AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಹ್ಲಿಯ 9 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದವ ಐಐಟಿ ಪದವೀಧರ! ಆರೋಪಿಗೆ ವಾರ್ಷಿಕ ವೇತನವೆಷ್ಟು ಗೊತ್ತಾ?

ರಾಮನಾಗೇಶ್ ಎರಡು ವರ್ಷಗಳ ಹಿಂದೆ ಐಐಟಿ ಹೈದರಾಬಾದ್‌ನಲ್ಲಿ ಪದವಿ ಪಡೆದಿದ್ದರು. ಇದಾದ ನಂತರ ಅವರು ಟಾಪ್ ಫುಡ್ ಆ್ಯಪ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಅವರಿಗೆ ವಾರ್ಷಿಕ 24 ಲಕ್ಷಗಳ ಪ್ಯಾಕೇಜ್ ನೀಡಲಾಗಿದೆ.

ಕೊಹ್ಲಿಯ 9 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದವ ಐಐಟಿ ಪದವೀಧರ! ಆರೋಪಿಗೆ ವಾರ್ಷಿಕ ವೇತನವೆಷ್ಟು ಗೊತ್ತಾ?
ಮಗುವಿನೊಂದಿಗೆ ಕೊಹ್ಲಿ ದಂಪತಿ
TV9 Web
| Edited By: |

Updated on: Nov 11, 2021 | 3:45 PM

Share

ಟಿ20 ವಿಶ್ವಕಪ್ ಭಾರತ ತಂಡಕ್ಕೆ ನಿರಾಸೆ ತಂದಿದೆ. ಮೈದಾನದಲ್ಲಿ ಟೀಂ ಇಂಡಿಯಾ ತನ್ನ ಆಟದಿಂದ ಪ್ರಭಾವ ಬೀರಲು ವಿಫಲವಾದಾಗ, ಆಟಗಾರರು ಮೈದಾನದ ಹೊರಗೆ ಟ್ರೋಲಿಂಗ್‌ಗೆ ಬಲಿಯಾಗಬೇಕಾಯಿತು. ಏತನ್ಮಧ್ಯೆ, ಟೀಂ ಇಂಡಿಯಾದ ಪ್ರದರ್ಶನದಿಂದ ನಿರಾಶೆಗೊಂಡ ಅಭಿಮಾನಿಗಳು ನಾಯಕ ವಿರಾಟ್ ಕೊಹ್ಲಿ ಅವರ ಒಂಬತ್ತು ತಿಂಗಳ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಹೀನ ಘಟನೆಯೂ ನಡೆಯಿತು. ಅಭಿಮಾನಿಗಳ ಈ ಕೃತ್ಯಕ್ಕೆ ಎಲ್ಲೆಡೆ ಖಂಡನೆ ವ್ಯಕ್ತವಾಗಿದೆ. ಈ ಬಗ್ಗೆ ಕ್ರಮ ಕೈಗೊಂಡ ಮುಂಬೈ ಪೊಲೀಸರು ಬೆದರಿಕೆ ಹಾಕಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇಂತಹ ಅಸಹ್ಯಕರ ಬೆದರಿಕೆ ಹಾಕಿದ ವ್ಯಕ್ತಿ ಯಾರೋ ಅನಕ್ಷರಸ್ಥ ಹುಡುಗನಲ್ಲ ಬದಲಿಗೆ ಆತ ಐಐಟಿಯಿಂದ ಪದವಿ ಪಡೆದಿದ್ದಾನೆ ಎಂಬುದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ.

ವಿರಾಟ್ ಕೊಹ್ಲಿ ಮಗಳಿಗೆ ಬೆದರಿಕೆ ಬಂದ ನಂತರ ದೆಹಲಿ ಮಹಿಳಾ ಆಯೋಗವು ಈ ಬಗ್ಗೆ ಕ್ರಮ ಕೈಗೊಂಡಿದೆ. ದೆಹಲಿ ಮಹಿಳಾ ಆಯೋಗವು ಈ ವಿಷಯದಲ್ಲಿ ನೋಟಿಸ್ ಜಾರಿ ಮಾಡಿತ್ತು ಮತ್ತು ಪೊಲೀಸರನ್ನು ಇದುವರೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಕೇಳಿದೆ. ಅದೇ ಸಮಯದಲ್ಲಿ ಕೊಹ್ಲಿಯ ಮ್ಯಾನೇಜರ್ ಕೂಡ ಎಫ್‌ಐಆರ್ ದಾಖಲಿಸಿದ್ದಾರೆ. ಇದರ ನಂತರ, ಮುಂಬೈ ಪೊಲೀಸರ ಸೈಬರ್ ಸೆಲ್ ಬೆದರಿಕೆ ಹಾಕಿದ ವ್ಯಕ್ತಿಗಾಗಿ ಹುಡುಕಾಟ ಆರಂಭಿಸಿತು. ಅಂತಿಮವಾಗಿ ಬುಧವಾರ ಹೈದರಾಬಾದ್‌ನಿಂದ ಆತನನ್ನು ಬಂಧಿಸಿತು. ಇದೀಗ ಆತನನ್ನು ಮುಂಬೈಗೆ ಕರೆತಂದಿದ್ದಾರೆ.

ಆರೋಪಿ ಐಐಟಿಯಲ್ಲಿ ಪದವೀಧರನಾಗಿದ್ದಾನೆ ಮೂಲಗಳ ಪ್ರಕಾರ ಈ ಆರೋಪಿಯನ್ನು ರಾಮನಾಗೇಶ್ ಶ್ರೀನಿವಾಸ್ ಅಕುಬಾತಿನಿ ಎಂದು ಗುರುತಿಸಲಾಗಿದ್ದು, ಆತನಿಗೆ 23 ವರ್ಷ. ರಾಮನಾಗೇಶ್ ಎರಡು ವರ್ಷಗಳ ಹಿಂದೆ ಐಐಟಿ ಹೈದರಾಬಾದ್‌ನಲ್ಲಿ ಪದವಿ ಪಡೆದಿದ್ದರು. ಇದಾದ ನಂತರ ಅವರು ಟಾಪ್ ಫುಡ್ ಆ್ಯಪ್‌ನಲ್ಲಿ ಕೆಲಸಕ್ಕೆ ಸೇರಿದ್ದರು. ಅವರಿಗೆ ವಾರ್ಷಿಕ 24 ಲಕ್ಷಗಳ ಪ್ಯಾಕೇಜ್ ನೀಡಲಾಗಿದೆ. ಇತ್ತೀಚೆಗಷ್ಟೇ ಕೆಲಸ ತೊರೆದು ಅಮೆರಿಕದಲ್ಲಿ ಸ್ನಾತಕೋತ್ತರ ಪದವಿಗೆ ತಯಾರಿ ನಡೆಸಿದ್ದರು. ತನ್ನ ಮಗನನ್ನು ಏಕೆ ಬಂಧಿಸಲಾಯಿತು ಎಂದು ರಾಮನಾಗೇಶ್ ತಂದೆಗೆ ಇನ್ನೂ ಅರ್ಥವಾಗಿಲ್ಲವಂತೆ. ಅವರೂ ಸಹ ಹೈದರಾಬಾದ್‌ನಿಂದ ತಮ್ಮ ಪುತ್ರನೊಂದಿಗೆ ಮುಂಬೈಗೆ ಬಂದಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಕಳಪೆ ಆಟ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡಕ್ಕೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಪಾಕಿಸ್ತಾನದ ವಿರುದ್ಧ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದರ ನಂತರ, ಅವರು ನ್ಯೂಜಿಲೆಂಡ್ ವಿರುದ್ಧವೂ ಸೋಲನ್ನು ಎದುರಿಸಬೇಕಾಯಿತು, ಇದರಿಂದಾಗಿ ಅವರ ಸೆಮಿಫೈನಲ್‌ಗೆ ತಲುಪುವ ಪ್ರಯಾಣ ಅಂತ್ಯವಾಯಿತು. ಇದರ ನಂತರ ತಂಡವು ತನ್ನ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದರೂ ಸೆಮಿಫೈನಲ್ ತಲುಪಲು ಸಾಧ್ಯವಾಗಲಿಲ್ಲ. ಈ ವಿಶ್ವಕಪ್ ವಿರಾಟ್ ಕೊಹ್ಲಿ ಟಿ20 ನಾಯಕನ ಕೊನೆಯ ಟಿ20 ಟೂರ್ನಿಯಾಗಿತ್ತು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು