AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಈ ಕೃತ್ಯ ಅಸಹ್ಯಕರ: ಪಾಕ್ ವಿರುದ್ಧ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ

Pakistan air strike on Afghanistan: ಪಾಕಿಸ್ತಾನದ ಸೇನೆಯು "ಆಪರೇಷನ್ ಗಜಬ್ ಲಿಲ್-ಹಕ್" ಎಂಬ ಕೋಡ್ ಹೆಸರಿನಲ್ಲಿ ಅಫ್ಘಾನಿಸ್ತಾನ್ ಮೇಲೆ ಏರ್ ಸ್ಟ್ರೈಕ್ ನಡೆಸಿದೆ. ಉಗ್ರರ ಮೂಲಸೌಕರ್ಯಗಳನ್ನು ನಾಶಪಡಿಸುವುದು ಈ ಕಾರ್ಯಾಚರಣೆಯ ಉದ್ದೇಶವಾಗಿತ್ತು ಎಂದು ಪಾಕಿಸ್ತಾನ ಹೇಳಿಕೊಂಡಿದೆ. ಆದರೆ ಈ ದಾಳಿಗೆ 400 ಕ್ಕೂ ಅಧಿಕ ಅಮಾಯಕರು ಬಲಿಯಾಗಿದ್ದಾರೆ ತಾಲಿಬಾನ್ ಸರ್ಕಾರ ಆರೋಪಿಸಿದೆ.

ನಿಮ್ಮ ಈ ಕೃತ್ಯ ಅಸಹ್ಯಕರ: ಪಾಕ್ ವಿರುದ್ಧ ಅಫ್ಘಾನ್ ಕ್ರಿಕೆಟಿಗರ ಆಕ್ರೋಶ
Afghanistan Cricketers
ಝಾಹಿರ್ ಯೂಸುಫ್
|

Updated on:Mar 17, 2026 | 12:23 PM

Share

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಸೋಮವಾರ (ಮಾರ್ಚ್ 16, 2026) ರಾತ್ರಿ ಪಾಕಿಸ್ತಾನ್ ನಡೆಸಿದ ವೈಮಾನಿಕ ದಾಳಿಯಲ್ಲಿ 400 ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.  ಕಾಬೂಲ್‌ನಲ್ಲಿರುವ ಓಮಿದ್ ಮಾದಕ ವ್ಯಸನ ಮುಕ್ತಿ ಕೇಂದ್ರ (Omid Addiction Treatment Hospital) ಎಂಬ 2,000 ಹಾಸಿಗೆಗಳ ಆಸ್ಪತ್ರೆಯನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ. ಈ ಭೀಕರ ದಾಳಿಯಿಂದಾಗಿ ನಾನೂರಕ್ಕೂ ಅಧಿಕ ಮಂದಿ ಮೃತಪಟ್ಟರೆ, ಸುಮಾರು 250ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಅಫ್ಘಾನ್ ಕ್ರಿಕೆಟಿಗರ ಆಕ್ರೋಶ

ಪಾಕಿಸ್ತಾನ್ ಸೇನೆ ನಡೆಸಿದ ಈ ಭೀಕರ ದಾಳಿಯನ್ನು ಅಫ್ಘಾನಿಸ್ತಾನ್ ತಂಡದ ಪ್ರಮುಖ ಆಟಗಾರರು ಸೋಷಿಯಲ್ ಮೀಡಿಯಾ ಮೂಲಕ ಖಂಡಿಸಿದ್ದಾರೆ. ಅಲ್ಲದೆ ಪಾಕ್  ಕ್ರಮವನ್ನು “ಯುದ್ಧಾಪರಾಧ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಶೀದ್ ಖಾನ್: “ನಾಗರಿಕ ವಸತಿಗಳು ಅಥವಾ ವೈದ್ಯಕೀಯ ಕೇಂದ್ರಗಳನ್ನು ಗುರಿಯಾಗಿಸುವುದು ಯುದ್ಧಾಪರಾಧ. ರಂಝಾನ್ ಸಮಯದಲ್ಲಿ ಇಂತಹ ಅಮಾನುಷ ಕೃತ್ಯ ಎಸಗಿರುವುದು ಅಸಹ್ಯಕರ,” ಎಂದು ಅಫ್ಘಾನ್ ತಂಡದ ಸ್ಟಾರ್ ಆಟಗಾರ ರಶೀದ್ ಖಾನ್ ಕಿಡಿಕಾರಿದ್ದಾರೆ.

ಮೊಹಮ್ಮದ್ ನಬಿ: “ಚಿಕಿತ್ಸೆ ಪಡೆಯುತ್ತಿದ್ದ ಯುವಕರನ್ನು ಕೊಲೆ ಮಾಡಲಾಗಿದೆ. ಆಸ್ಪತ್ರೆಯ ಹೊರಗೆ ಕಾಯುತ್ತಿದ್ದ ತಾಯಂದಿರ ಆಕ್ರಂದನ ಕೇಳುವವರಿಲ್ಲ,” ಎಂದು ಮೊಹಮ್ಮದ್ ನಬಿ ಬೇಸರ ವ್ಯಕ್ತಪಡಿಸಿದ್ದಾರೆ.

ನವೀನ್-ಉಲ್-ಹಕ್: “ಇಸ್ರೇಲ್ ಮತ್ತು ಪಾಕಿಸ್ತಾನ ಸರ್ಕಾರದ ನಡುವೆ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ,” ಎಂದು ಅಫ್ಘಾನ್ ವೇಗಿ ನವೀನ್ ಉಲ್ ಹಕ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಅಝ್ಮತುಲ್ಲಾ ಒಮರ್​ಝಾಹಿ: ಅಮಾಯಕ ಜೀವಗಳ ಬಲಿದಾನಕ್ಕೆ ನ್ಯಾಯ ಸಿಗಬೇಕು ಎಂದು ಅಫ್ಘಾನಿಸ್ತಾನ್ ತಂಡದ ಆಲ್​ರೌಂಡರ್ ಅಝ್ಮತುಲ್ಲಾ ಒಮರ್​ಝಾಹಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಸರ್ಕಾರಗಳ ಪ್ರತಿಕ್ರಿಯೆ

  • ಪಾಕಿಸ್ತಾನದ ಸಮರ್ಥನೆ: ಪಾಕಿಸ್ತಾನದ ರಕ್ಷಣಾ ಸಚಿವಾಲಯವು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ವಾದಿಸಿದೆ. ಭಯೋತ್ಪಾದಕರ ಅಡಗುದಾಣಗಳು ಮತ್ತು ಶಸ್ತ್ರಾಸ್ತ್ರ ಸಂಗ್ರಹಣಾ ಕೇಂದ್ರಗಳ ಮೇಲೆ ಮಾತ್ರ “ನಿಖರ ದಾಳಿ” ನಡೆಸಿರುವುದಾಗಿ ಹೇಳಿಕೊಂಡಿದೆ.
  • ಅಫ್ಘಾನಿಸ್ತಾನದ ಎಚ್ಚರಿಕೆ: ಇದು ಮಾನವೀಯತೆಯ ವಿರುದ್ಧದ ಅಪರಾಧವಾಗಿದ್ದು, ಪಾಕಿಸ್ತಾನದೊಂದಿಗಿನ ರಾಜತಾಂತ್ರಿಕ ಸಂಬಂಧಗಳು ಮಿತಿ ಮೀರಿವೆ ಮತ್ತು ಇದಕ್ಕೆ ತಕ್ಕ ಪ್ರತಿಕಾರ ತೀರಿಸಿಕೊಳ್ಳಲಾಗುವುದು ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ದಿ ಹಂಡ್ರೆಡ್ ಲೀಗ್​ನ 8 ತಂಡಗಳು ಪ್ರಕಟ

ಅಫ್ಘಾನಿಸ್ತಾನ್ ಮೇಲೆ ಪಾಕಿಸ್ತಾನ್ ನಡೆಸಿದ ಈ ದಾಳಿಯು ಫೆಬ್ರವರಿ 2026 ರಿಂದ ಉಭಯ ದೇಶಗಳ ನಡುವೆ ನಡೆಯುತ್ತಿರುವ ಗಡಿ ಸಂಘರ್ಷದ ಒಂದು ಭಾಗವಾಗಿದ್ದು, ಪರಿಸ್ಥಿತಿ ಈಗ “ಮುಕ್ತ ಯುದ್ಧ”ಕ್ಕೆ ಆಹ್ವಾನ ನೀಡಿದಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Published On - 11:07 am, Tue, 17 March 26

Follow Us
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?
ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?