AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: ಜಮ್ಮು-ಕಾಶ್ಮೀರ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ

Ranji Trophy 2022: ಕರ್ನಾಟಕ ಪರ ಪ್ರಸಿದ್ಧ್ ಕೃಷ್ಣ ಮೊದಲ ಇನಿಂಗ್ಸ್​ನಲ್ಲಿ ಕೇವಲ 35 ರನ್​ ನೀಡಿ 6 ವಿಕೆಟ್ ಪಡೆದರೆ, 2ನೇ ಇನಿಂಗ್ಸ್​ನಲ್ಲಿ 59 ರನ್​ ನೀಡಿ 4 ವಿಕೆಟ್ ಉರುಳಿಸಿದರು.

Ranji Trophy: ಜಮ್ಮು-ಕಾಶ್ಮೀರ ವಿರುದ್ದ ಕರ್ನಾಟಕಕ್ಕೆ ಭರ್ಜರಿ ಜಯ
Karnataka Team
TV9 Web
| Updated By: ಝಾಹಿರ್ ಯೂಸುಫ್|

Updated on: Feb 27, 2022 | 3:01 PM

Share

ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡವು ಜಮ್ಮು-ಕಾಶ್ಮೀರ ವಿರುದ್ದ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಕರುಣ್ ನಾಯರ್ (175) ಅವರ ಶತಕದ ನೆರವಿನಿಂದ ಜಮ್ಮು-ಕಾಶ್ಮೀರಕ್ಕೆ 302 ರನ್‌ಗಳ ಬೃಹತ್ ಗುರಿ ನೀಡಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಜಮ್ಮು-ಕಾಶ್ಮೀರ ತಂಡವು ಪ್ರಸಿದ್ಧ್ ಕೃಷ್ಣ ಅವರ ಮಾರಕ ದಾಳಿಗೆ ತತ್ತರಿಸಿತು. ಅದರಂತೆ ಮೊದಲು ಇನಿಂಗ್ಸ್​​ನಲ್ಲಿ ಕೇವಲ 93 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಕರ್ನಾಟಕ ತಂಡವು 3 ವಿಕೆಟ್ ನಷ್ಟಕ್ಕೆ 298 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿತು.

2ನೇ ಇನಿಂಗ್ಸ್​ನಲ್ಲಿ ಮೊದಲ ಇನಿಂಗ್ಸ್​ನ ಹಿನ್ನಡೆಯೊಂದಿಗೆ 508 ರನ್​ಗಳ ಬೃಹತ್ ಟಾರ್ಗೆಟ್ ಪಡೆದ ಜಮ್ಮು-ಕಾಶ್ಮೀರ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ನಾಯಕ ಇಯಾನ್ ದೇವ್ ಸಿಂಗ್ ಶತಕ ಸಿಡಿಸಿ 110 ರನ್ ಗಳಿಸಿದರೆ, ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಫಾಜಿಲ್ ರಶೀದ್ 65 ರನ್ ಗಳಿಸಿದರು. ಇವರಲ್ಲದೆ ಅಬ್ದುಲ್ ಸಮದ್ 70 ರನ್ ಮತ್ತು ಪರ್ವೇಜ್ ರಸೂಲ್ 46 ರನ್ ಗಳಿಸಿದರು. ಇದಾಗ್ಯೂ 390 ರನ್​ಗಳಿಗೆ ಆಲೌಟ್ ಆಗುವ ಮೂಲಕ 117 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಕರ್ನಾಟಕ ಪರ ಪ್ರಸಿದ್ಧ್ ಕೃಷ್ಣ ಮೊದಲ ಇನಿಂಗ್ಸ್​ನಲ್ಲಿ ಕೇವಲ 35 ರನ್​ ನೀಡಿ 6 ವಿಕೆಟ್ ಪಡೆದರೆ, 2ನೇ ಇನಿಂಗ್ಸ್​ನಲ್ಲಿ 59 ರನ್​ ನೀಡಿ 4 ವಿಕೆಟ್ ಉರುಳಿಸಿದರು. ಇನ್ನು ಮೊದಲ ಇನಿಂಗ್ಸ್​ನಲ್ಲಿ 175 ರನ್​ ಬಾರಿಸಿದ್ದ ಕರುಣ್ ನಾಯರ್ 2ನೇ ಇನಿಂಗ್ಸ್​ನಲ್ಲಿ 71 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ಫಲವಾಗಿ ಕರುಣ್ ನಾಯರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.

ಇನ್ನು ಕರ್ನಾಟಕ ತಂಡ ರೈಲ್ವೇಸ್ ವಿರುದ್ದ ಆಡಿದ ಮೊದಲ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು. ಇದೀಗ ಜಮ್ಮು-ಕಾಶ್ಮೀರ ವಿರುದ್ದ ಜಯ ಸಾಧಿಸುವ ಮೂಲಕ ರಣಜಿ ಸೀಸನ್ 2022 ರಲ್ಲಿ ಕರ್ನಾಟಕ ಮೊದಲ ಗೆಲುವು ದಾಖಲಿಸಿದೆ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(Ranji Trophy: Karnataka beat Jammu Kashmir)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ