AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ಬಳಿಕ ರಣಜಿಯಲ್ಲೂ ಮುಗ್ಗರಿಸಿದ ಸೂರ್ಯಕುಮಾರ್ ಯಾದವ್

Haryana vs Mumbai, Quarter Final: ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹರ್ಯಾಣ ತಂಡವು ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಮುಂಬೈ ವಿರುದ್ಧ ಹರ್ಯಾಣ ಬೌಲರ್​ಗಳು ಕರಾರುವಾಕ್ ದಾಳಿ ಸಂಘಟಿಸಿದ್ದು, ಈ ಮೂಲಕ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಇಕ್ಕಟಿಗೆ ಸಿಲುಕಿದೆ.

ಟಿ20 ಬಳಿಕ ರಣಜಿಯಲ್ಲೂ ಮುಗ್ಗರಿಸಿದ ಸೂರ್ಯಕುಮಾರ್ ಯಾದವ್
Suryakumar Yadav
ಝಾಹಿರ್ ಯೂಸುಫ್
|

Updated on: Feb 08, 2025 | 1:32 PM

Share

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸೂರ್ಯಕುಮಾರ್ ಯಾದವ್ ಇದೀಗ ರಣಜಿ ಪಂದ್ಯದಲ್ಲೂ ವಿಫಲರಾಗಿದ್ದಾರೆ. ರಣಜಿ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿದ ಸೂರ್ಯ ಕೇವಲ 9 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಹರ್ಯಾಣ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಬ್ಯಾಟಿಂಗ್ ಆಯ್ದುಕೊಂಡಿತು.

ಅದರಂತೆ ಇನಿಂಗ್ಸ್ ಆರಂಭಿಸಿದ ಮುಂಬೈ ತಂಡವು ಆರಂಭಿಕ ಆಘಾತಕ್ಕೆ ಒಳಗಾಯಿತು. ಆರಂಭಿಕ ಆಟಗಾರ ಆಯುಷ್ (0) ಮೊದಲ ಓವರ್​ನ ಮೊದಲ ಎಸೆತದಲ್ಲೇ ಕ್ಲೀನ್ ಬೌಲ್ಡ್ ಆದರು. ಇನ್ನು ಆಕಾಶ್ ಆನಂದ್ ಕೇವಲ 10 ರನ್ ಮಾತ್ರ ಗಳಿಸಿದರು.

ಸಿದ್ದೇಶ್ ಲಾಡ್ 4 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿದರೆ, ನಾಯಕ ಅಜಿಂಕ್ಯ ರಹಾನೆ 31 ರನ್​​ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ 2 ಫೋರ್ ಬಾರಿಸಿದರೂ 9 ರನ್​ಗಳಿಸಿ ಸುಮಿತ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಸೂರ್ಯ ಸತತ ವೈಫಲ್ಯ:

ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಈ ಸರಣಿಯಲ್ಲಿ 5 ಇನಿಂಗ್ಸ್ ಆಡಿದ್ದ ಸೂರ್ಯ ಕಲೆಹಾಕಿದ್ದು ಕೇವಲ 28 ರನ್​ಗಳು ಮಾತ್ರ. ಇದು 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತೀಯ ಟಾಪ್ ಆರ್ಡರ್ ಬ್ಯಾಟರ್​ರೊಬ್ಬರು ಕಲೆಹಾಕಿದ ಅತ್ಯಂತ ಕನಿಷ್ಠ ಮೊತ್ತ ಎಂಬುದು ವಿಶೇಷ.

ಈ ಕಳಪೆ ಪ್ರದರ್ಶನದ ಹೊರತಾಗಿಯೂ ರಣಜಿ ಟೂರ್ನಿಯಲ್ಲಿ ಮುಂಬೈ ಪರ ಅವಕಾಶ ಪಡೆದ ಸೂರ್ಯಕುಮಾರ್ ಯಾದವ್ ಇದೀಗ ಮೊದಲ ಇನಿಂಗ್ಸ್​ನಲ್ಲಿ ಕೇವಲ 9 ರನ್​ಗಳಿಸಿ ನಿರಾಸೆ ಮೂಡಿಸಿದ್ದಾರೆ.

7 ವಿಕೆಟ್ ಕಳೆದುಕೊಂಡ ಮುಂಬೈ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿರುವ ಮುಂಬೈ ತಂಡವು ಕೇವಲ 113 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಶಾರ್ದೂಲ್ ಠಾಕೂರ್ ಹಾಗೂ ತನುಷ್ ಕೋಟ್ಯಾನ್ ಬ್ಯಾಟ್ ಬೀಸುತ್ತಿದ್ದು, 38 ಓವರ್​​ಗಳ ಮುಕ್ತಾಯದ ವೇಳೆಗೆ ಮುಂಬೈ 7 ವಿಕೆಟ್ ಕಳೆದುಕೊಂಡು 137 ರನ್​ ಕಲೆಹಾಕಿದೆ.

ಹರ್ಯಾಣ ಪ್ಲೇಯಿಂಗ್ 11: ಲಕ್ಷ್ಯ ದಲಾಲ್ , ಯಶ್ ವರ್ಧನ್ ದಲಾಲ್ , ಅಂಕಿತ್ ಕುಮಾರ್ (ನಾಯಕ) , ಹಿಮಾಂಶು ರಾಣಾ , ನಿಶಾಂತ್ ಸಿಂಧು , ರೋಹಿತ್ ಪರ್ಮೋದ್ ಶರ್ಮಾ ( ವಿಕೆಟ್ ಕೀಪರ್ ) , ಜಯಂತ್ ಯಾದವ್ , ಸುಮಿತ್ ಕುಮಾರ್ , ಅನ್ಶುಲ್ ಕಾಂಬೋಜ್ , ಅನುಜ್ ಥಕ್ರಾಲ್ , ಅಜಿತ್ ಚಹಲ್.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಮುಂಬೈ ಪ್ಲೇಯಿಂಗ್ 11: ಆಯುಷ್ ಮ್ಹಾತ್ರೆ , ಆಕಾಶ್ ಆನಂದ್ ( ವಿಕೆಟ್ ಕೀಪರ್ ) , ಸಿದ್ಧೇಶ್ ಲಾಡ್ , ಅಜಿಂಕ್ಯ ರಹಾನೆ ( ನಾಯಕ ) , ಸೂರ್ಯಕುಮಾರ್ ಯಾದವ್ , ಶಿವಂ ದುಬೆ , ಶಮ್ಸ್ ಮುಲಾನಿ , ಶಾರ್ದೂಲ್ ಠಾಕೂರ್ , ತನುಷ್ ಕೋಟ್ಯಾನ್ , ಮೋಹಿತ್ ಅವಸ್ತಿ , ರಾಯ್ಸ್​ಟನ್ ಡಯಾಸ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!