AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2025: ಸೆಮಿಫೈನಲ್​ಗೇರಿದ ಮೂರು ತಂಡಗಳು

RANJI TROPHY 2025: ರಣಜಿ ಟ್ರೋಫಿ 2025ರ ಪಂದ್ಯಗಳು ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ಸೆಮಿ ಫೈನಲ್ ಸುತ್ತಿಗೆ ಒಟ್ಟು 3 ತಂಡಗಳು ಅರ್ಹತೆ ಪಡೆದುಕೊಂಡಿದೆ. ಈ ತಂಡಗಳು ಫೆಬ್ರವರಿ 17 ರಿಂದ ಶುರುವಾಗಲಿರುವ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಲಿದೆ. ಅಲ್ಲದೆ ಸೆಮಿಫೈನಲ್​ನಲ್ಲಿ ಗೆಲ್ಲುವ 2 ತಂಡಗಳು ಫೆಬ್ರವರಿ 26 ರಂದು ಜರುಗಲಿರುವ ಅಂತಿಮ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ.

Ranji Trophy 2025: ಸೆಮಿಫೈನಲ್​ಗೇರಿದ ಮೂರು ತಂಡಗಳು
Ranji Trophy 2025
ಝಾಹಿರ್ ಯೂಸುಫ್
|

Updated on: Feb 12, 2025 | 7:12 AM

Share

ರಣಜಿ ಟೂರ್ನಿಯು ಮುಕ್ತಾಯದ ಹಂತಕ್ಕೆ ತಲುಪಿದೆ. ನಾಕೌಟ್ ಸುತ್ತಿನಲ್ಲಿ ನಡೆದ ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ ಮೂರು ತಂಡಗಳು ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ. ಎರಡನೇ ಕ್ವಾರ್ಟರ್ ಫೈನಲ್​ನಲ್ಲಿ ತಮಿಳುನಾಡು ತಂಡವನ್ನು ಮಣಿಸಿ ವಿದರ್ಭ ತಂಡದ ಸೆಮಿಫೈನಲ್​ ಹಂತಕ್ಕೇರಿದರೆ, ಮೂರನೇ ಕ್ವಾರ್ಟರ್ ಫೈನಲ್​ನಲ್ಲಿ ಹರ್ಯಾಣ ವಿರುದ್ಧ ಮುಂಬೈ ಜಯ ಸಾಧಿಸಿದೆ. ಇನ್ನು ಕ್ವಾರ್ಟರ್ ಫೈನಲ್​ನಲ್ಲಿ ಸೌರಾಷ್ಟ್ರ ವಿರುದ್ಧ ಗುಜರಾತ್ ತಂಡವು ಜಯಭೇರಿ ಬಾರಿಸಿದೆ.

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಗ್ರೌಂಡ್​ನಲ್ಲಿ ನಡೆದ ಎರಡನೇ ಕ್ವಾರ್ಟರ್ ಫೈನಲ್​ನಲ್ಲಿ ತಮಿಳುನಾಡು ತಂಡವನ್ನು 198 ರನ್​ಗಳಿಂದ ಮಣಿಸಿ ವಿದರ್ಭ ಮುಂದಿನ ಹಂತಕ್ಕೇರಿದೆ. ಈ ಪಂದ್ಯದಲ್ಲಿ 122 ರನ್​ಗಳ ಭರ್ಜರಿ ಶತಕ ಸಿಡಿಸಿದ ವಿದರ್ಭ ತಂಡದ ನಾಯಕ ಕರುಣ್ ನಾಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೂರನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಹರ್ಯಾಣ ತಂಡವನ್ನು ಮುಂಬೈ 152 ರನ್​ಗಳಿಂದ ಮಣಿಸಿದೆ. ಈ ಮ್ಯಾಚ್​ನಲ್ಲಿ ಒಟ್ಟು 9 ವಿಕೆಟ್​ ಕಬಳಿಸಿ ಮಿಂಚಿದ್ದ ಶಾರ್ದೂಲ್ ಠಾಕೂರ್ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇನ್ನು ರಾಜ್​ಕೋಟ್​ನ ನಿರಂಜನ್ ಶಾ ಮೈದಾನದಲ್ಲಿ ಜರುಗಿದ ನಾಲ್ಕನೇ ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಗುಜರಾತ್ ಇನಿಂಗ್ಸ್​ ಹಾಗೂ 98 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಶತಕ ಸಿಡಿಸಿದ ಜಯಮೀತ್ ಪಟೇಲ್ (103) ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್

ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ಕೇರಳ ಮತ್ತು ಜಮ್ಮು ಕಾಶ್ಮೀರ ನಡುವೆ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಮುಂದುವರೆದಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸಲು ಕೇರಳ ತಂಡಕ್ಕೆ ಇನ್ನೂ 299 ರನ್​ಗಳ ಅವಶ್ಯಕತೆಯಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನಾಲ್ಕನೇ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ.

ರಣಜಿ ಟೂರ್ನಿ ಸೆಮಿಫೈನಲ್ ವೇಳಾಪಟ್ಟಿ:

  • ಫೆಬ್ರವರಿ 17: ಗುಜರಾತ್ vs TBC
  • ಫೆಬ್ರವರಿ 17: ವಿದರ್ಭ vs ಮುಂಬೈ
  • ಫೆಬ್ರವರಿ 26: ಫೈನಲ್ ಪಂದ್ಯ
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?