AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ತಾಲಿಬಾನಿಗಳಿಗೆ ಮೈದಾನದಿಂದಲೇ ಸವಾಲು ಎಸೆಯುತ್ತಿರುವ ರಶೀದ್ ಖಾನ್

afghanistan crisis: ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.

TV9 Web
| Edited By: |

Updated on: Aug 21, 2021 | 9:55 PM

Share
ಒಂದೆಡೆ ಅಫ್ಘಾನಿಸ್ತಾನದಲ್ಲಿ (afghanistan crisis) ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ನಾಗರೀಕರು ಕೂಡ ಪ್ರತಿರೋಧ ತೋರಲು ಶುರು ಮಾಡಿದ್ದಾರೆ. ಈಗಾಗಲೇ ಬಹುತೇಕ ಭಾಗಗಳನ್ನು ತಾಲಿಬಾನ್ (Taliban)​ ಉಗ್ರರು ವಶಪಡಿಸಿಕೊಂಡರೂ, ಕೆಲ ಭಾಗದಲ್ಲಿ ಅಫ್ಘಾನ್ ಜನರ ಹೋರಾಟವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಒಂದೆಡೆ ಅಫ್ಘಾನಿಸ್ತಾನದಲ್ಲಿ (afghanistan crisis) ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ನಾಗರೀಕರು ಕೂಡ ಪ್ರತಿರೋಧ ತೋರಲು ಶುರು ಮಾಡಿದ್ದಾರೆ. ಈಗಾಗಲೇ ಬಹುತೇಕ ಭಾಗಗಳನ್ನು ತಾಲಿಬಾನ್ (Taliban)​ ಉಗ್ರರು ವಶಪಡಿಸಿಕೊಂಡರೂ, ಕೆಲ ಭಾಗದಲ್ಲಿ ಅಫ್ಘಾನ್ ಜನರ ಹೋರಾಟವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

1 / 6
ತಾಲಿಬಾನಿಗಳು ಅನೇಕ ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಕೆಳಗಿಸಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ಎಂಬ ಧ್ವಜಗಳನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ  ಜಲಲಾಪ್ರದೇಶದಲ್ಲಿನ ಜನರು ಅಫ್ಘಾನ್ ರಾಷ್ಟ್ರಧ್ವಜದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಾಲಿಬಾನಿಗಳಿಗೆ ಸವಾಲು ಹಾಕಿದ್ದಾರೆ.

ತಾಲಿಬಾನಿಗಳು ಅನೇಕ ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಕೆಳಗಿಸಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ಎಂಬ ಧ್ವಜಗಳನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಜಲಲಾಪ್ರದೇಶದಲ್ಲಿನ ಜನರು ಅಫ್ಘಾನ್ ರಾಷ್ಟ್ರಧ್ವಜದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಾಲಿಬಾನಿಗಳಿಗೆ ಸವಾಲು ಹಾಕಿದ್ದಾರೆ.

2 / 6
ಇತ್ತ ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ಕೂಡ ತನ್ನ ದೇಶದ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿರುವ ರಶೀದ್ ಖಾನ್ ಈ ಹಿಂದೆ ಅಫ್ಘಾನಿಸ್ತಾನದ ನೆರವಿಗೆ ಬರುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನ್​ನಲ್ಲಿ ರಾಷ್ಟ್ರ ಇಳಿಸುತ್ತಿದ್ದಂತೆ ರಾಷ್ಟ್ರ ಧಜ್ವಕ್ಕೆ ಮುತ್ತಿಕ್ಕುವ ಫೋಟೋವೊಂದನ್ನು ರಶೀದ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇತ್ತ ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ಕೂಡ ತನ್ನ ದೇಶದ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿರುವ ರಶೀದ್ ಖಾನ್ ಈ ಹಿಂದೆ ಅಫ್ಘಾನಿಸ್ತಾನದ ನೆರವಿಗೆ ಬರುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನ್​ನಲ್ಲಿ ರಾಷ್ಟ್ರ ಇಳಿಸುತ್ತಿದ್ದಂತೆ ರಾಷ್ಟ್ರ ಧಜ್ವಕ್ಕೆ ಮುತ್ತಿಕ್ಕುವ ಫೋಟೋವೊಂದನ್ನು ರಶೀದ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 6
ಇದೀಗ ರಶೀದ್ ಖಾನ್ ದಿ ಹಂಡ್ರೆಡ್ ಲೀಗ್​ನಲ್ಲಿ ತನ್ನ ರಾಷ್ಟ್ರ ಧ್ವಜದೊಂದಿಗೆ ಕಣಕ್ಕಿಳಿದಿದ್ದಾರೆ. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಇದೀಗ ರಶೀದ್ ಖಾನ್ ದಿ ಹಂಡ್ರೆಡ್ ಲೀಗ್​ನಲ್ಲಿ ತನ್ನ ರಾಷ್ಟ್ರ ಧ್ವಜದೊಂದಿಗೆ ಕಣಕ್ಕಿಳಿದಿದ್ದಾರೆ. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

4 / 6
ಇತ್ತ ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವ ಕ್ರಿಕೆಟಿಗನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇತ್ತ ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವ ಕ್ರಿಕೆಟಿಗನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
ತಾಲಿಬಾನಿಗಳ ಆಕ್ರಮಣವನ್ನು ನಾನಾ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರಶೀದ್ ಖಾನ್ ಉಗ್ರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಬಹುತೇಕ ಪ್ರದೇಶವು ತಾಲಿಬಾನ್​ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಆಕ್ರಮಣ ಮಾಡುವ ಆತಂಕ ಕೂಡ ಇದೆ. ಇದಾಗ್ಯೂ  ರಶೀದ್ ಖಾನ್ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ತಾಲಿಬಾನಿಗಳ ಆಕ್ರಮಣವನ್ನು ನಾನಾ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರಶೀದ್ ಖಾನ್ ಉಗ್ರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಬಹುತೇಕ ಪ್ರದೇಶವು ತಾಲಿಬಾನ್​ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಆಕ್ರಮಣ ಮಾಡುವ ಆತಂಕ ಕೂಡ ಇದೆ. ಇದಾಗ್ಯೂ ರಶೀದ್ ಖಾನ್ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ