AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: 6 ಎಸೆತಗಳಲ್ಲಿ 22 ರನ್: GT vs SRH ನಡುವಣ ಕೊನೆಯ ರೋಚಕ ಓವರ್ ಹೇಗಿತ್ತು ನೋಡಿ

Rahul Tewatia, GT vs SRH IPL 2022: ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೊನೆಯ 6 ಎಸೆತಗಳಲ್ಲಿ ಗುಜರಾತ್ ಟೈಟಾನ್ಸ್ ತಂಡಕ್ಕೆ ಗೆಲ್ಲಲು 22 ರನ್​ಗಳು ಬೇಕಾಗಿದ್ದಾಗ ರಾಹುಲ್ ತೇವಾಟಿಯ ಹಾಗೂ ರಶೀದ್ ಖಾನ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಕೊನೆಯ ಓವರ್​ನಲ್ಲಿ 4 ಸಿಕ್ಸರ್ ಸಿಡಿಸಿ ತಂಡಕ್ಕೆ ಊಹಿಸಲಾಗದ ರೀತಿಯಲ್ಲಿ ಜಯ ತಂದಿಟ್ಟರು.

Rashid Khan: 6 ಎಸೆತಗಳಲ್ಲಿ 22 ರನ್: GT vs SRH ನಡುವಣ ಕೊನೆಯ ರೋಚಕ ಓವರ್ ಹೇಗಿತ್ತು ನೋಡಿ
Rashid Khan and Rahul Tewatia SRH vs GT
TV9 Web
| Edited By: |

Updated on: Apr 28, 2022 | 7:39 AM

Share

ಎರಡೂ ತಂಡದ ಆಟಗಾರರು ಭರ್ಜರಿ ಫಾರ್ಮ್​​ನಲ್ಲಿದ್ದರೆ ಎರಡು ಬಲಿಷ್ಠ ಟೀಮ್​ಗಳ ನಡುವಣ ಕಾದಾಟ ಹೇಗಿರುತ್ತೆ ಎಂಬುದಕ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ಬುಧವಾರ ನಡೆದ ಗುಜರಾತ್ ಟೈಟಾನ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ (GT vs SRH) ನಡುವಣ ಪಂದ್ಯವೇ ಸಾಕ್ಷಿ. ಕೊನೆಯ 6 ಎಸೆತಗಳಲ್ಲಿ ಜಿಟಿ ತಂಡಕ್ಕೆ ಗೆಲ್ಲಲು 22 ರನ್​ಗಳು ಬೇಕಾಗಿದ್ದಾಗ ರಾಹುಲ್ ತೇವಾಟಿಯ (Rahul Tewatia) ಹಾಗೂ ರಶೀದ್ ಖಾನ್ (Rashid Khan) ಸ್ಫೋಟಕ ಬ್ಯಾಟಿಂಗ್ ನಡೆಸಿ ಕೊನೆಯ ಓವರ್​ನಲ್ಲಿ 4 ಸಿಕ್ಸರ್ ಸಿಡಿಸಿ ತಂಡಕ್ಕೆ ಊಹಿಸಲಾಗದ ರೀತಿಯಲ್ಲಿ ಜಯ ತಂದಿಟ್ಟರು. ಹೈ ಸ್ಕೋರ್ ಗೇಮ್​​ನಲ್ಲಿ 5 ವಿಕೆಟ್​ಗಳ ರೋಚಕ ಗೆಲುವು ಕಂಡ ಹಾರ್ದಿಕ್ ಪಾಂಡ್ಯ ಆಡಿದ ಎಂಟು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಸೋಲು ಏಳರಲ್ಲಿ ಗೆಲುವು ಕಂಡು ಪ್ಲೇ ಆಫ್ ಸ್ಥಾನವನ್ನು ಖಚಿತ ಪಡಿಸಿದೆ. ಇತ್ತ ಎಸ್​ಆರ್​ಹೆಚ್ ಪರ ಉಮ್ರಾನ್ ಮಲಿಕ್ 5 ವಿಕೆಟ್ ಕಿತ್ತು ಮಾರಕ ದಾಳಿ ಸಂಘಟಿಸಿದರೂ ಪ್ರಯೋಜನಕ್ಕೆ ಬರಲಿಲ್ಲ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹೈದರಾಬಾದ್ ಪರ ಆರಂಭಿಕ ಆಟಗಾರರಾಗಿ ಅಭಿಷೇಕ್ ಶರ್ಮಾ ಮತ್ತು ನಾಯಕ ಕೇನ್ ವಿಲಿಯಮ್ಸನ್ ಕಣಕ್ಕಿಳಿದರು. ಈ ಪೈಕಿ ವಿಲಿಯಮ್ಸನ್ 5 ರನ್ ಗಳಿಸಿ ಔಟ್ ಆದರೆ, ಅಭಿಷೇಕ್ ಶರ್ಮಾ 42 ಎಸೆತಗಳಲ್ಲಿ 65 ರನ್ ಗಳಿಸಿ ಅಬ್ಬರಿಸಿದರು. ಇನ್ನುಳಿದಂತೆ ರಾಹುಲ್‌ ತ್ರಿಪಾಠಿ 16 ರನ್, ಏಡನ್ ಮಾರ್ಕ್ರಮ್ 56 ರನ್, ನಿಕೋಲಸ್ ಪೂರನ್ 3 ರನ್, ವಾಷಿಂಗ್ಟನ್ ಸುಂದರ್ 3 ರನ್ ಗಳಿಸಿದರೆ, ಮಾರ್ಕೊ ಜನ್ಸೆನ್ ಅಜೇಯ 8 ರನ್ ಮತ್ತು ಶಶಾಂಕ್ ಸಿಂಗ್ ಅಜೇಯ 25 ರನ್ ಗಳಿಸಿದರು.

ಶಶಾಂಕ್ ಶರ್ಮಾ ಫೆರ್ಗ್ಯುಸನ್ ಎಸೆದ ಅಂತಿಮ ಓವರ್‌ನ ಕೊನೆಯ 3 ಎಸೆತಗಳಲ್ಲಿ ಹ್ಯಾಟ್ರಿಕ್ ಸಿಕ್ಸರ್ ಬಾರಿಸಿ ಅಬ್ಬರಿಸಿದರು. ಒಟ್ಟು 6 ಎಸೆತಗಳಲ್ಲಿ ಅಜೇಯ 25 ರನ್ ಬಾರಿಸಿದರು. ಈ ಮೂಲಕ ಸನ್ ರೈಸರ್ಸ್ ಹೈದರಾಬಾದ್ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 195 ರನ್ ಗಳಿಸಿತು. ಜಿಟಿ ಪರ ದುಬಾರಿಯಾದರೂ ಮೊಹಮ್ಮದ್ ಶಮಿ 3 ವಿಕೆಟ್ ಕಿತ್ತರು.

196 ರನ್​ಗಳ ಕಠಿಣ ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ ತಂಡಕ್ಕೆ ವೃದ್ಧಿಮಾನ್ ಸಾಹ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 46 ಎಸೆತಗಳಲ್ಲಿ 69 ರನ್ ಪೇರಿಸಿದರು. ಈ ಹಂತದಲ್ಲಿ ದಾಳಿಗಿಳಿದ ಸ್ಪೀಡ್ ಸ್ಟಾರ್ ಉಮ್ರಾನ್ ಮಲಿಕ್ ಡಬಲ್ ಆಘಾತ ನೀಡಿದರು. ಗಿಲ್ (22) ಜೊತೆಗೆ ನಾಯಕ ಹಾರ್ದಿಕ್ ಪಾಂಡ್ಯರನ್ನು (10) ಪೆವಿಲಿಯನ್‌ಗೆ ಅಟ್ಟಿದರು. ಬಳಿಕ ಸಾಹ 28 ಅವರಿಗೆ ಡೇವಿಡ್ ಮಿಲ್ಲರ್ ಅವರಿಂದ ಉತ್ತಮ ಬೆಂಬಲ ದೊರಕಿತು. ಇನ್ನಿಂಗ್ಸ್‌ನ 14ನೇ ಓವರ್‌ನಲ್ಲಿ ಮಗದೊಮ್ಮೆ ದಾಳಿಗಿಳಿದ ಮಲಿಕ್ ಸಾಹರನ್ನು ಕ್ಲೀನ್ ಬೌಲ್ಡ್ ಮಾಡಿದರು. 38 ಎಸೆತಗಳನ್ನು ಎದುರಿಸಿದ ಸಹಾ 11 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 68 ರನ್ ಗಳಿಸಿದರು.

ಗುಜರಾತ್ ಒಂದು ಹಂತದಲ್ಲಿ 16 ಓವರ್‌ಗಳಲ್ಲಿ 140 ರನ್ನಿಗೆ ಐದು ವಿಕೆಟ್ ಕಳೆದುಕೊಂಡು ಸೋಲಿನ ಭೀತಿಗೊಳಗಾಗಿತ್ತು. ಆದರೆ ಮುರಿಯದ ಆರನೇ ವಿಕೆಟ್‌ಗೆ 24 ಎಸೆತಗಳಲ್ಲಿ 59 ರನ್‌ಗಳ ಜೊತೆಯಾಟ ಕಟ್ಟಿದ ತೆವಾಟಿಯಾ ಹಾಗೂ ರಶೀದ್, ಹೈದರಾಬಾದ್ ಕೈಯಿಂದ ಗೆಲುವನ್ನು ಅಕ್ಷರಶಃ ಕಸಿದುಕೊಂಡರು. ತೇವಾಟಿಯಾ 40* ರನ್‌(21 ಬಾಲ್‌, 4 ಬೌಂಡರಿ, 2 ಸಿಕ್ಸ್‌) ಹಾಗೂ ರಶೀದ್‌ ಖಾನ್‌ 31* ರನ್‌(11 ಬಾಲ್‌, 4 ಸಿಕ್ಸ್‌) ಸ್ಪೋಟಕ ಆಟವಾಡಿದರು. ಪ್ರಮುಖವಾಗಿ ಕೊನೆ ಓವರ್‌ನಲ್ಲಿ ಗೆಲುವಿಗಾಗಿ 22 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲಿಂಗ್‌ ದಾಳಿಗಿಳಿದ ಮಾರ್ಕೋ ಜಾನ್ಸನ್‌ ಅವರಿಗೆ, ತೇವಾಟಿಯಾ ಹಾಗೂ ರಶೀದ್‌ (6, 1, 6, 0, 6, 6) 25 ರನ್‌ ಸಿಡಿಸಿ ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟರು. ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

DC vs KKR Prediction Playing XI: ಸೋಲಿನ ಸುಳಿಯಲ್ಲಿರುವ ಉಭಯ ತಂಡಗಳಲ್ಲಿ ಬದಲಾವಣೆ ಖಚಿತ! ಯಾರಿಗೆ ಅವಕಾಶ?

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ