AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI Cricket: ಏಕದಿನ ಕ್ರಿಕೆಟ್​ನ ಸ್ವರೂಪ ಬದಲಿಸಲು ಹೊಸ ಐಡಿಯಾ ನೀಡಿದ ರವಿ ಶಾಸ್ತ್ರಿ

Ravi Shastri: ಈ ಹಿಂದೆ ಏಕದಿನ ಕ್ರಿಕೆಟ್ 60 ಓವರ್​ಗಳ ಪಂದ್ಯವಾಗಿತ್ತು. ನಾವು 1983ರಲ್ಲಿ ವಿಶ್ವಕಪ್ ಗೆದ್ದಾಗ ಅದು 60 ಓವರ್‌ಗಳ ಇನಿಂಗ್ಸ್ ಆಗಿತ್ತು.

ODI Cricket: ಏಕದಿನ ಕ್ರಿಕೆಟ್​ನ ಸ್ವರೂಪ ಬದಲಿಸಲು ಹೊಸ ಐಡಿಯಾ ನೀಡಿದ ರವಿ ಶಾಸ್ತ್ರಿ
Ravi Shastri
TV9 Web
| Edited By: |

Updated on: Jul 26, 2022 | 3:58 PM

Share

ಕ್ರಿಕೆಟ್ ಅಂಗಳದಲ್ಲಿ ಏಕದಿನ ಸ್ವರೂಪದ ಚರ್ಚೆಗಳು ಜೋರಾಗಿದೆ. 31ನೇ ವರ್ಷಕ್ಕೆ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ನಿವೃತ್ತಿ ಘೋಷಿಸಿದ್ದ ಬೆನ್ನಲ್ಲೇ ಇದೀಗ ಏಕದಿನ ಸ್ವರೂಪದ ಬಗ್ಗೆ ಅನೇಕ ಆಟಗಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಪಾಕ್ ದಿಗ್ಗಜ ವಾಸಿಂ ಅಕ್ರಮ್ ಏಕದಿನ ಕ್ರಿಕೆಟ್​ನ ಪ್ರಾಮುಖ್ಯತೆಯು ಕುಂಠಿತವಾಗುತ್ತಿದೆ ಎಂದು ಹೇಳಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಆಟಗಾರ ರವಿ ಶಾಸ್ತ್ರ್ರಿ ಕೂಡ ಏಕದಿನ ಸ್ವರೂಪದ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ತರಲು ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರವಿ ಶಾಸ್ತ್ರಿ, ಏಕದಿನ ಕ್ರಿಕೆಟ್ ಅನ್ನು 50 ಓವರ್​ಗಳನ್ನು ಆಡಿಸುವುದು ನಿಲ್ಲಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಬದಲಾಗಿ 40 ಓವರ್​ಗಳ ಪಂದ್ಯಗಳನ್ನು ನಡೆಸಬೇಕು. ಓವರ್​ಗಳ ಕಡಿತದೊಂದಿಗೆ ಪಂದ್ಯದ ಮೇಲಿನ ಆಸಕ್ತಿಯನ್ನು ಉಳಿಸಬಹುದು ಎಂದು ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯದ ಸಮಯವನ್ನು ಕಡಿಮೆ ಮಾಡುವುದರಿಂದ ಯಾವುದೇ ಹಾನಿ ಆಗುವುದಿಲ್ಲ. ಈ ಹಿಂದೆ ಏಕದಿನ ಕ್ರಿಕೆಟ್ 60 ಓವರ್​ಗಳ ಪಂದ್ಯವಾಗಿತ್ತು. ನಾವು 1983ರಲ್ಲಿ ವಿಶ್ವಕಪ್ ಗೆದ್ದಾಗ ಅದು 60 ಓವರ್‌ಗಳ ಇನಿಂಗ್ಸ್ ಆಗಿತ್ತು. ಆ ಬಳಿಕ 60 ಓವರ್‌ಗಳು ದೀರ್ಘಾವಧಿ ಎಂದು ಪರಿಗಣಿಸಲಾಯಿತು. ಹೀಗಾಗಿ ಏಕದಿನ ಪಂದ್ಯವನ್ನು 50 ಓವರ್​ಗಳಿಗೆ ಇಳಿಸಲಾಯಿತು. ಇದರಿಂದ ಯಾವುದೇ ಬದಲಾವಣೆ ಆಗಿರಲಿಲ್ಲ. ಬದಲಾಗಿ ಪಂದ್ಯದ ಮೇಲೆ ಆಸಕ್ತಿ ಹೆಚ್ಚಾಯಿತು ಎಂದು ರವಿ ಶಾಸ್ತ್ರಿ ಹೇಳಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಪ್ರಸ್ತುತ ಸನ್ನಿವೇಶದಲ್ಲಿ ಏಕದಿನ ಕ್ರಿಕೆಟ್ ಅನ್ನು 40 ಓವರ್​ಗಳಿಗೆ ಸೀಮಿತಗೊಳಿಸುವುದು ಸೂಕ್ತ ಎಂದಿರುವ ರವಿ ಶಾಸ್ತ್ರಿ, ಈ ಮೂಲಕ ಓನ್​ಡೇ ಕ್ರಿಕೆಟ್ ಮೇಲಿನ ಆಸಕ್ತಿಯನ್ನು ಉಳಿಸಿಕೊಳ್ಳಬಹುದು. ಹಾಗೆಯೇ ಆಟಗಾರರು ದೀರ್ಘಾವಧಿವರೆಗೆ ಫೀಲ್ಡಿಂಗ್ ಮಾಡುವುದನ್ನು ಸಹ ತಪ್ಪಿಸಬಹುದು ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ಏಕದಿನ ಕ್ರಿಕೆಟ್​ ಅನ್ನು 40 ಓವರ್​ಗಳಿಗೆ ಸೀಮಿತಗೊಳಿಸುವಂತೆ ಸಲಹೆ ನೀಡಿದ್ದರು. ಇದೀಗ ರವಿ ಶಾಸ್ತ್ರಿ ಕೂಡ ಅದೇ ಮಾದರಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೀಗಾಗಿ ಏಕದಿನ ಕ್ರಿಕೆಟ್​ನ ಸ್ವರೂಪ ಬದಲಾಗಲಿದೆಯಾ ಕಾದು ನೋಡಬೇಕಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?