AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಯಶ್ ಭರ್ಜರಿ ಸೆಂಚುರಿ: ಮಧ್ಯ ಪ್ರದೇಶಕ್ಕೆ 321 ರನ್​ಗಳ ಗುರಿ

Ranji Trophy 2024: ರಣಜಿ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ತಮಿಳುನಾಡು ತಂಡವನ್ನು 70 ರನ್​ಗಳಿಂದ ಸೋಲಿಸಿ ಮುಂಬೈ ತಂಡವು ಫೈನಲ್​ಗೆ ಪ್ರವೇಶಿಸಿದೆ. ಇದೀಗ ವಿದರ್ಭ ಮತ್ತು ಮಧ್ಯ ಪ್ರದೇಶ್ ತಂಡಗಳ ನಡುವೆ ಸೆಮಿಫೈನಲ್ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಮುಂಬೈ ತಂಡವನ್ನು ಎದುರಿಸಲಿದೆ.

Ranji Trophy 2024: ಯಶ್ ಭರ್ಜರಿ ಸೆಂಚುರಿ: ಮಧ್ಯ ಪ್ರದೇಶಕ್ಕೆ 321 ರನ್​ಗಳ ಗುರಿ
Yash Rathod
TV9 Web
| Edited By: |

Updated on: Mar 05, 2024 | 1:57 PM

Share

ನಾಗ್​ಪುರದ ವಿದರ್ಭ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ (Ranji Trophy 2024) ಮೊದಲ ಸೆಮಿಫೈನಲ್ ಪಂದ್ಯವು ಮುಕ್ತಾಯದ ಹಂತದತ್ತ ಸಾಗುತ್ತಿದೆ. ಮಧ್ಯ ಪ್ರದೇಶ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ವಿದರ್ಭ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಅಥರ್ವ ತೈಡೆ 39 ರನ್ ಬಾರಿಸಿದರೆ, ಕರುಣ್ ನಾಯರ್ (63) ಅರ್ಧಶತಕ ಸಿಡಿಸಿದರು. ಆದರೆ ಮಧ್ಯ ಪ್ರದೇಶ್ ಪರ ಕರಾರುವಾಕ್ ದಾಳಿ ಸಂಘಟಿಸಿದ ಅವೇಶ್ ಖಾನ್ 4 ವಿಕೆಟ್ ಕಬಳಿಸಿ ಮಿಂಚಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ವಿದರ್ಭ ತಂಡವು 170 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಮಧ್ಯ ಪ್ರದೇಶ್ ಪರ ಆರಂಭಿಕ ಆಟಗಾರ ಹಿಮಾಂಶು ಮಂತ್ರಿ (126) ಭರ್ಜರಿ ಶತಕ ಸಿಡಿಸಿದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದರೊಂದಿಗೆ 252 ರನ್​ಗಳಿಗೆ ಮಧ್ಯ ಪ್ರದೇಶ್ ತಂಡದ ಮೊದಲ ಇನಿಂಗ್ಸ್ ಅಂತ್ಯಗೊಂಡಿತು.

ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ವಿದರ್ಭ ಪರ ಯಶ್ ರಾಥೋಡ್ 200 ಎಸೆತಗಳಲ್ಲಿ 18 ಫೋರ್ ಹಾಗೂ 2 ಸಿಕ್ಸ್​ಗಳೊಂದಿಗೆ 141 ರನ್​ ಬಾರಿಸಿದರು. ಮತ್ತೊಂದೆಡೆ ಅಕ್ಷಯ್ ವಾಡ್ಕರ್ 77 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ವಿದರ್ಭ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 402 ರನ್ ಕಲೆಹಾಕಿತು.

ಮೊದಲ ಇನಿಂಗ್ಸ್​ನ 82 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 321 ರನ್​ಗಳ ಗುರಿ ಪಡೆದಿರುವ ಮಧ್ಯ ಪ್ರದೇಶ್ ತಂಡವು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ. 20 ಓವರ್​ಗಳ ಮುಕ್ತಾಯದ ವೇಳೆ 1 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿದೆ. ಇನ್ನು 226 ರನ್​ಗಳ ಅವಶ್ಯಕತೆಯಿದ್ದು, ಕ್ರೀಸ್​ನಲ್ಲಿ ಯಶ್ ದುಬೆ (39) ಹಾಗೂ ಹರ್ಷ್ ಗೌಳಿ (48) ಬ್ಯಾಟಿಂಗ್ ಮಾಡುತ್ತಿದ್ದಾರೆ.

ವಿದರ್ಭ ಪ್ಲೇಯಿಂಗ್ 11: ಅಥರ್ವ ತೈಡೆ , ಧ್ರುವ ಶೋರೆ , ಯಶ್ ರಾಥೋಡ್ , ಕರುಣ್ ನಾಯರ್ , ಅಕ್ಷಯ್ ವಾಡ್ಕರ್ (ನಾಯಕ) , ಆದಿತ್ಯ ಸರ್ವತೆ , ಯಶ್ ಠಾಕೂರ್ , ಉಮೇಶ್ ಯಾದವ್ , ಆದಿತ್ಯ ಠಾಕರೆ , ಅಕ್ಷಯ್ ವಾಖರೆ , ಅಮನ್ ಮೊಖಾಡೆ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಮಧ್ಯ ಪ್ರದೇಶ್ ಪ್ಲೇಯಿಂಗ್ 11: ಯಶ್ ದುಬೆ , ಹಿಮಾಂಶು ಮಂತ್ರಿ, ಹರ್ಷ್ ಗಾವ್ಲಿ , ಶುಭಂ ಎಸ್ ಶರ್ಮಾ (ನಾಯಕ) , ವೆಂಕಟೇಶ್ ಅಯ್ಯರ್ , ಸರನ್ಶ್ ಜೈನ್ , ಅನುಭವ್ ಅಗರ್ವಾಲ್ , ಕುಮಾರ್ ಕಾರ್ತಿಕೇಯ , ಅವೇಶ್ ಖಾನ್ , ಕುಲ್ವಂತ್ ಖೇಜ್ರೋಲಿಯಾ , ಸಾಗರ್ ಸೋಲಂಕಿ.

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ