ಬಾರಿ ರಣಜಿ ಟ್ರೋಫಿಯ ಅಂತಿಮ ಹಣಾಹಣಿಯಲ್ಲಿ ಮುಂಬೈ ಮತ್ತು ವಿದರ್ಭ ತಂಡಗಳು ಮುಖಾಮುಖಿಯಾಗಲಿದೆ.

Ranji Trophy 2024: ವಿದರ್ಭಗೆ ಭರ್ಜರಿ ಜಯ: ರಣಜಿ ಟ್ರೋಫಿ ಫೈನಲ್​ಗೆ ಎಂಟ್ರಿ
Vidarbha
TV9 Web
| Edited By: |

Updated on: Mar 06, 2024 | 10:58 AM

Share

ನಾಗ್​ಪುರದಲ್ಲಿ ನಡೆದ ರಣಜಿ ಟೂರ್ನಿಯ (Ranji Trophy 2024) ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಮಧ್ಯ ಪ್ರದೇಶ್ ವಿರುದ್ಧ ವಿದರ್ಭ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ವಿದರ್ಭ ತಂಡವು ಫೈನಲ್​ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿದರ್ಭ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಅಥರ್ವ ತೈಡೆ 39 ರನ್ ಬಾರಿಸಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಕರುಣ್ ನಾಯರ್ (63) ಅರ್ಧಶತಕ ಸಿಡಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ವಿದರ್ಭ ತಂಡವು 170 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಮಧ್ಯ ಪ್ರದೇಶ್ ಪರ ಆರಂಭಿಕ ಆಟಗಾರ ಹಿಮಾಂಶು ಮಂತ್ರಿ (126) ಭರ್ಜರಿ ಶತಕ ಸಿಡಿಸಿದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ 252 ರನ್ ಕಲೆಹಾಕಿ ಮಧ್ಯ ಪ್ರದೇಶ್ ತಂಡವು 82 ರನ್​ಗಳ ಮುನ್ನಡೆ ಪಡೆಯಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ವಿದರ್ಭ ಪರ ಯಶ್ ರಾಥೋಡ್ 200 ಎಸೆತಗಳಲ್ಲಿ 18 ಫೋರ್ ಹಾಗೂ 2 ಸಿಕ್ಸ್​ಗಳೊಂದಿಗೆ 141 ರನ್​ ಬಾರಿಸಿದರು. ಮತ್ತೊಂದೆಡೆ ಅಕ್ಷಯ್ ವಾಡ್ಕರ್ 77 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ವಿದರ್ಭ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 402 ರನ್ ಕಲೆಹಾಕಿತು.

ಮೊದಲ ಇನಿಂಗ್ಸ್​ನ 82 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 321 ರನ್​ಗಳ ಗುರಿ ಪಡೆದಿರುವ ಮಧ್ಯ ಪ್ರದೇಶ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತ್ತು. ಮೊದಲ 20 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿದ್ದರು.

ಆದರೆ ಯಶ್ ದುಬೆ (94) ಹಾಗೂ ಹರ್ಷ್ ಗೌಳಿ (67) ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ವಿದರ್ಭ ಬೌಲರ್​ಗಳು ಬ್ಯಾಕ್ ಟು ಬ್ಯಾಕ್ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಪರಿಣಾಮ ಮಧ್ಯ ಪ್ರದೇಶ್ ತಂಡವು 227 ರನ್​ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಸಂಪೂರ್ಣ ಹಿಡಿತ ಸಾಧಿಸಿದ ವಿದರ್ಭ ತಂಡವು ಅತ್ಯುತ್ತಮ ಸಾಂಘಿಕ ಪ್ರದರ್ಶನ ನೀಡಿದರು. ಪರಿಣಾಮ 258 ರನ್​ಗಳಿಗೆ ಮಧ್ಯ ಪ್ರದೇಶ್ ತಂಡ ಆಲೌಟ್ ಆಯಿತು. ಈ ಮೂಲಕ ವಿದರ್ಭ ತಂಡವು 62 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ವಿದರ್ಭ ತಂಡವು ರಣಜಿ ಟ್ರೋಫಿ ಫೈನಲ್​ಗೆ ಪ್ರವೇಶಿಸಿದೆ. ಅದರಂತೆ ಭಾನುವಾರದಿಂದ ಶುರುವಾಗಲಿರುವ ಫೈನಲ್ ಪಂದ್ಯದಲ್ಲಿ ಮುಂಬೈ ತಂಡವನ್ನು ಎದುರಿಸಲಿದೆ.

ವಿದರ್ಭ ಪ್ಲೇಯಿಂಗ್ 11: ಅಥರ್ವ ತೈಡೆ , ಧ್ರುವ ಶೋರೆ , ಯಶ್ ರಾಥೋಡ್ , ಕರುಣ್ ನಾಯರ್ , ಅಕ್ಷಯ್ ವಾಡ್ಕರ್ (ನಾಯಕ) , ಆದಿತ್ಯ ಸರ್ವತೆ , ಯಶ್ ಠಾಕೂರ್ , ಉಮೇಶ್ ಯಾದವ್ , ಆದಿತ್ಯ ಠಾಕರೆ , ಅಕ್ಷಯ್ ವಾಖರೆ , ಅಮನ್ ಮೊಖಾಡೆ.

ಇದನ್ನೂ ಓದಿIPL 2024: CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಐಪಿಎಲ್​ನಿಂದ ಔಟ್..!

ಮಧ್ಯ ಪ್ರದೇಶ್ ಪ್ಲೇಯಿಂಗ್ 11: ಯಶ್ ದುಬೆ , ಹಿಮಾಂಶು ಮಂತ್ರಿ, ಹರ್ಷ್ ಗಾವ್ಲಿ , ಶುಭಂ ಎಸ್ ಶರ್ಮಾ (ನಾಯಕ) , ವೆಂಕಟೇಶ್ ಅಯ್ಯರ್ , ಸರನ್ಶ್ ಜೈನ್ , ಅನುಭವ್ ಅಗರ್ವಾಲ್ , ಕುಮಾರ್ ಕಾರ್ತಿಕೇಯ , ಅವೇಶ್ ಖಾನ್ , ಕುಲ್ವಂತ್ ಖೇಜ್ರೋಲಿಯಾ , ಸಾಗರ್ ಸೋಲಂಕಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ