AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಬೈ ಸೆ ಆಯಾ ಮೇರಾ ದೋಸ್ತ್: ರೋಹಿತ್ ಶರ್ಮಾ ಕೊಡುಗೆ ನೆನೆದ ರಶೀದ್ ಖಾನ್

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ರೋಚಕ ಜಯ ಸಾಧಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 20 ಓವರ್​ಗಳಲ್ಲಿ 115 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡ 105 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನ್ ಪಡೆ ಚೊಚ್ಚಲ ಬಾರಿಗೆ ವಿಶ್ವಕಪ್​ನ ಸೆಮಿಫೈನಲ್ ಹಂತಕ್ಕೇರಿದೆ.

ಬಾಂಬೈ ಸೆ ಆಯಾ ಮೇರಾ ದೋಸ್ತ್: ರೋಹಿತ್ ಶರ್ಮಾ ಕೊಡುಗೆ ನೆನೆದ ರಶೀದ್ ಖಾನ್
Rashid Khan - Rohit Sharma
ಝಾಹಿರ್ ಯೂಸುಫ್
|

Updated on: Jun 25, 2024 | 5:53 PM

Share

T20 World Cup 2024: ಟಿ20 ವಿಶ್ವಕಪ್​ ಟೂರ್ನಿಯ ಸೆಮಿಫೈನಲ್​ ಪಂದ್ಯಗಳಿಗೆ ವೇದಿಕೆ ಸಿದ್ಧವಾಗಿದೆ. ಈ ಬಾರಿ ನಾಕೌಟ್ ಹಂತದಲ್ಲಿ ಇಂಗ್ಲೆಂಡ್, ಭಾರತ, ಸೌತ್ ಆಫ್ರಿಕಾ ತಂಡಗಳೊಡನೆ ಅಫ್ಘಾನಿಸ್ತಾನ್ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಅಫ್ಘಾನ್ ಪಡೆ ಸೆಮಿಫೈನಲ್​ಗೆ ಪ್ರವೇಶಿಸಿದೆ. ಹೀಗೆ ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಪ್ರವೇಶಿಸಿದ್ದು ಭಾರತ ತಂಡದ ನೆರವಿನಿಂದ ಎಂಬುದು ವಿಶೇಷ. ಅಂದರೆ ಆಸ್ಟ್ರೇಲಿಯಾ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತು.

ಒಂದು ವೇಳೆ ಈ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಗೆದ್ದಿದ್ದರೆ ಅಫ್ಘಾನಿಸ್ತಾನ್ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಅಫ್ಘಾನ್ ಪಾಲಿಗೆ ನಿರ್ಣಾಯಕವಾಗಿದ್ದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾ ಆಸ್ಟ್ರೇಲಿಯಾ ತಂಡವನ್ನು ವಿಶ್ವಕಪ್​ನಿಂದ ಹೊರಬೀಳುವಂತೆ ಮಾಡಿದ್ದರು.

ಇತ್ತ ಅಫ್ಘಾನಿಸ್ತಾನ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ 8 ರನ್​ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿದೆ. ಈ ಗೆಲುವಿನ ಸಂಭ್ರಮದ ನಡುವೆ ರಶೀದ್ ಖಾನ್ ರೋಹಿತ್ ಶರ್ಮಾ ಅವರ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ಈ ಫೋಟೋಗೆ ಬಾಂಬೈ ಸೆ ಆಯಾ ಮೇರಾ ದೋಸ್ತ್ (ಮುಂಬೈನಿಂದ ಬಂದ ನನ್ನ ಗೆಳೆಯ) ಎಂದು ಕ್ಯಾಪ್ಷನ್ ನೀಡಿದ್ದಾರೆ. ಈ ಮೂಲಕ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಲು ರೋಹಿತ್ ಶರ್ಮಾ ಪರೋಕ್ಷವಾಗಿ ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.

ಇದೀಗ ರಶೀದ್ ಖಾನ್ ಹಾಗೂ ರೋಹಿತ್ ಶರ್ಮಾ ನಡುವಣ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಉಭಯ ಆಟಗಾರರ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ.

ರಶೀದ್ ಖಾನ್ ಇನ್​ಸ್ಟಾಗ್ರಾಮ್ ಪೋಸ್ಟ್​:

View this post on Instagram

A post shared by Rashid Khan (@rashid.khan19)

ಇದನ್ನೂ ಓದಿ: Australia: ಆಸ್ಟ್ರೇಲಿಯಾ ತಂಡದ ವಿಶ್ವ ದಾಖಲೆಯ ಕನಸು ಚೂರು ಚೂರು..!

ಸೆಮಿಫೈನಲ್ ಪಂದ್ಯ ಯಾವಾಗ?

ಟಿ20 ವಿಶ್ವಕಪ್ 2024ರ ಮೊದಲ ಸೆಮಿಫೈನಲ್ ಪಂದ್ಯ ಜೂನ್ 26 ರಂದು (ಭಾರತದಲ್ಲಿ ಜೂನ್ 27) ಬಾರ್ಬಡೋಸ್​ನಲ್ಲಿ ನಡೆಯಲಿದೆ. ಇನ್ನು ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಜೂನ್ 27 ರಂದು ಜರುಗಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

  • ಗುರುವಾರ, 27 ಜೂನ್ (6:00 IST): ಸೌತ್ ಆಫ್ರಿಕಾ vs ಅಫ್ಘಾನಿಸ್ತಾನ್ (ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ, ಟ್ರಿನಿಡಾಡ್- ಟೊಬಾಗೊ)
  • ಗುರುವಾರ, 27 ಜೂನ್: (8:00 IST): ಭಾರತ vs ಇಂಗ್ಲೆಂಡ್ (ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನಾ)
  • ಶನಿವಾರ, 29 ಜೂನ್: (8:00 IST): ಫೈನಲ್ ಪಂದ್ಯ (ಕೆನ್ಸಿಂಗ್ಟನ್ ಓವಲ್. ಬಾರ್ಬಡೋಸ್)
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ