AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025: ಪಂಜಾಬ್ ವಿರುದ್ಧ ಕರ್ನಾಟಕ ತಂಡಕ್ಕೆ ಅಮೋಘ ಜಯ

Ranji Trophy 2025: Karnataka vs Punjab: ಶುಭ್​ಮನ್ ಗಿಲ್ ನಾಯಕತ್ವದ ಪಂಜಾಬ್ ತಂಡದ ವಿರುದ್ಧ ಮಯಾಂಕ್ ಅಗರ್ವಾಲ್ ಮುಂದಾಳತ್ವದ ಕರ್ನಾಟಕ ತಂಡವು ಇನಿಂಗ್ಸ್ ಮತ್ತು 207 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಪ್ರಥಮ ಇನಿಂಗ್ಸ್​ನಲ್ಲಿ ಕರ್ನಾಟಕ ತಂಡವು 475 ರನ್​ಗಳ ಬೃಹತ್ ಮೊತ್ತ ಪೇರಿಸಿದ್ದರಿಂದ​ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟ್ ಮಾಡುವ ಅವಕಶ್ಯತೆಯೇ ಬರಲಿಲ್ಲ.

Ranji Trophy 2025: ಪಂಜಾಬ್ ವಿರುದ್ಧ ಕರ್ನಾಟಕ ತಂಡಕ್ಕೆ ಅಮೋಘ ಜಯ
Karnataka
ಝಾಹಿರ್ ಯೂಸುಫ್
|

Updated on: Jan 25, 2025 | 2:41 PM

Share

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಕರ್ನಾಟಕ ತಂಡ ಅಮೋಘ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ವೇಗದ ದಾಳಿ ಸಂಘಟಿಸಿದ ವಾಸುಕಿ ಕೌಶಿಕ್ 4 ವಿಕೆಟ್ ಪಡೆದರೆ, ಅಭಿಲಾಷ್ ಶೆಟ್ಟಿ 3 ವಿಕೆಟ್ ಕಬಳಿಸಿದರು. ಪರಿಣಾಮ ಪಂಜಾಬ್ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 55 ರನ್​ಗಳಿಗೆ ಆಲೌಟ್ ಆಯಿತು.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆಡಿದ ಕರ್ನಾಟಕ ಪರ ಸ್ಮರಣ್ ರವಿಚಂದ್ರನ್ ಚೊಚ್ಚಲ ದ್ವಿಶತಕ ಸಿಡಿಸಿದರು. 277 ಎಸೆತಗಳನ್ನು ಎದುರಿಸಿದ ಸ್ಮರಣ್ 3 ಸಿಕ್ಸ್ ಹಾಗೂ 25 ಫೋರ್​ಗಳೊಂದಿಗೆ 203 ರನ್​ ಬಾರಿಸಿದರು. ಈ ಡಬಲ್ ಸೆಂಚುರಿ ನೆರವಿನಿಂದ ಕರ್ನಾಟಕ ತಂಡವು ಮೊದಲ ಇನಿಂಗ್ಸ್​ನಲ್ಲಿ 475 ರನ್​ಗಳಿಸಿ ಆಲೌಟ್ ಆಯಿತು.

ದ್ವಿತೀಯ ಇನಿಂಗ್ಸ್​:

420 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಪಂಜಾಬ್ ತಂಡವು ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಪ್ರಭ್​ಸಿಮ್ರಾನ್ ಸಿಂಗ್ 1 ರನ್​ಗಳಿಸಿ ಔಟಾದರೆ,  ಆ ಬಳಿಕ ಬಂದ ಅನ್​ಮೋಲ್​ಪ್ರೀತ್ ಸಿಂಗ್ 14 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಒಂದೆಡೆ ಕ್ರೀಸ್ ಕಚ್ಚಿ ಆಡಿದ ಶುಭ್​ಮನ್ ಗಿಲ್ ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದರು. ಅಲ್ಲದೆ ತಂಡದ ಪರ ಏಕಾಂಗಿ ಹೋರಾಟ ನಡೆಸಿ ಸ್ಕೋರ್ ಅನ್ನು 150ರ ಗಡಿದಾಟಿಸಿದರು.

ಇದರ ನಡುವೆ 171 ಎಸೆತಗಳನ್ನು ಎದುರಿಸಿದ ಶುಭ್​​ಮನ್ ಗಿಲ್ 3 ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 102 ರನ್ ಬಾರಿಸಿದರು. ಶತಕ ಬೆನ್ನಲ್ಲೇ ಗಿಲ್ ಅವರನ್ನು ಎಲ್​ಬಿಡಬ್ಲ್ಯೂ ಮಾಡುವಲ್ಲಿ ಶ್ರೇಯಸ್ ಗೋಪಾಲ್ ಯಶಸ್ವಿಯಾದರು.

ಶುಭ್​ಮನ್ ಗಿಲ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು, ಅಂತಿಮವಾಗಿ ಪಂಜಾಬ್ ತಂಡವನ್ನು 213 ರನ್​ಗಳಿಗೆ ಆಲೌಟ್ ಮಾಡಿದರು. ಈ ಮೂಲಕ ಕರ್ನಾಟಕ ತಂಡವು ಇನಿಂಗ್ಸ್ ಹಾಗೂ 207 ರನ್​ಗಳ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಕರ್ನಾಟಕ ತಂಡ ಗ್ರೂಪ್-ಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಈ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿ ಹರ್ಯಾಣ ತಂಡವಿದ್ದು, ದ್ವಿತೀಯ ಸ್ಥಾನದಲ್ಲಿ ಕೇರಳ ತಂಡವಿದೆ. ಇನ್ನು ಬಂಗಾಳ ತಂಡ ಮೂರನೇ ಸ್ಥಾನದಲ್ಲಿದ್ದರೆ, 12 ಅಂಕಗಳೊಂದಿಗೆ ಕರ್ನಾಟಕ 4ನೇ ಸ್ಥಾನ ಅಲಂಕರಿಸಿದೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್) , ಅನೀಶ್ ಕೆ ವಿ , ಸ್ಮರಣ್ ರವಿಚಂದ್ರನ್ , ಅಭಿನವ್ ಮನೋಹರ್ , ಶ್ರೇಯಸ್ ಗೋಪಾಲ್ , ಯಶೋವರ್ಧನ್ ಪರಂತಪ್ , ಪ್ರಸಿದ್ಧ್ ಕೃಷ್ಣ , ವಾಸುಕಿ ಕೌಶಿಕ್ , ಅಭಿಲಾಷ್ ಶೆಟ್ಟಿ.

ಇದನ್ನೂ ಓದಿ: ಟೀಮ್ ಇಂಡಿಯಾ ಆರ್ಭಟಕ್ಕೆ ಪಾಕಿಸ್ತಾನ್ ತಂಡದ ದಾಖಲೆ ಉಡೀಸ್

ಪಂಜಾಬ್ ಪ್ಲೇಯಿಂಗ್ 11: ಶುಭ್​ಮನ್ ಗಿಲ್ (ನಾಯಕ) , ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅನ್ಮೋಲ್ಪ್ರೀತ್ ಸಿಂಗ್ , ಪುಖ್ರಾಜ್ ಮನ್ , ಸನ್ವಿರ್ ಸಿಂಗ್ , ರಮಣದೀಪ್ ಸಿಂಗ್ , ಜಸಿಂದರ್ ಸಿಂಗ್ , ಸುಖದೀಪ್ ಬಾಜ್ವಾ , ಆರಾಧ್ಯ ಶುಕ್ಲಾ , ಮಯಾಂಕ್ ಮಾರ್ಕಾಂಡೆ , ಗುರ್ನೂರ್ ಬ್ರಾರ್.

Follow Us
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು