AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sarfaraz Khan: ರನ್ ಮಳೆ ಸುರಿಸಿದರೂ ಟೀಮ್ ಇಂಡಿಯಾದಲ್ಲಿಲ್ಲ ಅವಕಾಶ..!

Ranji Trophy: ಮುಂಬೈ ತಂಡವು ಫೈನಲ್​ಗೆ ಪ್ರವೇಶಿಸಿದ್ದು, ಅಂತಿಮ ಪಂದ್ಯದಲ್ಲಿ ಮಧ್ಯಪ್ರದೇಶವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ 24 ರ ಹರೆಯದ ಸರ್ಫರಾಜ್ ಖಾನ್ ದ್ವಿಶತಕ ಬಾರಿಸಿದರೆ ರಣಜಿ ಸೀಸನ್​ವೊಂದರಲ್ಲಿ 1000 ರನ್​ ಪೂರೈಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ.

Sarfaraz Khan: ರನ್ ಮಳೆ ಸುರಿಸಿದರೂ ಟೀಮ್ ಇಂಡಿಯಾದಲ್ಲಿಲ್ಲ ಅವಕಾಶ..!
Sarfaraz KhanImage Credit source: TOI
TV9 Web
| Edited By: |

Updated on: Jun 19, 2022 | 3:38 PM

Share

ಫಾರ್ಮ್​ನಲ್ಲಿರುವ ಆಟಗಾರನಿಗೆ ಚಾನ್ಸ್​…ಇದು ಕ್ರಿಕೆಟ್​ ಅಂಗಳದಲ್ಲಿರುವ ಅಲಿಖಿತ ಸಿದ್ದಾಂತ. ಆದರೆ ಟೀಮ್ ಇಂಡಿಯಾದಲ್ಲಿ ಅಂತಹದೊಂದು ಪ್ರಕ್ರಿಯೆ ನಡೆಯುತ್ತಿದ್ಯಾ ಎಂಬ ಪ್ರಶ್ನೆ ಹಲವು ಬಾರಿ ಚರ್ಚೆಗೀಡಾಗಿದೆ. ಅದರಲ್ಲೂ ಭಾರತ ಟೆಸ್ಟ್ ತಂಡದಲ್ಲಿ ಬದಲಾವಣೆಗಳಾಗುತ್ತಿಲ್ಲ ಎಂಬ ಆರೋಪಗಳು ಈ ಹಿಂದಿನಿಂದಲೂ ಕೇಳಿ ಬರುತ್ತಿತ್ತು. ಇದೀಗ ಮತ್ತೊಮ್ಮೆ ಅಂತಹದ್ದೇ ಪ್ರಶ್ನೆ ಕ್ರಿಕೆಟ್​ ಪ್ರೇಮಿಗಳ ಮುಂದಿದೆ. ಏಕೆಂದರೆ ಯುವ ಆಟಗಾರನೊಬ್ಬರ ರಣಜಿ ಕ್ರಿಕೆಟ್​ನಲ್ಲಿ ಸತತವಾಗಿ ಅಬ್ಬರಿಸುತ್ತಿದ್ದರೂ, ರನ್​ ಸುರಿಮಳೆ ಹರಿಸುತ್ತಿದ್ದರೂ ಟೀಮ್ ಇಂಡಿಯಾದಲ್ಲಿ ಅವಕಾಶ ಮಾತ್ರ ಸಿಗುತ್ತಿಲ್ಲ. ಹೌದು, ಇಲ್ಲಿ ಹೇಳುತ್ತಿರುವುದು ಮುಂಬೈ ತಂಡದ ಯುವ ಆಟಗಾರ ಸರ್ಫರಾಜ್ ಖಾನ್ (Sarfaraz Khan) ಬಗ್ಗೆ. ಈ ಹೆಸರು ಕ್ರಿಕೆಟ್ ಪ್ರೇಮಿಗಳಿಗೆ ಚಿರಪರಿಚಿತ. ಅದರಲ್ಲೂ ಆರ್​ಸಿಬಿ ಅಭಿಮಾನಿಗಳಿಗೆ ಸರ್ಫರಾಜ್ ಬಗ್ಗೆ ಹೇಳಬೇಕೆಂದಿಲ್ಲ. ಏಕೆಂದರೆ ಈ ಯುವ ಆಟಗಾರ ಈ ಹಿಂದೆ ಆರ್​ಸಿಬಿ ಪರ ಆಡಿದ್ದರು. ಅಲ್ಲದೆ ಸಿಕ್ಕ ಅವಕಾಶದಲ್ಲಿ ಒಂದಷ್ಟು ಪಂದ್ಯಗಳಲ್ಲಿ ಮಿಂಚಿದ್ದರು. ಆದರೆ ಸರ್ಫರಾಜ್ ಟಿ20 ಕ್ರಿಕೆಟ್​ಗಿಂತ ಹೆಚ್ಚು ಗಮನ ಸೆಳೆಯುತ್ತಿರುವುದು ದೇಶೀಯ ಟೆಸ್ಟ್​ ಟೂರ್ನಿ ರಣಜಿಯಲ್ಲಿ ಎಂಬುದು ವಿಶೇಷ.

ಏಕೆಂದರೆ ರಣಜಿಯಲ್ಲಿ ಸರ್ಫರಾಜ್ ನಾಗಾಲೋಟವನ್ನು ತಡೆಯಲು ಬೌಲರ್​ಗಳಿಗೆ ಸಾಧ್ಯವಾಗುತ್ತಿಲ್ಲ. ಅದು ಈ ಬಾರಿ ಕೂಡ ಮುಂದುವರೆದಿದೆ. ಸರ್ಫರಾಜ್ ಖಾನ್ ಪ್ರಸಕ್ತ ಸೀಸನ್​ನ ರಣಜಿಯ 5 ಪಂದ್ಯಗಳ 7 ಇನ್ನಿಂಗ್ಸ್‌ಗಳಲ್ಲಿ ಒಟ್ಟು 803 ರನ್ ಕಲೆಹಾಕಿದ್ದಾರೆ. ಅಂದರೆ 134 ಸರಾಸರಿಯಲ್ಲಿ ರನ್​ಗಳನ್ನು ಗುಡ್ಡೆ ಹಾಕಿದ್ದಾರೆ. ವಿಶೇಷ ಎಂದರೆ ಇಡೀ ಟೂರ್ನಿಯಲ್ಲಿ ಬೇರೆ ಯಾವುದೇ ಬ್ಯಾಟ್ಸ್‌ಮನ್‌ಗಳು 630 ರನ್‌ಗಳನ್ನು ತಲುಪಿಲ್ಲ. ಆದರೆ ಮತ್ತೊಂದೆಡೆ ಸರ್ಫರಾಜ್ ಖಾನ್ 800 ಕ್ಕೂ ಅಧಿಕ ರನ್​ ಕಲೆಹಾಕಿದ್ದಾರೆ.

ಈ ವೇಳೆ ಒಂದು ದ್ವಿಶತಕ (275 ರನ್‌), 3 ಶತಕ ಹಾಗೂ 2 ಅರ್ಧ ಶತಕ ಬಾರಿಸಿದ್ದಾರೆ. ಇಲ್ಲಿ ಪ್ರಮುಖ ವಿಷಯವೆಂದರೆ ಅವರ ಸ್ಟ್ರೈಕ್ ರೇಟ್ 72 ಇದ್ದು, ಇದು ಪ್ರಥಮ ದರ್ಜೆ ಪಂದ್ಯಾವಳಿಯ ವಿಷಯದಲ್ಲಿ ಅತ್ಯುತ್ತಮ ಸ್ಟ್ರೈಕ್ ರೇಟ್ ಆಗಿದೆ. ಇನ್ನು 7 ಇನಿಂಗ್ಸ್​ಗಳಲ್ಲಿ ಸರ್ಫರಾಜ್ ಬ್ಯಾಟ್​ನಿಂದ ಮೂಡಿಬಂದಿರುವುದು 78 ಬೌಂಡರಿ ಹಾಗೂ 16 ಸಿಕ್ಸರ್‌ಗಳು. ಅಂದರೆ, ಬೌಂಡರಿಯಿಂದಲೇ 408 ರನ್ ಗಳಿಸಿದ್ದಾರೆ. ಅಂದಹಾಗೆ ಸರ್ಫರಾಜ್ ಅಬ್ಬರಿಸುತ್ತಿರುವುದು ಇದೇ ಮೊದಲೇನಲ್ಲ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಕೊರೊನಾದಿಂದಾಗಿ ಕಳೆದ ವರ್ಷ ರಣಜಿ ಟೂರ್ನಿ ಆಯೋಜಿಸಲಾಗಿರಲಿಲ್ಲ. ಇದಕ್ಕೂ ಮುನ್ನ 2019-20 ರಲ್ಲಿ ಮುಂಬೈ ಪರ ಆಡಿದ್ದ ಸರ್ಫರಾಜ್ ಖಾನ್ 6 ಪಂದ್ಯಗಳ 9 ಇನ್ನಿಂಗ್ಸ್‌ಗಳಲ್ಲಿ 926 ರನ್ ಗಳಿಸಿದ್ದರು. ಅಂದರೆ 155ರ ಸರಾಸರಿಯಲ್ಲಿ ರನ್​ ಕಲೆಹಾಕಿದ್ದರು. ಈ ವೇಳೆ ಒಂದು ತ್ರಿಶತಕ (301), 3 ಶತಕ ಹಾಗೂ 2 ಅರ್ಧ ಶತಕಗಳನ್ನೂ ಸಹ ಬಾರಿಸಿದ್ದರು. ಅಂದರೆ ಕಳೆದೆರಡು ರಣಜಿ ಸೀಸನ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಆಟಗಾರನಾಗಿ ಹೊರಹೊಮ್ಮಿರುವ ಸರ್ಫರಾಜ್ ಖಾನ್​ಗೆ ಟೀಮ್ ಇಂಡಿಯಾದಲ್ಲಿ ಅವಕಾಶವೇ ಸಿಕ್ಕಿಲ್ಲ.

2020 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆಯಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂದು ಟೀಮ್ ಇಂಡಿಯಾದಲ್ಲಿ ಯುವ ಆಟಗಾರರಿಗೆ ಚಾನ್ಸ್ ನೀಡಿರಲಿಲ್ಲ. ಇದಾಗ್ಯೂ ಈ ಬಾರಿ 800 ಕ್ಕೂ ಅಧಿಕ ರನ್​ ಕಲೆಹಾಕುವ ಮೂಲಕ ಮತ್ತೊಮ್ಮೆ ಸರ್ಫರಾಜ್ ಖಾನ್ ಟೆಸ್ಟ್​ ಕ್ರಿಕೆಟ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಇದಾಗ್ಯೂ ಇಂಗ್ಲೆಂಡ್ ವಿರುದ್ದ ಟೆಸ್ಟ್​ಗೆ ಸರ್ಫರಾಜ್ ಆಯ್ಕೆಯಾಗಿಲ್ಲ.

ಇದೀಗ ಮುಂಬೈ ತಂಡವು ಫೈನಲ್​ಗೆ ಪ್ರವೇಶಿಸಿದ್ದು, ಅಂತಿಮ ಪಂದ್ಯದಲ್ಲಿ ಮಧ್ಯಪ್ರದೇಶವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ 24 ರ ಹರೆಯದ ಸರ್ಫರಾಜ್ ಖಾನ್ ದ್ವಿಶತಕ ಬಾರಿಸಿದರೆ ರಣಜಿ ಸೀಸನ್​ವೊಂದರಲ್ಲಿ 1000 ರನ್​ ಪೂರೈಸಿದ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲಿದ್ದಾರೆ. ಆಗಲಾದರೂ ಟೀಮ್ ಇಂಡಿಯಾ ಆಯ್ಕೆ ಸಮಿತಿ ಯುವ ಕ್ರಿಕೆಟಿಗನಿಗೆ ಭಾರತ ಟೆಸ್ಟ್ ತಂಡದಲ್ಲಿ ಅವಕಾಶ ನೀಡಲಿದ್ದಾರಾ ಕಾದು ನೋಡಬೇಕಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!