AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಡಾ ತಂಡದ ವಿರುದ್ಧ ಪಿಚ್ ಟ್ಯಾಂಪರಿಂಗ್ ಆರೋಪ; ಮೈದಾನಕ್ಕಿಳಿಯದ ಜಮ್ಮು ಕಾಶ್ಮೀರ ಆಟಗಾರರು

Ranji Trophy Pitch Tampering Controversy: ರಣಜಿ ಟ್ರೋಫಿಯ ಎಲೈಟ್ ಗುಂಪಿನ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡವು ಬರೋಡಾ ತಂಡದ ವಿರುದ್ಧ ಪಿಚ್ ಟ್ಯಾಂಪರಿಂಗ್ ಆರೋಪ ಹೊರಿಸಿದೆ. ಮೂರನೇ ದಿನದ ಆಟ ಪ್ರಾರಂಭವಾಗುವ ಮೊದಲು ಪಿಚ್ ಅನ್ನು ಬದಲಾಯಿಸಲಾಗಿದೆ ಎಂದು ಆರೋಪಿಸಿ ಜಮ್ಮು ಮತ್ತು ಕಾಶ್ಮೀರ ತಂಡ ಆಟ ಆಡಲು ನಿರಾಕರಿಸಿತು. ಒಂದೂವರೆ ಗಂಟೆಗಳ ವಿಳಂಬದ ನಂತರ ಪಂದ್ಯ ಪುನರಾರಂಭವಾಯಿತು.

ಬರೋಡಾ ತಂಡದ ವಿರುದ್ಧ ಪಿಚ್ ಟ್ಯಾಂಪರಿಂಗ್ ಆರೋಪ; ಮೈದಾನಕ್ಕಿಳಿಯದ ಜಮ್ಮು ಕಾಶ್ಮೀರ ಆಟಗಾರರು
ರಣಜಿ ಪಂದ್ಯ
ಪೃಥ್ವಿಶಂಕರ
|

Updated on:Feb 01, 2025 | 7:00 PM

Share

ಪ್ರಸ್ತುತ ನಡೆಯುತ್ತಿರುವ ದೇಶೀ ಟೂರ್ನಿ ರಣಜಿ ಟ್ರೋಫಿ ಗ್ರೂಪ್ ಹಂತದ ಕೊನೆಯ ಸುತ್ತಿನ ಪಂದ್ಯದಲ್ಲಿ ಎಲ್ಲರ ಗಮನ ದೆಹಲಿ ಮತ್ತು ರೈಲ್ವೇಸ್ ತಂಡಗಳ ಮುಖಾಮುಖಿಯ ಮೇಲಿತ್ತು. ಇದಕ್ಕೆ ಕಾರಣ 12 ವರ್ಷಗಳ ನಂತರ ಈ ಟೂರ್ನಿಯಲ್ಲಿ ಆಡಿದ ವಿರಾಟ್ ಕೊಹ್ಲಿ. ಆದರೆ ಇದೀಗ ಮತ್ತೊಂದು ಪಂದ್ಯ ಎಲ್ಲರ ಗಮನ ಸೆಳೆದಿದ್ದು ಇದಕ್ಕೆ ಕಾರಣ ಯಾವುದೇ ಸೂಪರ್ ಸ್ಟಾರ್ ಅಲ್ಲ. ಬದಲಿಗೆ ಪಿಚ್ ಟ್ಯಾಂಪರಿಂಗ್​ನಂತಹ ಗಂಭೀರ ಆರೋಪ. ಜಮ್ಮು ಮತ್ತು ಕಾಶ್ಮೀರ ಮತ್ತು ಬರೋಡಾ ನಡುವೆ ನಡೆಯುತ್ತಿರುವ ಪಂದ್ಯದಲ್ಲಿ ಈ ವಿವಾದವು ಬೆಳಕಿಗೆ ಬಂದಿದ್ದು, ಜಮ್ಮು ಮತ್ತು ಕಾಶ್ಮೀರ ತಂಡವು ಬರೋಡಾ ತಂಡದ ವಿರುದ್ಧ ಪಿಚ್ ಟ್ಯಾಂಪರ್ ಆರೋಪವನ್ನು ಮಾಡಿದೆ. ಇದರಿಂದಾಗಿ ಮೂರನೇ ದಿನದಾಟ ತಡವಾಗಿ ಆರಂಭವಾಗಬೇಕಾಯಿತು.

ಪಿಚ್ ಟ್ಯಾಂಪರಿಂಗ್ ಆರೋಪ

ಬರೋಡದಲ್ಲಿ ನಡೆಯುತ್ತಿರುವ ಎಲೈಟ್ ಎ ಗುಂಪಿನ ಪಂದ್ಯದ ಮೂರನೇ ದಿನದಂದು ಈ ವಿವಾದ ಬೆಳಕಿಗೆ ಬಂದಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಜಮ್ಮು ಮತ್ತು ಕಾಶ್ಮೀರ ಮೊದಲ ಇನ್ನಿಂಗ್ಸ್​ನಲ್ಲಿ 246 ರನ್ ಕಲೆಹಾಕಿತು. ಇತ್ತ ಬರೋಡಾ ತಂಡ 166 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ 125 ರನ್‌ಗಳಿಗೂ ಮೀರಿದ ಸ್ಕೋರ್‌ನೊಂದಿಗೆ ತನ್ನ ಎರಡನೇ ಇನಿಂಗ್ಸ್‌ ಮುಂದುವರಿಸಬೇಕಾಗಿದ್ದ ಜಮ್ಮು ಕಾಶ್ಮೀರ ತಂಡ ಮೂರನೇ ದಿನದ ಆಟ ಪ್ರಾರಂಭವಾಗುವ ಮೊದಲು ಆತಿಥೇಯ ಬರೋಡಾ ರಾತ್ರೋರಾತ್ರಿ ಪಿಚ್ ಅನ್ನು ಟ್ಯಾಂಪರ್ ಮಾಡಿದೆ ಎಂದು ಆರೋಪ ಹೊರಿಸಿ ಮೈದಾನಕ್ಕಿಳಿಯಲು ನಿರಾಕರಿಸಿತು.

ಜನವರಿ 30 ರಂದು ಪಂದ್ಯ ಆರಂಭವಾದ ರಿಲಯನ್ಸ್ ಕ್ರೀಡಾಂಗಣದ ಪಿಚ್ ಮೂರನೇ ದಿನದಲ್ಲಿ ಸಂಪೂರ್ಣವಾಗಿ ಬದಲಾಗಿದೆ ಎಂಬುದು ಜಮ್ಮು ಕಾಶ್ಮೀರ ತಂಡದ ಆರೋಪವಾಗಿತ್ತು. ಅಲ್ಲದೆ ಕೃನಾಲ್ ಪಾಂಡ್ಯ ನಾಯಕತ್ವದ ಬರೋಡಾ ತಂಡವು ಪಿಚ್ ಟ್ಯಾಂಪರ್ ಮಾಡಿದೆ ಎಂದು ಆರೋಪಿಸಿ ಪ್ರವಾಸಿ ತಂಡವು ಮೈದಾನಕ್ಕೆ ಇಳಿಯಲು ನಿರಾಕರಿಸಿತು.

ಒಂದೂವರೆ ಗಂಟೆಗಳ ನಂತರ ಪಂದ್ಯ ಆರಂಭ

ಈ ಆರೋಪದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಕೋಚ್ ಅಜಯ್ ಶರ್ಮಾ, ಪಂದ್ಯದ ಅಂಪೈರ್ ಮತ್ತು ರೆಫರಿ ಇಬ್ಬರಿಗೂ ದೂರು ನೀಡಿದರು. ನಂತರ, ಸುದೀರ್ಘ ಚರ್ಚೆ ಮತ್ತು ವಿವರಣೆಯ ಬಳಿಕ, ಅಂತಿಮವಾಗಿ ಒಂದೂವರೆ ಗಂಟೆಗಳ ವಿಳಂಬದ ನಂತರ ಪಂದ್ಯವನ್ನು ಪುನರಾರಂಭಿಸಲಾಯಿತು. ಈ ವಿವಾದ ಬಗ್ಗೆ ಸ್ಪಷ್ಟನೆ ನೀಡಿರುವ ಬಿಸಿಸಿಐ, ಪಿಚ್‌ನ ಬಣ್ಣ ಬದಲಾವಣೆಗೆ ಪಿಚ್‌ನ ಆರ್ದ್ರತೆಯೇ ಕಾರಣ ಎಂದಿದೆ.

ವಾಸ್ತವವಾಗಿ, ವಿವಾದಕ್ಕೆ ದೊಡ್ಡ ಕಾರಣವೆಂದರೆ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯಬೇಕೆಂದರೆ ಎರಡೂ ತಂಡಗಳಿಗೆ ಈ ಪಂದ್ಯ ಬಹುಮುಖ್ಯವಾಗಿದೆ. ಕಳೆದ ಪಂದ್ಯದಲ್ಲಿ ಮುಂಬೈಯಂತಹ ಬಲಿಷ್ಠ ತಂಡವನ್ನು ಮಣಿಸಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಕ್ವಾರ್ಟರ್ ಫೈನಲ್‌ಗೆ ತಲುಪಲು ಈ ಪಂದ್ಯ ಡ್ರಾದಲ್ಲಿ ಅಂತ್ಯಕೊಂಡರೆ ಸಾಕು. ಆದರೆ ಬರೋಡಾ ತಂಡ ಮಾತ್ರ ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕೆಂದರೆ ಯಾವುದೇ ಬೆಲೆ ತೆತ್ತಾದರೂ ಈ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಎರಡನೇ ಇನ್ನಿಂಗ್ಸ್​ನಲ್ಲಿ ನಮ್ಮನ್ನು ಬೇಗ ಆಲೌಟ್ ಮಾಡಲು ಬರೋಡಾ ತಂಡ ಅವರಿಗೆ ಬೇಕಾದಂತೆ ಪಿಚ್ ಅನ್ನು ಬದಲಿಸಿದೆ ಎಂಬುದು ಜಮ್ಮು ಕಾಶ್ಮೀರ ತಂಡದ ಆರೋಪವಾಗಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Sat, 1 February 25

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ