AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025: ಪಂಜಾಬ್ ವಿರುದ್ಧ ಕರ್ನಾಟಕ ತಂಡಕ್ಕೆ ಅಮೋಘ ಜಯ

Ranji Trophy 2025: Karnataka vs Punjab: ಶುಭ್​ಮನ್ ಗಿಲ್ ನಾಯಕತ್ವದ ಪಂಜಾಬ್ ತಂಡದ ವಿರುದ್ಧ ಮಯಾಂಕ್ ಅಗರ್ವಾಲ್ ಮುಂದಾಳತ್ವದ ಕರ್ನಾಟಕ ತಂಡವು ಇನಿಂಗ್ಸ್ ಮತ್ತು 207 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಕರ್ನಾಟಕ ತಂಡವು 475 ರನ್​ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ​ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡುವ ಅವಕಶ್ಯತೆಯೇ ಬರಲಿಲ್ಲ.

Ranji Trophy 2025: ಪಂಜಾಬ್ ವಿರುದ್ಧ ಕರ್ನಾಟಕ ತಂಡಕ್ಕೆ ಅಮೋಘ ಜಯ
Karnataka
ಝಾಹಿರ್ ಯೂಸುಫ್
|

Updated on: Jan 25, 2025 | 2:41 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕರ್ನಾಟಕ ತಂಡ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ವೇಗದ ದಾಳಿ ಸಂಘಟಿಸಿದ ವಾಸುಕಿ ಕೌಶಿಕ್ 4 ವಿಕೆಟ್ ಪಡೆದರೆ, ಅಭಿಲಾಷ್ ಶೆಟ್ಟಿ 3 ವಿಕೆಟ್ ಕಬಳಿಸಿದರು. ಪರಿಣಾಮ ಪಂಜಾಬ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 55 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆಡಿದ ಕರ್ನಾಟಕ ಪರ ಸ್ಮರಣ್ ರವಿಚಂದ್ರನ್ ಚೊಚ್ಚಲ ದ್ವಿಶತಕ ಸಿಡಿಸಿದರು. 277 ಎಸೆತಗಳನ್ನು ಎದುರಿಸಿದ ಸ್ಮರಣ್ 3 ಸಿಕ್ಸ್ ಹಾಗೂ 25 ಫೋರ್​ಗಳೊಂದಿಗೆ 203 ರನ್​ ಬಾರಿಸಿದರು. ಈ ಡಬಲ್ ಸೆಂಚುರಿ ನೆರವಿನಿಂದ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 475 ರನ್​ಗಳಿಸಿ ಆಲೌಟ್ ಆಯಿತು.

ದ್ವಿತೀಯ ಇನಿಂಗ್ಸ್​:

420 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಪ್ರಭ್​ಸಿಮ್ರಾನ್ ಸಿಂಗ್ 1 ರನ್​ಗಳಿಸಿ ಔಟಾದರೆ,  ಆ ಬಳಿಕ ಬಂದ ಅನ್​ಮೋಲ್​ಪ್ರೀತ್ ಸಿಂಗ್ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ಆಡಿದ ಶುಭ್​ಮನ್ ಗಿಲ್ ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದರು. ಅಲ್ಲದೆ ತಂಡದ ಪರ ಏಕಾಂಗಿ ಹೋರಾಟ ನಡೆಸಿ ಸ್ಕೋರ್ ಅನ್ನು 150ರ ಗಡಿದಾಟಿಸಿದರು.

ಇದರ ನಡುವೆ 171 ಎಸೆತಗಳನ್ನು ಎದುರಿಸಿದ ಶುಭ್​​ಮನ್ ಗಿಲ್ 3 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 102 ರನ್ ಬಾರಿಸಿದರು. ಶತಕ ಬೆನ್ನಲ್ಲೇ ಗಿಲ್ ಅವರನ್ನು ಎಲ್​ಬಿಡಬ್ಲ್ಯೂ ಮಾಡುವಲ್ಲಿ ಶ್ರೇಯಸ್ ಗೋಪಾಲ್ ಯಶಸ್ವಿಯಾದರು.

ಶುಭ್​ಮನ್ ಗಿಲ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು, ಅಂತಿಮವಾಗಿ ಪಂಜಾಬ್ ತಂಡವನ್ನು 213 ರನ್​ಗಳಿಗೆ ಆಲೌಟ್ ಮಾಡಿದರು. ಈ ಮೂಲಕ ಕರ್ನಾಟಕ ತಂಡವು ಇನಿಂಗ್ಸ್ ಹಾಗೂ 207 ರನ್​ಗಳ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಕರ್ನಾಟಕ ತಂಡ ಗ್ರೂಪ್-ಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಈ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿ ಹರ್ಯಾಣ ತಂಡವಿದ್ದು, ದ್ವಿತೀಯ ಸ್ಥಾನದಲ್ಲಿ ಕೇರಳ ತಂಡವಿದೆ. ಇನ್ನು ಬಂಗಾಳ ತಂಡ ಮೂರನೇ ಸ್ಥಾನದಲ್ಲಿದ್ದರೆ, 12 ಅಂಕಗಳೊಂದಿಗೆ ಕರ್ನಾಟಕ 4ನೇ ಸ್ಥಾನ ಅಲಂಕರಿಸಿದೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಅನೀಶ್ ಕೆ ವಿ , ಸ್ಮರಣ್ ರವಿಚಂದ್ರನ್ , ಅಭಿನವ್ ಮನೋಹರ್ , ಶ್ರೇಯಸ್ ಗೋಪಾಲ್ , ಯಶೋವರ್ಧನ್ ಪರಂತಪ್ , ಪ್ರಸಿದ್ಧ್ ಕೃಷ್ಣ , ವಾಸುಕಿ ಕೌಶಿಕ್ , ಅಭಿಲಾಷ್ ಶೆಟ್ಟಿ.

ಇದನ್ನೂ ಓದಿ: ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್

ಪಂಜಾಬ್ ಪ್ಲೇಯಿಂಗ್ 11: ಶುಭ್​ಮನ್ ಗಿಲ್ (ನಾಯಕ) , ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅನ್ಮೋಲ್ಪ್ರೀತ್ ಸಿಂಗ್ , ಪುಖ್ರಾಜ್ ಮನ್ , ಸನ್ವಿರ್ ಸಿಂಗ್ , ರಮಣದೀಪ್ ಸಿಂಗ್ , ಜಸಿಂದರ್ ಸಿಂಗ್ , ಸುಖದೀಪ್ ಬಾಜ್ವಾ , ಆರಾಧ್ಯ ಶುಕ್ಲಾ , ಮಯಾಂಕ್ ಮಾರ್ಕಾಂಡೆ , ಗುರ್ನೂರ್ ಬ್ರಾರ್.

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್