AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಬಳಿಕ ರಣಜಿಯಲ್ಲೂ ಮುಗ್ಗರಿಸಿದ ಸೂರ್ಯಕುಮಾರ್ ಯಾದವ್

Haryana vs Mumbai, Quarter Final: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹರ್ಯಾಣ ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಮುಂಬೈ ವಿರುದ್ಧ ಹರ್ಯಾಣ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿದ್ದು, ಈ ಮೂಲಕ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಇಕ್ಕಟಿಗೆ ಸಿಲುಕಿದೆ.

ಟಿ20 ಬಳಿಕ ರಣಜಿಯಲ್ಲೂ ಮುಗ್ಗರಿಸಿದ ಸೂರ್ಯಕುಮಾರ್ ಯಾದವ್
Suryakumar Yadav
ಝಾಹಿರ್ ಯೂಸುಫ್
|

Updated on: Feb 08, 2025 | 1:32 PM

Share

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್ ಇದೀಗ ರಣಜಿ ಪಂದ್ಯದಲ್ಲೂ ವಿಫಲರಾಗಿದ್ದಾರೆ. ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿದ ಸೂರ್ಯ ಕೇವಲ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಹರ್ಯಾಣ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರ ಆಯುಷ್ (0) ಮೊದಲ ಓವರ್​ನ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಇನ್ನು ಆಕಾಶ್ ಆನಂದ್ ಕೇವಲ 10 ರನ್ ಮಾತ್ರ ಗಳಿಸಿದರು.

ಸಿದ್ದೇಶ್ ಲಾಡ್ 4 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರೆ, ನಾಯಕ ಅಜಿಂಕ್ಯ ರಹಾನೆ 31 ರನ್​​ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 2 ಫೋರ್ ಬಾರಿಸಿದರೂ 9 ರನ್​ಗಳಿಸಿ ಸುಮಿತ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಸೂರ್ಯ ಸತತ ವೈಫಲ್ಯ:

ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಈ ಸರಣಿಯಲ್ಲಿ 5 ಇನಿಂಗ್ಸ್ ಆಡಿದ್ದ ಸೂರ್ಯ ಕಲೆಹಾಕಿದ್ದು ಕೇವಲ 28 ರನ್​ಗಳು ಮಾತ್ರ. ಇದು 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತೀಯ ಟಾಪ್ ಆರ್ಡರ್ ಬ್ಯಾಟರ್​ರೊಬ್ಬರು ಕಲೆಹಾಕಿದ ಅತ್ಯಂತ ಕನಿಷ್ಠ ಮೊತ್ತ ಎಂಬುದು ವಿಶೇಷ.

ಈ ಕಳಪೆ ಪ್ರದರ್ಶನದ ಹೊರತಾಗಿಯೂ ರಣಜಿ ಟೂರ್ನಿಯಲ್ಲಿ ಮುಂಬೈ ಪರ ಅವಕಾಶ ಪಡೆದ ಸೂರ್ಯಕುಮಾರ್ ಯಾದವ್ ಇದೀಗ ಮೊದಲ ಇನಿಂಗ್ಸ್​ನಲ್ಲಿ ಕೇವಲ 9 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ.

7 ವಿಕೆಟ್ ಕಳೆದುಕೊಂಡ ಮುಂಬೈ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಮುಂಬೈ ತಂಡವು ಕೇವಲ 113 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಶಾರ್ದೂಲ್ ಠಾಕೂರ್ ಹಾಗೂ ತನುಷ್ ಕೋಟ್ಯಾನ್ ಬ್ಯಾಟ್ ಬೀಸುತ್ತಿದ್ದು, 38 ಓವರ್​​ಗಳ ಮುಕ್ತಾಯದ ವೇಳೆಗೆ ಮುಂಬೈ 7 ವಿಕೆಟ್ ಕಳೆದುಕೊಂಡು 137 ರನ್​ ಕಲೆಹಾಕಿದೆ.

ಹರ್ಯಾಣ ಪ್ಲೇಯಿಂಗ್ 11: ಲಕ್ಷ್ಯ ದಲಾಲ್ , ಯಶ್ ವರ್ಧನ್ ದಲಾಲ್ , ಅಂಕಿತ್ ಕುಮಾರ್ (ನಾಯಕ) , ಹಿಮಾಂಶು ರಾಣಾ , ನಿಶಾಂತ್ ಸಿಂಧು , ರೋಹಿತ್ ಪರ್ಮೋದ್ ಶರ್ಮಾ ( ವಿಕೆಟ್ ಕೀಪರ್ ) , ಜಯಂತ್ ಯಾದವ್ , ಸುಮಿತ್ ಕುಮಾರ್ , ಅನ್ಶುಲ್ ಕಾಂಬೋಜ್ , ಅನುಜ್ ಥಕ್ರಾಲ್ , ಅಜಿತ್ ಚಹಲ್.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಮುಂಬೈ ಪ್ಲೇಯಿಂಗ್ 11: ಆಯುಷ್ ಮ್ಹಾತ್ರೆ , ಆಕಾಶ್ ಆನಂದ್ ( ವಿಕೆಟ್ ಕೀಪರ್ ) , ಸಿದ್ಧೇಶ್ ಲಾಡ್ , ಅಜಿಂಕ್ಯ ರಹಾನೆ ( ನಾಯಕ ) , ಸೂರ್ಯಕುಮಾರ್ ಯಾದವ್ , ಶಿವಂ ದುಬೆ , ಶಮ್ಸ್ ಮುಲಾನಿ , ಶಾರ್ದೂಲ್ ಠಾಕೂರ್ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ತಿ , ರಾಯ್ಸ್​ಟನ್ ಡಯಾಸ್.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!