Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashid Khan: ತಾಲಿಬಾನಿಗಳಿಗೆ ಮೈದಾನದಿಂದಲೇ ಸವಾಲು ಎಸೆಯುತ್ತಿರುವ ರಶೀದ್ ಖಾನ್

afghanistan crisis: ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 21, 2021 | 9:55 PM

ಒಂದೆಡೆ ಅಫ್ಘಾನಿಸ್ತಾನದಲ್ಲಿ (afghanistan crisis) ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ನಾಗರೀಕರು ಕೂಡ ಪ್ರತಿರೋಧ ತೋರಲು ಶುರು ಮಾಡಿದ್ದಾರೆ. ಈಗಾಗಲೇ ಬಹುತೇಕ ಭಾಗಗಳನ್ನು ತಾಲಿಬಾನ್ (Taliban)​ ಉಗ್ರರು ವಶಪಡಿಸಿಕೊಂಡರೂ, ಕೆಲ ಭಾಗದಲ್ಲಿ ಅಫ್ಘಾನ್ ಜನರ ಹೋರಾಟವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಒಂದೆಡೆ ಅಫ್ಘಾನಿಸ್ತಾನದಲ್ಲಿ (afghanistan crisis) ತಾಲಿಬಾನಿಗಳ ಅಟ್ಟಹಾಸ ಮುಂದುವರೆದಿದೆ. ಇನ್ನೊಂದೆಡೆ ನಾಗರೀಕರು ಕೂಡ ಪ್ರತಿರೋಧ ತೋರಲು ಶುರು ಮಾಡಿದ್ದಾರೆ. ಈಗಾಗಲೇ ಬಹುತೇಕ ಭಾಗಗಳನ್ನು ತಾಲಿಬಾನ್ (Taliban)​ ಉಗ್ರರು ವಶಪಡಿಸಿಕೊಂಡರೂ, ಕೆಲ ಭಾಗದಲ್ಲಿ ಅಫ್ಘಾನ್ ಜನರ ಹೋರಾಟವನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

1 / 6
ತಾಲಿಬಾನಿಗಳು ಅನೇಕ ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಕೆಳಗಿಸಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ಎಂಬ ಧ್ವಜಗಳನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ  ಜಲಲಾಪ್ರದೇಶದಲ್ಲಿನ ಜನರು ಅಫ್ಘಾನ್ ರಾಷ್ಟ್ರಧ್ವಜದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಾಲಿಬಾನಿಗಳಿಗೆ ಸವಾಲು ಹಾಕಿದ್ದಾರೆ.

ತಾಲಿಬಾನಿಗಳು ಅನೇಕ ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜವನ್ನು ಕೆಳಗಿಸಿ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಅಫ್ಘಾನಿಸ್ತಾನ್ ಎಂಬ ಧ್ವಜಗಳನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಜಲಲಾಪ್ರದೇಶದಲ್ಲಿನ ಜನರು ಅಫ್ಘಾನ್ ರಾಷ್ಟ್ರಧ್ವಜದೊಂದಿಗೆ ಬೃಹತ್ ಮೆರವಣಿಗೆ ನಡೆಸಿ ತಾಲಿಬಾನಿಗಳಿಗೆ ಸವಾಲು ಹಾಕಿದ್ದಾರೆ.

2 / 6
ಇತ್ತ ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ಕೂಡ ತನ್ನ ದೇಶದ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿರುವ ರಶೀದ್ ಖಾನ್ ಈ ಹಿಂದೆ ಅಫ್ಘಾನಿಸ್ತಾನದ ನೆರವಿಗೆ ಬರುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನ್​ನಲ್ಲಿ ರಾಷ್ಟ್ರ ಇಳಿಸುತ್ತಿದ್ದಂತೆ ರಾಷ್ಟ್ರ ಧಜ್ವಕ್ಕೆ ಮುತ್ತಿಕ್ಕುವ ಫೋಟೋವೊಂದನ್ನು ರಶೀದ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಇತ್ತ ಅಫ್ಘಾನಿಸ್ತಾನದ ಕ್ರಿಕೆಟಿಗ ರಶೀದ್ ಖಾನ್ ಕೂಡ ತನ್ನ ದೇಶದ ಜನರಿಗೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಇಂಗ್ಲೆಂಡ್​ನಲ್ಲಿ ದಿ ಹಂಡ್ರೆಡ್ ಲೀಗ್ ಆಡುತ್ತಿರುವ ರಶೀದ್ ಖಾನ್ ಈ ಹಿಂದೆ ಅಫ್ಘಾನಿಸ್ತಾನದ ನೆರವಿಗೆ ಬರುವಂತೆ ವಿಶ್ವ ನಾಯಕರಿಗೆ ಮನವಿ ಮಾಡಿದ್ದರು. ಅಷ್ಟೇ ಅಲ್ಲದೆ ತಾಲಿಬಾನಿಗಳು ಅಫ್ಘಾನ್​ನಲ್ಲಿ ರಾಷ್ಟ್ರ ಇಳಿಸುತ್ತಿದ್ದಂತೆ ರಾಷ್ಟ್ರ ಧಜ್ವಕ್ಕೆ ಮುತ್ತಿಕ್ಕುವ ಫೋಟೋವೊಂದನ್ನು ರಶೀದ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

3 / 6
ಇದೀಗ ರಶೀದ್ ಖಾನ್ ದಿ ಹಂಡ್ರೆಡ್ ಲೀಗ್​ನಲ್ಲಿ ತನ್ನ ರಾಷ್ಟ್ರ ಧ್ವಜದೊಂದಿಗೆ ಕಣಕ್ಕಿಳಿದಿದ್ದಾರೆ. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

ಇದೀಗ ರಶೀದ್ ಖಾನ್ ದಿ ಹಂಡ್ರೆಡ್ ಲೀಗ್​ನಲ್ಲಿ ತನ್ನ ರಾಷ್ಟ್ರ ಧ್ವಜದೊಂದಿಗೆ ಕಣಕ್ಕಿಳಿದಿದ್ದಾರೆ. ಟ್ರೆಂಟ್ ರಾಕೆಟ್ಸ್ ತಂಡದ ಪರ ಆಡುತ್ತಿರುವ ಸ್ಪಿನ್ ಮಾಂತ್ರಿಕ ಮುಖದ ಮೇಲೆ ಅಫ್ಘಾನ್ ಧ್ವಜವನ್ನು ಚಿತ್ರಿಸಿ ಮೈದಾನಕ್ಕಿಳಿದಿದ್ದರು. ಈ ಮೂಲಕ ದೇಶದ ಮೇಲಿನ ತನ್ನ ಪ್ರೀತಿಯನ್ನು ಹಾಗೂ ಅಫ್ಘಾನಿಸ್ತಾನದ ರಾಷ್ಟ್ರ ಧ್ವಜದ ಹಿರಿಮೆಯನ್ನು ವಿಶ್ವಕ್ಕೆ ಸಾರುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದುವೇ ನನ್ನ ರಾಷ್ಟ್ರೀಯ ಧ್ವಜ ಎಂದು ಪತಾಕೆ ಬದಲಿಸಿದ ತಾಲಿಬಾನಿಗಳಿಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.

4 / 6
ಇತ್ತ ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವ ಕ್ರಿಕೆಟಿಗನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇತ್ತ ಸೋಷಿಯಲ್ ಮೀಡಿಯಾದಲ್ಲಿ ರಶೀದ್ ಖಾನ್ ತಮ್ಮ ದೇಶದ ಮೇಲಿನ ಬದ್ಧತೆಯನ್ನು ಪ್ರದರ್ಶಿಸುತ್ತಿದ್ದಂತೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವ ಕ್ರಿಕೆಟಿಗನ ನಡೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
ತಾಲಿಬಾನಿಗಳ ಆಕ್ರಮಣವನ್ನು ನಾನಾ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರಶೀದ್ ಖಾನ್ ಉಗ್ರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಬಹುತೇಕ ಪ್ರದೇಶವು ತಾಲಿಬಾನ್​ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಆಕ್ರಮಣ ಮಾಡುವ ಆತಂಕ ಕೂಡ ಇದೆ. ಇದಾಗ್ಯೂ  ರಶೀದ್ ಖಾನ್ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

ತಾಲಿಬಾನಿಗಳ ಆಕ್ರಮಣವನ್ನು ನಾನಾ ರೀತಿಯಲ್ಲಿ ಪ್ರತಿಭಟಿಸುತ್ತಿರುವ ರಶೀದ್ ಖಾನ್ ಉಗ್ರರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೀಗ ಬಹುತೇಕ ಪ್ರದೇಶವು ತಾಲಿಬಾನ್​ ಹಿಡಿತದಲ್ಲಿದ್ದು, ಹೀಗಾಗಿ ರಶೀದ್ ಖಾನ್ ಕುಟುಂಬದ ಮೇಲೆ ಆಕ್ರಮಣ ಮಾಡುವ ಆತಂಕ ಕೂಡ ಇದೆ. ಇದಾಗ್ಯೂ ರಶೀದ್ ಖಾನ್ ತನ್ನ ಪ್ರತಿಭಟನೆಯನ್ನು ಮುಂದುವರೆಸುತ್ತಿರುವುದು ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.

6 / 6
Follow us
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?