AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ

R Ashwin Retirement: 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

R Ashwin Retirement: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ
Ashwin
Follow us
ಝಾಹಿರ್ ಯೂಸುಫ್
|

Updated on:Dec 18, 2024 | 11:39 AM

ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.

ಹಾಗೆಯೇ 116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿರುವ ಅಶ್ವಿನ್ 6303 ಎಸೆತಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. ಇನ್ನು 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿರುವ ಅಶ್ವಿನ್ 72 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೂರು ಸ್ವರೂಪಗಳಲ್ಲೂ 50 ಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ.

38 ವರ್ಷದ ಅಶ್ವಿನ್ ಕೊನೆಯ ಬಾರಿ ಏಕದಿನ ಪಂದ್ಯವಾಡಿದ್ದು 2023 ರಲ್ಲಿ. ಇದಾದ ಬಳಿಕ ಅವರು ಭಾರತ ಏಕದಿನ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಹಾಗೆಯೇ 2022 ರಲ್ಲಿ ಕೊನೆಯ ಟಿ20 ಪಂದ್ಯವಾಡಿದ್ದ ಅಶ್ವಿನ್ ಟೀಮ್ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯರಾಗಿದ್ದರು.

ಇದನ್ನೂ ಓದಿ: WTC final: ಭಾರತ vs ಆಸ್ಟ್ರೇಲಿಯಾ ಗಾಬಾ ಟೆಸ್ಟ್ ಡ್ರಾ ಆದರೆ ಯಾರಿಗೆ ಲಾಭ?

ಅದರಲ್ಲೂ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ  ಪಂದ್ಯದಲ್ಲಿ ರವಿಂದ್ರನ್ ಅಶ್ವಿನ್ ಕಣಕ್ಕಿಳಿದಿದ್ದರು. ಆದರೆ ಮೂರನೇ ಪಂದ್ಯದಿಂದ ಅವರನ್ನು ಕೈ ಬಿಡಲಾಗಿದೆ. ಇನ್ನೂ ಎರಡು ಟೆಸ್ಟ್ ಪಂದ್ಯಗಳು ಬಾಕಿಯಿದ್ದು, ಅದಕ್ಕೂ ಮುನ್ನವೇ ದಿಢೀರ್ ನಿವೃತ್ತಿ ಘೋಷಿಸಿ ರವಿಚಂದ್ರನ್ ಅಶ್ವಿನ್ ಅಚ್ಚರಿ ಮೂಡಿಸಿದ್ದಾರೆ. ಇದರೊಂದಿಗೆ ಟೀಮ್ ಇಂಡಿಯಾದಲ್ಲಿ ಯಶಸ್ವಿ ಸ್ಪಿನ್ನರ್​ ಒಬ್ಬರ ಯುಗಾಂತ್ಯವಾದಂತಾಗಿದೆ.

Published On - 11:22 am, Wed, 18 December 24

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್