AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 9 ಬ್ಯಾಟ್ಸ್​ಮನ್​ಗಳು ಅರ್ಧಶತಕ: ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ

Ranji Trophy: ಬೆಂಗಾಲ್ ರಣಜಿ ತಂಡ: ಅಭಿಮನ್ಯು ಈಶ್ವರನ್ (ನಾಯಕ) , ಅಭಿಷೇಕ್ ರಾಮನ್ , ಅಭಿಷೇಕ್ ಪೊರೆಲ್ ( ​​ವಿಕೆಟ್ ಕೀಪರ್ ) , ಆಕಾಶ್ ದೀಪ್ , ಅನುಸ್ತುಪ್ ಮಜುಂದಾರ್ , ಇಶಾನ್ ಪೊರೆಲ್.

Ranji Trophy: 9 ಬ್ಯಾಟ್ಸ್​ಮನ್​ಗಳು ಅರ್ಧಶತಕ: ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 09, 2022 | 2:28 PM

Share

ಕ್ರಿಕೆಟ್ ಅಂಗಳದಲ್ಲಿ ದಾಖಲೆಗಳು ಶಾಶ್ವತವಲ್ಲ. ಆದರೆ ಕೆಲವೊಂದು ದಾಖಲೆಗಳನ್ನು ಮುರಿಯುವುದು ಕಷ್ಟಸಾಧ್ಯ ಎನ್ನಲಾಗುತ್ತದೆ. ಅಂತಹದೊಂದು ದಾಖಲೆ ಮುರಿದು ಇತಿಹಾಸ ನಿರ್ಮಿಸಿದ್ದಾರೆ ಬೆಂಗಾಲ್ ತಂಡ. ದೇಶೀಯ ಅಂಗಳದಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಬೆಂಗಾಲ್ ಹಾಗೂ ಜಾರ್ಖಂಡ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಾರ್ಖಂಡ್ ಬೌಲಿಂಗ್ ಆಯ್ದುಕೊಂಡಿತು. ಇತ್ತ ಇನಿಂಗ್ಸ್ ಆರಂಭಿಸಿದ ಬೆಂಗಾಲ್ ಬ್ಯಾಟ್ಸ್​ಮನ್ ಜಾರ್ಖಂಡ್ ನಾಯಕನ ನಿರ್ಧಾರ ತಪ್ಪು ಎಂಬುದನ್ನು ಮೊದಲ ಸೆಷನ್​ನಲ್ಲೇ ನಿರೂಪಿಸಿದ್ದರು.

ಏಕೆಂದರೆ ಆರಂಭಿಕರಾಗಿ ಕಣಕ್ಕಿಳಿದ ಅಭಿಮನ್ಯು ಈಶ್ವರನ್ ಹಾಗೂ ಅಭಿಷೇಕ್ ರಾಮನ್ ಮೊದಲ ವಿಕೆಟ್​ಗೆ 132 ರನ್​ಗಳ ಜೊತೆಯಾಟವಾಡಿದ್ದರು. ಈ ಹಂತದಲ್ಲಿ ಅಭಿಮನ್ಯು 65 ರನ್​ಗಳಿಸಿ ಔಟಾದರೆ, ಆ ಬಳಿಕ ಬಂದ ಸುದೀಪ್ ಘರಾಮಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಮತ್ತೊಂದೆಡೆ ಆರಂಭಿಕ ಆಟಗಾರ ಅಭಿಷೇಕ್ ರಾಮನ್ 61 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಆಡಿದ ಮಜುಂದಾರ್ ಕೂಡ ಭರ್ಜರಿ ಶತಕ ಸಿಡಿಸಿದರು. ಇನ್ನು ಪಶ್ಚಿಮ ಬಂಗಾಳ ಕ್ರೀಡಾ ಸಚಿವ ಮನೋಜ್ ತಿವಾರಿ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 73 ರನ್ ಸಿಡಿಸಿದರು. ಆ ಬಳಿಕ ಬಂದ ಅಭಿಷೇಕ್ ಪೊರೆಲ್ 68 ರನ್​ ಬಾರಿಸಿದ್ದರು. ಇನ್ನು 7ನೇ ಬೆಂಗಾಲ್​ ಪರ ಕ್ರಮಾಂಕದಲ್ಲಿ ಆಡಿದ ಆರ್​ಸಿಬಿ ಆಟಗಾರ ಶಹಬಾಜ್ ಅಹ್ಮದ್ 78 ರನ್ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಆಡಿದ ಸಯಾನ್ ಮೊಂಡಲ್ ಅಜೇಯ 53 ರನ್​ಗಳಿಸಿದರು.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ವಿಶೇಷ ಎಂದರೆ 9ನೇ ಕ್ರಮಾಂಕದಲ್ಲಿ ಆಡಿದ ಮತ್ತೋರ್ವ ಆರ್​ಸಿಬಿ ಆಟಗಾರ ಆಕಾಶ್ ದೀಪ್ 8 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ಕೇವಲ 18 ಎಸೆತಗಳಲ್ಲಿ ಅಜೇಯ 53 ರನ್​ ಚಚ್ಚಿದರು. ಪರಿಣಾಮ ಬೆಂಗಾಲ್ ತಂಡದ ಮೊತ್ತವು 7 ವಿಕೆಟ್​ ನಷ್ಟಕ್ಕೆ 773 ರನ್​ಗೆ ಬಂದು ನಿಂತಿತು. ಈ ಹಂತದಲ್ಲಿ ತಂಡದ ನಾಯಕ ಅಭಿಮನ್ಯು ಈಶ್ವರನ್ ಡಿಕ್ಲೇರ್ ಘೋಷಿಸಿದರು.

ಅಂದರೆ ಬೆಂಗಾಲ್ ಪರ ಬ್ಯಾಟ್​ ಬೀಸಿದ 9 ಆಟಗಾರರು ಕೂಡ 50+ ರನ್​ಗಳಿಸಿದ್ದು ವಿಶೇಷ. ಇವರಲ್ಲಿ ಸುದೀಪ್ ಘರಾಮಿ (186) ಹಾಗೂ ಅನುಸ್ತಪ್ ಮಜುಂದಾರ್ (117) ಶತಕ ಬಾರಿಸಿದರೆ, ಉಳಿದ 7 ಆಟಗಾರರು ಅರ್ಧಶತಕ ಬಾರಿಸಿದ್ದರು. ಈ ಮೂಲಕ ಕ್ರಿಕೆಟ್​ ಇತಿಹಾಸದಲ್ಲೇ ಒಂದು ತಂಡದ ಪರ 9 ಬ್ಯಾಟ್ಸ್​ಮನ್​ಗಳು 50+ ರನ್​ಗಳಿಸಿದ ವಿಶೇಷ ದಾಖಲೆಯನ್ನು ಬೆಂಗಾಲ್ ತಂಡ ಬರೆದಿದೆ.

ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಆಸ್ಟ್ರೇಲಿಯಾ ಅಂಗಳದಲ್ಲಿ ಮೂಡಿಬಂದಿತ್ತು. ಅಂದು ಕೇಂಬ್ರಿಡ್ಜ್ ವಿವಿ ವಿರುದ್ಧ ಆಸ್ಟ್ರೇಲಿಯಾ ಪ್ರವಾಸಿ ತಂಡದ ಎಂಟು ಆಟಗಾರರು ಅರ್ಧಶತಕಗಳನ್ನು ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ ಬರೋಬ್ಬರಿ 129 ವರ್ಷಗಳ ಬಳಿಕ ಬೆಂಗಾಲ್​ ತಂಡದ 9 ಬ್ಯಾಟ್ಸ್​ಮನ್​ಗಳು ಅರ್ಧಶತಕಗಳನ್ನು (50+) ಬಾರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ.

ಬೆಂಗಾಲ್ ರಣಜಿ ತಂಡ: ಅಭಿಮನ್ಯು ಈಶ್ವರನ್ (ನಾಯಕ) , ಅಭಿಷೇಕ್ ರಾಮನ್ , ಅಭಿಷೇಕ್ ಪೊರೆಲ್ ( ​​ವಿಕೆಟ್ ಕೀಪರ್ ) , ಆಕಾಶ್ ದೀಪ್ , ಅನುಸ್ತುಪ್ ಮಜುಂದಾರ್ , ಇಶಾನ್ ಪೊರೆಲ್ , ಮನೋಜ್ ತಿವಾರಿ , ಮುಖೇಶ್ ಕುಮಾರ್ , ಶಹಬಾಜ್ ಅಹ್ಮದ್ , ಸುದೀಪ್ ಕುಮಾರ್ ಘರಾಮಿ , ಸಯನ್ ಮೊಂಡಲ್

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ