AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಜಮ್ಮು-ಕಾಶ್ಮೀರ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ

Ranji Trophy 2022: ಕರ್ನಾಟಕ ಪರ ಪ್ರಸಿದ್ಧ್ ಕೃಷ್ಣ ಮೊದಲ ಇನಿಂಗ್ಸ್​ನಲ್ಲಿ ಕೇವಲ 35 ರನ್​ ನೀಡಿ 6 ವಿಕೆಟ್ ಪಡೆದರೆ, 2ನೇ ಇನಿಂಗ್ಸ್​ನಲ್ಲಿ 59 ರನ್​ ನೀಡಿ 4 ವಿಕೆಟ್ ಉರುಳಿಸಿದರು.

Ranji Trophy: ಜಮ್ಮು-ಕಾಶ್ಮೀರ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ
Karnataka Team
TV9 Web
| Edited By: |

Updated on: Feb 27, 2022 | 3:01 PM

Share

ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಜಮ್ಮು-ಕಾಶ್ಮೀರ ವಿರುದ್ದ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಕರುಣ್ ನಾಯರ್ (175) ಅವರ ಶತಕದ ನೆರವಿನಿಂದ ಜಮ್ಮು-ಕಾಶ್ಮೀರಕ್ಕೆ 302 ರನ್‌ಗಳ ಬೃಹತ್ ಗುರಿ ನೀಡಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಜಮ್ಮು-ಕಾಶ್ಮೀರ ತಂಡವು ಪ್ರಸಿದ್ಧ್ ಕೃಷ್ಣ ಅವರ ಮಾರಕ ದಾಳಿಗೆ ತತ್ತರಿಸಿತು. ಅದರಂತೆ ಮೊದಲು ಇನಿಂಗ್ಸ್​​ನಲ್ಲಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಕರ್ನಾಟಕ ತಂಡವು 3 ವಿಕೆಟ್ ನಷ್ಟಕ್ಕೆ 298 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

2ನೇ ಇನಿಂಗ್ಸ್​ನಲ್ಲಿ ಮೊದಲ ಇನಿಂಗ್ಸ್​ನ ಹಿನ್ನಡೆಯೊಂದಿಗೆ 508 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಜಮ್ಮು-ಕಾಶ್ಮೀರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ನಾಯಕ ಇಯಾನ್ ದೇವ್ ಸಿಂಗ್ ಶತಕ ಸಿಡಿಸಿ 110 ರನ್ ಗಳಿಸಿದರೆ, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಫಾಜಿಲ್ ರಶೀದ್ 65 ರನ್ ಗಳಿಸಿದರು. ಇವರಲ್ಲದೆ ಅಬ್ದುಲ್ ಸಮದ್ 70 ರನ್ ಮತ್ತು ಪರ್ವೇಜ್ ರಸೂಲ್ 46 ರನ್ ಗಳಿಸಿದರು. ಇದಾಗ್ಯೂ 390 ರನ್​ಗಳಿಗೆ ಆಲೌಟ್ ಆಗುವ ಮೂಲಕ 117 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಕರ್ನಾಟಕ ಪರ ಪ್ರಸಿದ್ಧ್ ಕೃಷ್ಣ ಮೊದಲ ಇನಿಂಗ್ಸ್​ನಲ್ಲಿ ಕೇವಲ 35 ರನ್​ ನೀಡಿ 6 ವಿಕೆಟ್ ಪಡೆದರೆ, 2ನೇ ಇನಿಂಗ್ಸ್​ನಲ್ಲಿ 59 ರನ್​ ನೀಡಿ 4 ವಿಕೆಟ್ ಉರುಳಿಸಿದರು. ಇನ್ನು ಮೊದಲ ಇನಿಂಗ್ಸ್​ನಲ್ಲಿ 175 ರನ್​ ಬಾರಿಸಿದ್ದ ಕರುಣ್ ನಾಯರ್ 2ನೇ ಇನಿಂಗ್ಸ್​ನಲ್ಲಿ 71 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ಕರುಣ್ ನಾಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

ಇನ್ನು ಕರ್ನಾಟಕ ತಂಡ ರೈಲ್ವೇಸ್ ವಿರುದ್ದ ಆಡಿದ ಮೊದಲ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು. ಇದೀಗ ಜಮ್ಮು-ಕಾಶ್ಮೀರ ವಿರುದ್ದ ಜಯ ಸಾಧಿಸುವ ಮೂಲಕ ರಣಜಿ ಸೀಸನ್ 2022 ರಲ್ಲಿ ಕರ್ನಾಟಕ ಮೊದಲ ಗೆಲುವು ದಾಖಲಿಸಿದೆ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(Ranji Trophy: Karnataka beat Jammu Kashmir)

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ