AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ ಅಚ್ಚರಿಯ ಹೆಸರುಗಳಿರುವ ತಂಡ ಪ್ರಕಟಿಸಿದ ಮಾಜಿ ಕೋಚ್ ರವಿಶಾಸ್ತ್ರಿ

Ravi Shastri World Cup Squad: ಮುಂದಿನ ಏಕದಿನ ವಿಶ್ವಕಪ್‌ಗೆ ಟೀಂ ಇಂಡಿಯಾ ತಂಡ ಹೇಗಿರಬೇಕು ಎಂದು ಮಾಜಿ ಕೋಚ್ ರವಿಶಾಸ್ತ್ರಿ ತಮ್ಮ ಆಯ್ಕೆಯನ್ನು ಬಹಿರಂಗಪಡಿಸಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ, ಹಾಗೂ ರಿಷಭ್ ಪಂತ್‌ಗೆ ಅವಕಾಶ ಕಲ್ಪಿಸಿ, ಇಶಾನ್ ಕಿಶನ್‌ರನ್ನು ಶಾಸ್ತ್ರಿ ಕೈಬಿಟ್ಟಿದ್ದಾರೆ. ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಸೇರಿದಂತೆ ಬಲಿಷ್ಠ ಬೌಲಿಂಗ್ ಪಡೆಯನ್ನು ಆಯ್ಕೆ ಮಾಡಿದ್ದು, ಕೆಲವು ಅಚ್ಚರಿಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ಏಕದಿನ ವಿಶ್ವಕಪ್​ಗೆ ಅಚ್ಚರಿಯ ಹೆಸರುಗಳಿರುವ ತಂಡ ಪ್ರಕಟಿಸಿದ ಮಾಜಿ ಕೋಚ್ ರವಿಶಾಸ್ತ್ರಿ
Team India
ಪೃಥ್ವಿಶಂಕರ
|

Updated on: Jul 22, 2026 | 4:22 PM

Share

ಮುಂದಿನ ವರ್ಷ ಅಂದರೆ 2027 ರಲ್ಲಿ ನಡೆಯಲಿರುವ  ಏಕದಿನ ವಿಶ್ವಕಪ್​ಗೆ (ODI World Cup 2027) ಟೀಂ ಇಂಡಿಯಾದಲ್ಲಿ (Team India) ಯಾರಿಗೆಲ್ಲ ಅವಕಾಶ ಸಿಗಲಿದೆ ಎಂಬುದು ಇದುವರೆಗೂ ಖಚಿತವಾಗಿಲ್ಲ. ಅದರಲ್ಲೂ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಮೊಹಮ್ಮದ್ ಸಿರಾಜ್ ಮತ್ತು ಮೊಹಮ್ಮದ್ ಶಮಿಗೆ ಸ್ಥಾನ ಸಿಗುತ್ತದೆಯೇ? ಇಶಾನ್ ಕಿಶನ್ ವಿಕೆಟ್ ಕೀಪರ್ ಆಗುತ್ತಾರೆಯೇ ಅಥವಾ ರಿಷಭ್ ಪಂತ್ ಏಕದಿನ ತಂಡಕ್ಕೆ ಮರಳುತ್ತಾರೆಯೇ? ಎಂಬುದನ್ನು ಹೇಳಲು ಸಾಧ್ಯವಾಗುತ್ತಿಲ್ಲ. ಇದೆಲ್ಲದರ ನಡುವೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ (Ravi Shastri) 2027 ರ ಏಕದಿನ ವಿಶ್ವಕಪ್​ಗೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ್ದಾರೆ.

ಬ್ಯಾಟಿಂಗ್‌ ವಿಭಾಗದಲ್ಲಿ ಯಾರ್ಯಾರು?

ರವಿಶಾಸ್ತ್ರಿ ಅವರ ಏಕದಿನ ವಿಶ್ವಕಪ್ ತಂಡದಲ್ಲಿ ಶುಭ್​ಮನ್ ಗಿಲ್ ಆರಂಭಿಕನಾಗಿ ಆಯ್ಕೆಯಾಗಿದ್ದರೆ, ಇನ್ನೊಂದು ಆರಂಭಿಕ ಸ್ಥಾನಕ್ಕೆ ರೋಹಿತ್ ಮತ್ತು ಯಶಸ್ವಿ ಜೈಸ್ವಾಲ್ ಇಬ್ಬರನ್ನೂ ಆಯ್ಕೆ ಮಾಡಲಾಗಿದೆ. ಶಾಸ್ತ್ರಿ ಪ್ರಕಾರ, ರೋಹಿತ್ ಖಂಡಿತವಾಗಿಯೂ ಏಕದಿನ ವಿಶ್ವಕಪ್‌ನಲ್ಲಿ ಆಡಬೇಕು, ಆದರೆ ಜೈಸ್ವಾಲ್ ಬ್ಯಾಕಪ್ ಓಪನರ್ ಆಗಿರಬೇಕು. ಇವರಲ್ಲದೆ, ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅವರಂತಹ ಹೆಸರುಗಳಿವೆ. ಕುತೂಹಲಕಾರಿಯಾಗಿ, ಶಾಸ್ತ್ರಿ ಅವರು ಇಶಾನ್ ಕಿಶನ್ ಬದಲಿಗೆ ರಿಷಭ್ ಪಂತ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.

ಮೂವರು ಆಲ್‌ರೌಂಡರ್‌ಗಳ ಆಯ್ಕೆ

ಆಲ್‌ರೌಂಡರ್ ವಿಭಾಗದಲ್ಲಿ ರವಿಶಾಸ್ತ್ರಿ ಹಾರ್ದಿಕ್ ಪಾಂಡ್ಯ ಅವರನ್ನು ಮೊದಲ ಆಯ್ಕೆಯ ಆಲ್‌ರೌಂಡರ್ ಆಗಿ ಆಯ್ಕೆ ಮಾಡಿದ್ದಾರೆ. ಹಾಗೆಯೇ ಸ್ಪಿನ್ ಆಲ್‌ರೌಂಡರ್​ಗಳಾಗಿ ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಸ್ಥಾನ ಪಡೆದಿದ್ದಾರೆ. ಇನ್ನು ಬೌಲಿಂಗ್‌ ವಿಭಾಗದಲ್ಲಿ ರವಿಶಾಸ್ತ್ರಿ, ಬುಮ್ರಾ ಜೊತೆಗೆ ಮೊಹಮ್ಮದ್ ಶಮಿ ಅವರನ್ನು ತಂಡದಲ್ಲಿ ಸೇರಿಸಿಕೊಂಡಿದ್ದಾರೆ. ಮೊಹಮ್ಮದ್ ಸಿರಾಜ್ ಕೂಡ ಏಕದಿನ ವಿಶ್ವಕಪ್‌ನಲ್ಲಿ ಆಡಬೇಕು ಎಂಬುದು ಅವರ ಅಭಿಪ್ರಾಯವಾಗಿದೆ.

ಇಲ್ಲಿ ರವಿಶಾಸ್ತ್ರಿ ಅವರ ಇನ್ನೊಂದು ಅಚ್ಚರಿಯ ಆಯ್ಕೆ ಎಂದರೆ ಭುವನೇಶ್ವರ್ ಕುಮಾರ್. ಬುಮ್ರಾ ಗಾಯಗೊಂಡರೆ, ಅವರ ಅನುಪಸ್ಥಿತಿಯಲ್ಲಿಯೂ ಭಾರತ ತಂಡ ಬಲಿಷ್ಠವಾಗಿ ಕಾಣಿಸಿಕೊಳ್ಳಲು ವಿಶ್ವಕಪ್‌ನಲ್ಲಿ ಅನುಭವಿ ವೇಗದ ಬೌಲಿಂಗ್ ದಾಳಿಯನ್ನು ಬಳಸಬೇಕೆಂದು ಶಾಸ್ತ್ರಿ ನಂಬುತ್ತಾರೆ. ರವಿಶಾಸ್ತ್ರಿ ಅವರು ಕುಲ್ದೀಪ್ ಯಾದವ್ ಅವರನ್ನು ವಿಶೇಷ ಸ್ಪಿನ್ನರ್ ಆಗಿ ಆಯ್ಕೆ ಮಾಡಿದ್ದಾರೆ.

ಟೀಂ ಇಂಡಿಯಾದ ಈ ಮೂವರಿಗೆ ಏಕದಿನ ವಿಶ್ವಕಪ್ ತಂಡದಲ್ಲಿ ಜಾಗವಿಲ್ಲ

ರವಿಶಾಸ್ತ್ರಿ ತಂಡದಲ್ಲಿ ಇವರಿಲ್ಲ

ಭಾರತದ ಪ್ರಸ್ತುತ ಏಕದಿನ ತಂಡದಿಂದ ಹಲವಾರು ಆಟಗಾರರನ್ನು ರವಿಶಾಸ್ತ್ರಿ ಹೊರಗಿಟ್ಟಿದ್ದಾರೆ. ಅವರುಗಳಲ್ಲಿ ಇಶಾನ್ ಕಿಶನ್, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್ ಮತ್ತು ಹರ್ಷಿತ್ ರಾಣಾ ಸೇರಿದ್ದಾರೆ.

ಏಕದಿನ ವಿಶ್ವಕಪ್‌ಗೆ ರವಿಶಾಸ್ತ್ರಿ ಅವರ ತಂಡ: ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us