AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025: ಸೆಮಿಫೈನಲ್​ಗೇರಿದ ಮೂರು ತಂಡಗಳು

RANJI TROPHY 2025: ರಣಜಿ ಟ್ರೋಫಿ 2025ರ ಪಂದ್ಯಗಳು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಸೆಮಿ ಫೈನಲ್ ಸುತ್ತಿಗೆ ಒಟ್ಟು 3 ತಂಡಗಳು ಅರ್ಹತೆ ಪಡೆದುಕೊಂಡಿದೆ. ಈ ತಂಡಗಳು ಫೆಬ್ರವರಿ 17 ರಿಂದ ಶುರುವಾಗಲಿರುವ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಅಲ್ಲದೆ ಸೆಮಿಫೈನಲ್​ನಲ್ಲಿ ಗೆಲ್ಲುವ 2 ತಂಡಗಳು ಫೆಬ್ರವರಿ 26 ರಂದು ಜರುಗಲಿರುವ ಅಂತಿಮ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ.

Ranji Trophy 2025: ಸೆಮಿಫೈನಲ್​ಗೇರಿದ ಮೂರು ತಂಡಗಳು
Ranji Trophy 2025
ಝಾಹಿರ್ ಯೂಸುಫ್
|

Updated on: Feb 12, 2025 | 7:12 AM

Share

ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ತಲುಪಿದೆ. ನಾಕೌಟ್ ಸುತ್ತಿನಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಮೂರು ತಂಡಗಳು ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ. ಎರಡನೇ ಕ್ವಾರ್ಟರ್ ಫೈನಲ್​ನಲ್ಲಿ ತಮಿಳುನಾಡು ತಂಡವನ್ನು ಮಣಿಸಿ ವಿದರ್ಭ ತಂಡದ ಸೆಮಿಫೈನಲ್​ ಹಂತಕ್ಕೇರಿದರೆ, ಮೂರನೇ ಕ್ವಾರ್ಟರ್ ಫೈನಲ್​ನಲ್ಲಿ ಹರ್ಯಾಣ ವಿರುದ್ಧ ಮುಂಬೈ ಜಯ ಸಾಧಿಸಿದೆ. ಇನ್ನು ಕ್ವಾರ್ಟರ್ ಫೈನಲ್​ನಲ್ಲಿ ಸೌರಾಷ್ಟ್ರ ವಿರುದ್ಧ ಗುಜರಾತ್ ತಂಡವು ಜಯಭೇರಿ ಬಾರಿಸಿದೆ.

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಗ್ರೌಂಡ್​ನಲ್ಲಿ ನಡೆದ ಎರಡನೇ ಕ್ವಾರ್ಟರ್ ಫೈನಲ್​ನಲ್ಲಿ ತಮಿಳುನಾಡು ತಂಡವನ್ನು 198 ರನ್​ಗಳಿಂದ ಮಣಿಸಿ ವಿದರ್ಭ ಮುಂದಿನ ಹಂತಕ್ಕೇರಿದೆ. ಈ ಪಂದ್ಯದಲ್ಲಿ 122 ರನ್​ಗಳ ಭರ್ಜರಿ ಶತಕ ಸಿಡಿಸಿದ ವಿದರ್ಭ ತಂಡದ ನಾಯಕ ಕರುಣ್ ನಾಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹರ್ಯಾಣ ತಂಡವನ್ನು ಮುಂಬೈ 152 ರನ್​ಗಳಿಂದ ಮಣಿಸಿದೆ. ಈ ಮ್ಯಾಚ್​ನಲ್ಲಿ ಒಟ್ಟು 9 ವಿಕೆಟ್​ ಕಬಳಿಸಿ ಮಿಂಚಿದ್ದ ಶಾರ್ದೂಲ್ ಠಾಕೂರ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ಜರುಗಿದ ನಾಲ್ಕನೇ ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಗುಜರಾತ್ ಇನಿಂಗ್ಸ್​ ಹಾಗೂ 98 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಶತಕ ಸಿಡಿಸಿದ ಜಯಮೀತ್ ಪಟೇಲ್ (103) ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಕೇರಳ ಮತ್ತು ಜಮ್ಮು ಕಾಶ್ಮೀರ ನಡುವೆ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಮುಂದುವರೆದಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸಲು ಕೇರಳ ತಂಡಕ್ಕೆ ಇನ್ನೂ 299 ರನ್​ಗಳ ಅವಶ್ಯಕತೆಯಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನಾಲ್ಕನೇ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ.

ರಣಜಿ ಟೂರ್ನಿ ಸೆಮಿಫೈನಲ್ ವೇಳಾಪಟ್ಟಿ:

  • ಫೆಬ್ರವರಿ 17: ಗುಜರಾತ್ vs TBC
  • ಫೆಬ್ರವರಿ 17: ವಿದರ್ಭ vs ಮುಂಬೈ
  • ಫೆಬ್ರವರಿ 26: ಫೈನಲ್ ಪಂದ್ಯ
Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ