AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025 final: ಇಂದಿನಿಂದ ರಣಜಿ ಟ್ರೋಫಿ ಫೈನಲ್ ಫೈಟ್

Vidarbha vs Kerala: ದೇಶೀಯ ಅಂಗಳದ ಟೆಸ್ಟ್ ಸಮರ ಕೊನೆಯ ಹಂತಕ್ಕೆ ಬಂದು ನಿಂತಿದೆ. ಅದರಂತೆ ಈ ಬಾರಿಯ ರಣಜಿ ಟೂರ್ನಿಯ ಅಂತಿಮ ಪಂದ್ಯದಲ್ಲಿ ವಿದರ್ಭ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗುತ್ತಿದೆ. ವಿದರ್ಭದ ವಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಗೆಲ್ಲುವ ತಂಡ ರಣಜಿ ಟೂರ್ನಿಯ ಚಾಂಪಿಯನ್ ಪಟ್ಟವನ್ನು ಅಲಂಕರಿಸಲಿದೆ.

Ranji Trophy 2025 final: ಇಂದಿನಿಂದ ರಣಜಿ ಟ್ರೋಫಿ ಫೈನಲ್ ಫೈಟ್
Ranji Trophy 2025 Final
Follow us
ಝಾಹಿರ್ ಯೂಸುಫ್
|

Updated on: Feb 26, 2025 | 7:22 AM

ರಣಜಿ ಟೂರ್ನಿಯ ಫೈನಲ್ ಪಂದ್ಯ ಇಂದಿನಿಂದ (ಫೆ.26) ಶುರುವಾಗಲಿದೆ. ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಕೇರಳ ಹಾಗೂ ವಿದರ್ಭ ತಂಡಗಳು ಮುಖಾಮುಖಿಯಾಗಲಿದೆ. ಇದಕ್ಕೂ ಮುನ್ನ ನಡೆದ ಸೆಮಿಫೈನಲ್ಸ್ ಪಂದ್ಯಗಳಲ್ಲಿ ವಿದರ್ಭ ತಂಡವು ಬಲಿಷ್ಠ ಮುಂಬೈ ತಂಡವನ್ನು 80 ರನ್ ಗಳಿಂದ ಸೋಲಿಸಿ ಫೈನಲ್ ಗೇರಿತು.

ಮತ್ತೊಂದೆಡೆ ಕೇರಳ ಹಾಗೂ ಗುಜರಾತ್ ನಡುವಿನ ಪಂದ್ಯವು ಡ್ರಾನಲ್ಲಿ ಅಂತ್ಯ ಕಂಡರೂ, ಮೊದಲ ಇನಿಂಗ್ಸ್ ನಲ್ಲಿನ ಕೇವಲ 2 ರನ್ ಗಳ ಮುನ್ನಡೆಯೊಂದಿಗೆ ಕೇರಳ ತಂಡ ಫೈನಲ್ ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಇಂದಿನಿಂದ ಆರಂಭವಾಗಲಿರುವ ದೇಶೀಯ ಅಂಗಳದ ಟೆಸ್ಟ್ ಸಮರದಲ್ಲಿ ವಿದರ್ಭ ಹಾಗೂ ಕೇರಳ ತಂಡಗಳು ಮುಖಾಮುಖಿಯಾಗುತ್ತಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಇದಕ್ಕೂ ಮುನ್ನ 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಪಂದ್ಯವನ್ನು ಸ್ಪೋರ್ಟ್ಸ್ 18 ಚಾನೆಲ್​ ಹಾಗೂ ಜಿಯೋ ಹಾಟ್​ಸ್ಟಾರ್ ಆ್ಯಪ್ ಮತ್ತು ವೆಬ್​ಸೈಟ್​ಗಳಲ್ಲಿ ಲೈವ್ ವೀಕ್ಷಿಸಬಹುದು.

ಉಭಯ ತಂಡಗಳು:

ವಿದರ್ಭ ತಂಡ: ಅಕ್ಷಯ್ ವಾಡ್ಕರ್ (ನಾಯಕ) , ಅಥರ್ವ ತೈಡೆ , ಧ್ರುವ ಶೋರೆ , ಪಾರ್ಥ್ ರೇಖಾಡೆ , ಡ್ಯಾನಿಶ್ ಮಾಲೆವಾರ್ , ಕರುಣ್ ನಾಯರ್ , ಯಶ್ ರಾಥೋಡ್ , ಹರ್ಷ ದುಬೆ , ನಚಿಕೇತ್ ಭೂತೆ , ದರ್ಶನ್ ನಲ್ಕಂಡೆ , ಯಶ್ ಠಾಕೂರ್ , ಅಕ್ಷಯ್ ಸಿದ್ಧೇಶ್ ವಖರೆ , ಅಕ್ಷಯ್ ಕರ್ಣೆವಾರ್, ಶುಭಂ ಕಾಪ್ಸೆ , ಅಮನ್ ಮೊಖಡೆ , ಮಂದರ್ ಮಹಾಲೆ , ಯಶ್ ಕದಂ , ಪ್ರಫುಲ್ ಹಿಂಗೆ , ಉಮೇಶ್ ಯಾದವ್.

ಇದನ್ನೂ ಓದಿ: ರಚಿನ್ ಅಬ್ಬರಕ್ಕೆ ಸಚಿನ್ ವಿಶ್ವ ದಾಖಲೆಯೇ ಉಡೀಸ್

ಕೇರಳ ತಂಡ: ಸಚಿನ್ ಬೇಬಿ (ನಾಯಕ) , ಮೊಹಮ್ಮದ್ ಅಝರುದ್ದೀನ್ (ವಿಕೆಟ್ ಕೀಪರ್) , ಅಕ್ಷಯ್ ಚಂದ್ರನ್ , ರೋಹನ್ ಕುನ್ನುಮ್ಮಳ್ , ವರುಣ್ ನಾಯನಾರ್ , ಜಲಜ್ ಸಕ್ಸೇನಾ , ಸಲ್ಮಾನ್ ನಿಝಾರ್ , ಅಹಮ್ಮದ್ ಇಮ್ರಾನ್ , ಆದಿತ್ಯ ಸರ್ವತೆ , ಎಂಡಿ ನಿಧೀಶ್ , ನೆಡುಮಂಕುಹಿ ಬಾಸಿಲ್ , ಬಾಸಿ ಥಂಪಿ , ವಿಷ್ಣು ವಿನೋದ್, ಬಾಬಾ ಅಪರಜಿತ್, ಫಾಝಿಲ್ ಫನೂಸ್, ವತ್ಸಲ್ ಗೋವಿಂದ್ , ಶೋನ್ ರೋಜರ್ , ವೈಶಾಖ್ ಚಂದ್ರನ್ , ಕೃಷ್ಣ ಪ್ರಸಾದ್ , ಆನಂದ್ ಕೃಷ್ಣನ್ , ಕೆ ಎಂ ಆಸಿಫ್.

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಪ್ರವಾದಿ ಮೊಹಮ್ಮದ್ ವಿಷಯದಲ್ಲಿ ಯತ್ನಾಳ್ ಮಾತಾಡಿದ್ದು ತಪ್ಪು: ಎಂಬಿ ಪಾಟೀಲ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಚಿಕ್ಕಮಗಳೂರಿನಲ್ಲಿ ಬಿಗಿ ಬಂದೋಬಸ್ತ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್
ಬನಸಗೌಡ ಯತ್ನಾಳ್ ಮಾಧ್ಯಮದವರ ಕೈಗೆ ಸಿಗುತ್ತಿಲ್ಲವಂತಲ್ಲ? ಜಮೀರ್ ಅಹ್ಮದ್