AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 10 ವಿಕೆಟ್ ಪಡೆದ 33 ವರ್ಷದ ಬೌಲರ್! ಗೆಲುವಿನೊಂದಿಗೆ ಶುಭಾರಂಭ ಮಾಡಿದ ಜಮ್ಮು ಮತ್ತು ಕಾಶ್ಮೀರ

Ranji Trophy: ಜಮ್ಮು ಮತ್ತು ಕಾಶ್ಮೀರದ ಗೆಲುವಿನಲ್ಲಿ 33 ವರ್ಷದ ಸ್ಪಿನ್ನರ್ ಪರ್ವೇಜ್ ರಸೂಲ್ 85 ರನ್‌ಗಳಿಗೆ 10 ಬ್ಯಾಟ್ಸ್‌ಮನ್‌ಗಳನ್ನು ಬಲಿಪಶು ಮಾಡಿದರು.

Ranji Trophy: 10 ವಿಕೆಟ್ ಪಡೆದ 33 ವರ್ಷದ ಬೌಲರ್! ಗೆಲುವಿನೊಂದಿಗೆ ಶುಭಾರಂಭ ಮಾಡಿದ ಜಮ್ಮು ಮತ್ತು ಕಾಶ್ಮೀರ
ಜಮ್ಮು ಮತ್ತು ಕಾಶ್ಮೀರ ತಂಡ
TV9 Web
| Edited By: |

Updated on: Feb 20, 2022 | 3:05 PM

Share

ರಣಜಿ ಟ್ರೋಫಿ (Ranji Trophy)ಯಲ್ಲಿ ತಂಡಗಳ ಪ್ರದರ್ಶನದ ಫಲಿತಾಂಶಗಳು ಬರಲಾರಂಭಿಸಿವೆ. ಈ ಸಂಚಿಕೆಯಲ್ಲಿ ಜಮ್ಮು ಮತ್ತು ಕಾಶ್ಮೀರ (Jammu and Kashmir)ಕೂಡ ಪ್ರಬಲ ಗೆಲುವಿನೊಂದಿಗೆ ಟೂರ್ನಿಯಲ್ಲಿ ತನ್ನ ಪಯಣ ಆರಂಭಿಸಿದೆ. ಜಮ್ಮು ಮತ್ತು ಕಾಶ್ಮೀರ ತಮ್ಮ ಮೊದಲ ಪಂದ್ಯದಲ್ಲಿ ಪುದುಚೇರಿ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ ಶುಭಾರಂಭ ಮಾಡಿದೆ. ಅಂದಹಾಗೆ, ಜಮ್ಮು ಮತ್ತು ಕಾಶ್ಮೀರದ ಈ ದೊಡ್ಡ ಗೆಲುವಿಗೆ ತಂಡದ 33ರ ಹರೆಯದ ಬೌಲರ್ ಪರ್ವೇಜ್ ರಸೂಲ್ ಕಾರಣ. ಈ ಪಂದ್ಯದಲ್ಲಿ ಅವರು 10 ವಿಕೆಟ್ ಕಬಳಿಸುವ ಮೂಲಕ ಪುದುಚೇರಿ ಸೋಲಿಗೆ ಪ್ರಮುಖ ಕಾರಣರಾದರು. ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಎದುರು ಪುದುಚೇರಿ 42 ರನ್‌ಗಳ ಗುರಿಯನ್ನು ನೀಡಿದ್ದು, ಅದನ್ನು 2 ವಿಕೆಟ್ ಕಳೆದುಕೊಂಡು ಸಾಧಿಸಿದೆ. ಪರ್ವೇಜ್ ರಸೂಲ್ ನೇತೃತ್ವದ J&K ತಂಡದ ಬೌಲಿಂಗ್, ಎರಡನೇ ಇನ್ನಿಂಗ್ಸ್‌ನಲ್ಲಿ ಪುದುಚೇರಿ ಬ್ಯಾಟ್ಸ್‌ಮನ್‌ಗಳಿಗೆ ರನ್​ ಗಳಿಸಲು ಕಷ್ಟಪಡುವಂತೆ ಮಾಡಿತು.

ಜಮ್ಮು ಮತ್ತು ಕಾಶ್ಮೀರಕ್ಕೆ 8 ವಿಕೆಟ್‌ಗಳ ಜಯ

ಪಿಕೆ ಡೋಗ್ರಾ ಅವರ ಶತಕದ ನೆರವಿನಿಂದ ಪುದುಚೇರಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 343 ರನ್ ಗಳಿಸಿತು. ಉತ್ತರವಾಗಿ ಜಮ್ಮು ಮತ್ತು ಕಾಶ್ಮೀರ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 426 ರನ್ ಗಳಿಸಿ ಪುದುಚೇರಿ ವಿರುದ್ಧ 83 ರನ್ ಮುನ್ನಡೆ ಸಾಧಿಸಿತು. ಜಮ್ಮು ಮತ್ತು ಕಾಶ್ಮೀರದಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಅಬ್ದುಲ್ ಸಮದ್ ತ್ವರಿತ ಶತಕ ಗಳಿಸಿದರು.

ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಆಡಿದ ಪುದುಚೇರಿ ಕೇವಲ 124 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಗೆಲ್ಲಲು 42 ರನ್‌ಗಳ ಸರಳ ಗುರಿ ಸಿಕ್ಕಿತು. ಈ ಗೆಲುವಿನ ಗುರಿಯನ್ನು ಜಮ್ಮು ತಂಡ 2 ವಿಕೆಟ್ ಕಳೆದುಕೊಂಡು 8 ವಿಕೆಟ್ ಗಳಿಂದ ಗೆದ್ದುಕೊಂಡಿತು.

ರಸೂಲ್​ಗೆ 10 ವಿಕೆಟ್

ಜಮ್ಮು ಮತ್ತು ಕಾಶ್ಮೀರದ ಗೆಲುವಿನಲ್ಲಿ 33 ವರ್ಷದ ಸ್ಪಿನ್ನರ್ ಪರ್ವೇಜ್ ರಸೂಲ್ 85 ರನ್‌ಗಳಿಗೆ 10 ಬ್ಯಾಟ್ಸ್‌ಮನ್‌ಗಳನ್ನು ಬಲಿಪಶು ಮಾಡಿದರು. ಇದರಲ್ಲಿ ಅವರು ಮೊದಲ ಇನ್ನಿಂಗ್ಸ್‌ನಲ್ಲಿ 56 ರನ್‌ಗಳಿಗೆ 4 ವಿಕೆಟ್ ಪಡೆದರು. ನಂತರ 2ನೇ ಇನ್ನಿಂಗ್ಸ್​ನಲ್ಲಿ 29 ರನ್ ನೀಡಿ 6 ಬ್ಯಾಟ್ಸ್‌ಮನ್‌ಗಳಿಗೆ ಪೆವಿಲಿಯನ್ ಹಾದಿ ತೋರಿಸಿದರು.

ಪರ್ವೇಜ್ ರಸೂಲ್ ಹೊರತುಪಡಿಸಿ, ಭಾರತದ ವೇಗದ ಬೌಲರ್ ಉಮ್ರಾನ್ ಮಲಿಕ್ ತಂಡದ ಎರಡನೇ ಯಶಸ್ವಿ ಬೌಲರ್ ಆದರು. ಮೊದಲ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಸೇರಿದಂತೆ ಪಂದ್ಯದಲ್ಲಿ 4 ವಿಕೆಟ್ ಪಡೆದರು. ಅಬ್ದುಲ್ ಸಮದ್ ಅವರಂತೆ, ಉಮ್ರಾನ್ ಮಲಿಕ್ ಕೂಡ ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದಾರೆ. ಫ್ರಾಂಚೈಸಿ ಅವರನ್ನು 4 ಕೋಟಿ ರೂ.ಗೆ ಉಳಿಸಿಕೊಂಡಿದೆ. ಪರ್ವೇಜ್ ರಸೂಲ್ ಕೂಡ ಐಪಿಎಲ್‌ನಲ್ಲಿ ಸನ್‌ರೈಸರ್ಸ್ ಪರ ಆಡಿದ್ದಾರೆ. ಆದರೆ, ಅವರು ಈ ಬಾರಿಯ ಐಪಿಎಲ್‌ನಲ್ಲಿ ಆಡುವುದಿಲ್ಲ.

ಇದನ್ನೂ ಓದಿ:Ranji Trophy: ರಣಜಿ ಟ್ರೋಫಿ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್​ಗಳು ಯಾರು ಗೊತ್ತಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ