AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಕಾವೇರಪ್ಪ ಬೆಂಕಿ ಬೌಲಿಂಗ್: ರೋಚಕಘಟ್ಟದತ್ತ ರಣಜಿ ಪಂದ್ಯ

Vidwath Kaverappa: ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್​ನಲ್ಲಿ ಕರಾರುವಾಕ್ ದಾಳಿ ಸಂಘಟಿಸಿರುವ ಕೊಡಿಗಿನ ಕುವರ ವಿಧ್ವತ್ ಕಾವೇರಪ್ಪ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಕರ್ನಾಟಕ ತಂಡದ ಗೆಲುವಿನ ಆಸೆಯನ್ನು ಚಿಗುರಿಸಿದ್ದಾರೆ. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಕರ್ನಾಟಕ ತಂಡ ಗೆದ್ದರೆ ಸೆಮಿಫೈನಲ್​ಗೇರಲಿದೆ.

Ranji Trophy 2024: ಕಾವೇರಪ್ಪ ಬೆಂಕಿ ಬೌಲಿಂಗ್: ರೋಚಕಘಟ್ಟದತ್ತ ರಣಜಿ ಪಂದ್ಯ
Vidwath Kaverappa
TV9 Web
| Edited By: |

Updated on: Feb 27, 2024 | 10:49 AM

Share

ನಾಗ್​ಪುರದಲ್ಲಿ ನಡೆಯುತ್ತಿರುವ ಕರ್ನಾಟಕ ಮತ್ತು ವಿದರ್ಭ ನಡುವಣ ರಣಜಿ ಟ್ರೋಫಿಯ (Ranji Trophy 2024) ಕ್ವಾರ್ಟರ್ ಫೈನಲ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡವು ಅಥರ್ವ ತೈಡೆ (109) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್​ನಲ್ಲಿ 460 ರನ್ ಕಲೆಹಾಕಿತು. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಆಡಿದ ಕರ್ನಾಟಕ ಪರ ನಿಕಿಲ್ ಜೋಸ್ (84) ಹಾಗೂ ರವಿಕುಮಾರ್ ಸಮರ್ಥ್ (59) ಅರ್ಧಶತಕ ಬಾರಿಸಿ ಮಿಂಚಿದರು. ಈ ಅರ್ಧಶತಕಗಳ ನೆರವಿನೊಂದಿಗೆ ಕರ್ನಾಟಕ ತಂಡವು 286 ರನ್​ಗಳಿಸಿ ಆಲೌಟ್ ಆಯಿತು.

174 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವಿದರ್ಭ ತಂಡಕ್ಕೆ ಆಘಾತ ನೀಡುವಲ್ಲಿ ಯುವ ವೇಗಿ ವಿಧ್ವತ್ ಕಾವೇರಪ್ಪ ಯಶಸ್ವಿಯಾದರು. ಕರಾರುವಾಕ್ ದಾಳಿ ಸಂಘಟಿಸಿದ ಕಾವೇರಪ್ಪ ಕೇವಲ 61 ರನ್ ನೀಡಿ 6 ವಿಕೆಟ್ ಕಬಳಿಸಿದರು. ಇದರೊಂದಿಗೆ ವಿದರ್ಭ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 196 ರನ್​ಗಳಿಗೆ ಆಲೌಟ್ ಆಯಿತು.

ದ್ವಿತೀಯ ಇನಿಂಗ್ಸ್​ನಲ್ಲಿ 370 ರನ್​ಗಳ ಗುರಿ ಪಡೆದ ಕರ್ನಾಟಕ ತಂಡಕ್ಕೆ ಮಯಾಂಕ್ ಅಗರ್ವಾಲ್ (70) ಹಾಗೂ ರವಿಕುಮಾರ್ ಸಮರ್ಥ್ (40) ಭರ್ಜರಿ ಆರಂಭ ಒದಗಿಸಿದ್ದಾರೆ. ಈ ಮೂಲಕ ಕರ್ನಾಟಕ ತಂಡವು 4 ವಿಕೆಟ್ ಕಳೆದುಕೊಂಡು 136 ರನ್​ ಕಲೆಹಾಕಿದೆ. ಇನ್ನು ಐದನೇ ದಿನದಾಟದ ಮುಕ್ತಾಯದ ವೇಳೆಗೆ 235 ರನ್​ಗಳಿಸಿದರೆ ಕರ್ನಾಟಕ ತಂಡವು ಗೆಲುವಿನೊಂದಿಗೆ ಸೆಮಿಫೈನಲ್​ಗೇರಬಹುದು. ಹೀಗಾಗಿ ಕೊನೆಯ ದಿನದಾಟವು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಪಂದ್ಯ ಡ್ರಾ ಆದರೆ ಯಾರು ವಿನ್ನರ್?

ಒಂದು ವೇಳೆ ಈ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡರೆ ವಿದರ್ಭ ತಂಡ ಸೆಮಿಫೈನಲ್​ಗೇರಲಿದೆ. ಏಕೆಂದರೆ ನಾಕೌಟ್ ಹಂತದಲ್ಲಿ ಪಂದ್ಯವು ಡ್ರಾ ಆದರೆ ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಸಾಧಿಸಿರುವ ತಂಡವು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ.

ವಿದರ್ಭ ಪ್ಲೇಯಿಂಗ್ 11: ಧ್ರುವ ಶೋರೆ , ಅಥರ್ವ ತೈಡೆ , ಕರುಣ್ ನಾಯರ್ , ಅಕ್ಷಯ್ ವಾಡ್ಕರ್ (ನಾಯಕ) , ಮೋಹಿತ್ ಕಾಳೆ , ಯಶ್ ರಾಥೋಡ್ , ಆದಿತ್ಯ ಸರ್ವತೆ , ಯಶ್ ಠಾಕೂರ್ , ಹರ್ಷ ದುಬೆ , ಉಮೇಶ್ ಯಾದವ್ , ಆದಿತ್ಯ ಠಾಕರೆ.

ಇದನ್ನೂ ಓದಿ: IPL 2024: ಇಬ್ಬರು ಭಾರತೀಯರು: 10 ತಂಡಗಳ ಕೋಚ್​ ಫೈನಲ್​

ಕರ್ನಾಟಕ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ (ನಾಯಕ) , ನಿಕಿನ್ ಜೋಸ್ , ಹಾರ್ದಿಕ್ ರಾಜ್ , ಮನೀಶ್ ಪಾಂಡೆ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಅನೀಶ್ ಕೆ ವಿ , ಧೀರಜ್ ಗೌಡ , ವಿಜಯ್ ಕುಮಾರ್ ವೈಶಾಕ್ , ವಾಸುಕಿ ಕೌಶಿಕ್ , ವಿಧ್ವತ್ ಕಾವೇರಪ್ಪ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ