AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy: 20 ಫೋರ್, 10 ಸಿಕ್ಸರ್: ದೇಶೀಯ ಅಂಗಳದಲ್ಲಿ ಶಾರೂಖ್ ಖಾನ್ ಸ್ಪೋಟಕ ಶತಕ

Shahrukh Khan: ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ ಮೊದಲ ಇನಿಂಗ್ಸ್‌ನಲ್ಲಿ 452 ರನ್ ಗಳಿಸಿತ್ತು. ತಂಡದ ಪರ ಟೀಮ್ ಇಂಡಿಯಾ ಅಂಡರ್-19 ನಾಯಕ ಯಶ್ ಧುಲ್ ಭರ್ಜರಿ ಶತಕ ಸಿಡಿಸಿದ್ದರು.

Ranji Trophy: 20 ಫೋರ್, 10 ಸಿಕ್ಸರ್: ದೇಶೀಯ ಅಂಗಳದಲ್ಲಿ ಶಾರೂಖ್ ಖಾನ್ ಸ್ಪೋಟಕ ಶತಕ
Shahrukh Khan
TV9 Web
| Edited By: |

Updated on: Feb 19, 2022 | 4:12 PM

Share

ರಣಜಿ ಟ್ರೋಫಿಯಲ್ಲಿ ಸ್ಪೋಟಕ ಶತಕಗಳ ಸುರಿಮಳೆಯಾಗುತ್ತಿದೆ. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ ಶಾರೂಖ್ ಖಾನ್. ತಮಿಳುನಾಡು-ದೆಹಲಿ ನಡುವಣ ಪಂದ್ಯದಲ್ಲಿ ಶಾರೂಖ್ ಖಾನ್ ಸ್ಪೋಟಕ ಸೆಂಚುರಿ ಬಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ದೆಹಲಿ ನೀಡಿದ 452 ರನ್​ಗಳ ಬೃಹತ್ ಗುರಿಗೆ ಪ್ರತ್ಯುತ್ತರವಾಗಿ ಬ್ಯಾಟ್ ಬೀಸಿದ ತಮಿಳುನಾಡು ಪರ ಶಾರೂಖ್ ಶತಕ ಬಾರಿಸಿ ಮಿಂಚಿದರು. ವಿಶೇಷ ಎಂದರೆ ಇದು ಇದು ರಣಜಿ ಟ್ರೋಫಿಯಲ್ಲಿ ಶಾರುಖ್ ಖಾನ್ ಬಾರಿಸಿದ ಮೊದಲ ಶತಕವಾಗಿದೆ. ಇದಕ್ಕೂ ಮುನ್ನ ಅವರು ಈ ದೇಶೀಯ ಟೂರ್ನಿಯಲ್ಲಿ ಕೇವಲ 2 ಅರ್ಧಶತಕಗಳನ್ನು ಬಾರಿಸಿದ್ದರು. ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಶಾರೂಖ್ ದೆಹಲಿ ಬೌಲರುಗಳ ಬೆಂಡೆತ್ತಿದರು. ಮೂಲೆ ಮೂಲೆಗೆ ಚೆಂಡನ್ನು ಅಟ್ಟಿದ ಶಾರೂಖ್ ಖಾನ್ 89 ಎಸೆತಗಳಲ್ಲಿ ಶತಕ ಪೂರೈಸಿದರು.

ಶಾರುಖ್ ಖಾನ್ ಶತಕಕ್ಕೂ ಮುನ್ನ ತಮಿಳುನಾಡಿನ ಮತ್ತೋರ್ವ ಬ್ಯಾಟ್ಸ್​ಮನ್ ಬಾಬಾ ಇಂದ್ರಜಿತ್ ಅವರು ಕೂಡ ಸೆಂಚುರಿ ಸಿಡಿಸಿದ್ದರು. ಇಂದ್ರಜಿತ್ 149 ಎಸೆತಗಳಲ್ಲಿ 117 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 17 ಬೌಂಡರಿ ಮತ್ತು 2 ಸಿಕ್ಸರ್‌ಗಳು ಮೂಡಿಬಂದಿತ್ತು. ಇದೀಗ ಮೂರನೇ ದಿನದಾಟ ಮುಂದುವರೆದಿದ್ದು ಶಾರೂಖ್ ಖಾನ್ 148 ಎಸೆತಗಳಲ್ಲಿ 194 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ ಸಿಡಿದದ್ದು ಬರೋಬ್ಬರಿ 20 ಫೋರ್ ಹಾಗೂ 10 ಸಿಕ್ಸರ್​ಗಳು. ಅಷ್ಟೇ ಅಲ್ಲದೆ ತಮಿಳುನಾಡು ತಂಡವು 7 ವಿಕೆಟ್ ನಷ್ಟಕ್ಕೆ 474 ರನ್​ಗಳಿಸಿದೆ.

ದೆಹಲಿಯ ಮೊದಲ ಇನಿಂಗ್ಸ್: ಇದಕ್ಕೂ ಮುನ್ನ ಮೊದಲು ಬ್ಯಾಟ್ ಮಾಡಿದ ದೆಹಲಿ ತಂಡ ಮೊದಲ ಇನಿಂಗ್ಸ್‌ನಲ್ಲಿ 452 ರನ್ ಗಳಿಸಿತ್ತು. ತಂಡದ ಪರ ಟೀಮ್ ಇಂಡಿಯಾ ಅಂಡರ್-19 ನಾಯಕ ಯಶ್ ಧುಲ್ ಭರ್ಜರಿ ಶತಕ ಸಿಡಿಸಿದ್ದರು. ಇದೀಗ ದೆಹಲಿ ನೀಡಿದ ಕಠಿಣ ಸವಾಲಿಗೆ ತಮಿಳುನಾಡು ತಂಡದ ಭರ್ಜರಿ ಪ್ರತ್ಯುತ್ತರ ನೀಡುತ್ತಿದೆ.

ಇದನ್ನೂ ಓದಿ: AB de Villiers: ಸಿಡಿಲಬ್ಬರದ ಸಿಡಿಲಮರಿ ABDಯ ಈ 3 ದಾಖಲೆ ಮುರಿಯುವವರು ಯಾರು?

ಇದನ್ನೂ ಓದಿ: Rohit Sharma: ಬಾಬರ್ ದಾಖಲೆ ಮುರಿದು ಹೊಸ ಇತಿಹಾಸ ನಿರ್ಮಿಸಿದ ರೋಹಿತ್ ಶರ್ಮಾ

ಇದನ್ನೂ ಓದಿ: Sunil narine: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಸುನಿಲ್ ನರೈನ್

(Ranji Trophy: Tamil Nadu Shahrukh Khan is hammering Delhi with 150 in just 113 balls)

ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ