AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI Cricket: ಏಕದಿನ ಕ್ರಿಕೆಟ್​ನ ಸ್ವರೂಪ ಬದಲಿಸಲು ಹೊಸ ಐಡಿಯಾ ನೀಡಿದ ರವಿ ಶಾಸ್ತ್ರಿ

Ravi Shastri: ಈ ಹಿಂದೆ ಏಕದಿನ ಕ್ರಿಕೆಟ್ 60 ಓವರ್​ಗಳ ಪಂದ್ಯವಾಗಿತ್ತು. ನಾವು 1983ರಲ್ಲಿ ವಿಶ್ವಕಪ್ ಗೆದ್ದಾಗ ಅದು 60 ಓವರ್‌ಗಳ ಇನಿಂಗ್ಸ್ ಆಗಿತ್ತು.

ODI Cricket: ಏಕದಿನ ಕ್ರಿಕೆಟ್​ನ ಸ್ವರೂಪ ಬದಲಿಸಲು ಹೊಸ ಐಡಿಯಾ ನೀಡಿದ ರವಿ ಶಾಸ್ತ್ರಿ
Ravi Shastri
TV9 Web
| Updated By: ಝಾಹಿರ್ ಯೂಸುಫ್|

Updated on: Jul 26, 2022 | 3:58 PM

Share

ಕ್ರಿಕೆಟ್ ಅಂಗಳದಲ್ಲಿ ಏಕದಿನ ಸ್ವರೂಪದ ಚರ್ಚೆಗಳು ಜೋರಾಗಿದೆ. 31ನೇ ವರ್ಷಕ್ಕೆ ಇಂಗ್ಲೆಂಡ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್ ನಿವೃತ್ತಿ ಘೋಷಿಸಿದ್ದ ಬೆನ್ನಲ್ಲೇ ಇದೀಗ ಏಕದಿನ ಸ್ವರೂಪದ ಬಗ್ಗೆ ಅನೇಕ ಆಟಗಾರರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಪಾಕ್ ದಿಗ್ಗಜ ವಾಸಿಂ ಅಕ್ರಮ್ ಏಕದಿನ ಕ್ರಿಕೆಟ್​ನ ಪ್ರಾಮುಖ್ಯತೆಯು ಕುಂಠಿತವಾಗುತ್ತಿದೆ ಎಂದು ಹೇಳಿದ್ದರು. ಇದೀಗ ಟೀಮ್ ಇಂಡಿಯಾದ ಮಾಜಿ ಆಟಗಾರ ರವಿ ಶಾಸ್ತ್ರ್ರಿ ಕೂಡ ಏಕದಿನ ಸ್ವರೂಪದ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಏಕದಿನ ಕ್ರಿಕೆಟ್​ನಲ್ಲಿ ಬದಲಾವಣೆ ತರಲು ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರವಿ ಶಾಸ್ತ್ರಿ, ಏಕದಿನ ಕ್ರಿಕೆಟ್ ಅನ್ನು 50 ಓವರ್​ಗಳನ್ನು ಆಡಿಸುವುದು ನಿಲ್ಲಿಸಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಬದಲಾಗಿ 40 ಓವರ್​ಗಳ ಪಂದ್ಯಗಳನ್ನು ನಡೆಸಬೇಕು. ಓವರ್​ಗಳ ಕಡಿತದೊಂದಿಗೆ ಪಂದ್ಯದ ಮೇಲಿನ ಆಸಕ್ತಿಯನ್ನು ಉಳಿಸಬಹುದು ಎಂದು ರವಿ ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಪಂದ್ಯದ ಸಮಯವನ್ನು ಕಡಿಮೆ ಮಾಡುವುದರಿಂದ ಯಾವುದೇ ಹಾನಿ ಆಗುವುದಿಲ್ಲ. ಈ ಹಿಂದೆ ಏಕದಿನ ಕ್ರಿಕೆಟ್ 60 ಓವರ್​ಗಳ ಪಂದ್ಯವಾಗಿತ್ತು. ನಾವು 1983ರಲ್ಲಿ ವಿಶ್ವಕಪ್ ಗೆದ್ದಾಗ ಅದು 60 ಓವರ್‌ಗಳ ಇನಿಂಗ್ಸ್ ಆಗಿತ್ತು. ಆ ಬಳಿಕ 60 ಓವರ್‌ಗಳು ದೀರ್ಘಾವಧಿ ಎಂದು ಪರಿಗಣಿಸಲಾಯಿತು. ಹೀಗಾಗಿ ಏಕದಿನ ಪಂದ್ಯವನ್ನು 50 ಓವರ್​ಗಳಿಗೆ ಇಳಿಸಲಾಯಿತು. ಇದರಿಂದ ಯಾವುದೇ ಬದಲಾವಣೆ ಆಗಿರಲಿಲ್ಲ. ಬದಲಾಗಿ ಪಂದ್ಯದ ಮೇಲೆ ಆಸಕ್ತಿ ಹೆಚ್ಚಾಯಿತು ಎಂದು ರವಿ ಶಾಸ್ತ್ರಿ ಹೇಳಿದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಪ್ರಸ್ತುತ ಸನ್ನಿವೇಶದಲ್ಲಿ ಏಕದಿನ ಕ್ರಿಕೆಟ್ ಅನ್ನು 40 ಓವರ್​ಗಳಿಗೆ ಸೀಮಿತಗೊಳಿಸುವುದು ಸೂಕ್ತ ಎಂದಿರುವ ರವಿ ಶಾಸ್ತ್ರಿ, ಈ ಮೂಲಕ ಓನ್​ಡೇ ಕ್ರಿಕೆಟ್ ಮೇಲಿನ ಆಸಕ್ತಿಯನ್ನು ಉಳಿಸಿಕೊಳ್ಳಬಹುದು. ಹಾಗೆಯೇ ಆಟಗಾರರು ದೀರ್ಘಾವಧಿವರೆಗೆ ಫೀಲ್ಡಿಂಗ್ ಮಾಡುವುದನ್ನು ಸಹ ತಪ್ಪಿಸಬಹುದು ಎಂದು ಹೇಳಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ಏಕದಿನ ಕ್ರಿಕೆಟ್​ ಅನ್ನು 40 ಓವರ್​ಗಳಿಗೆ ಸೀಮಿತಗೊಳಿಸುವಂತೆ ಸಲಹೆ ನೀಡಿದ್ದರು. ಇದೀಗ ರವಿ ಶಾಸ್ತ್ರಿ ಕೂಡ ಅದೇ ಮಾದರಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೀಗಾಗಿ ಏಕದಿನ ಕ್ರಿಕೆಟ್​ನ ಸ್ವರೂಪ ಬದಲಾಗಲಿದೆಯಾ ಕಾದು ನೋಡಬೇಕಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ