AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ ಎಂದ ಟೀಮ್ ಇಂಡಿಯಾ ಮಾಜಿ ಆಟಗಾರ

MS Dhoni: ಮಹೇಂದ್ರ ಸಿಂಗ್ ಧೋನಿ ಇದ್ದಕ್ಕಿದ್ದಂತೆ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದರು.

MS Dhoni ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ ಎಂದ ಟೀಮ್ ಇಂಡಿಯಾ ಮಾಜಿ ಆಟಗಾರ
ms dhoni
TV9 Web
| Updated By: ಝಾಹಿರ್ ಯೂಸುಫ್|

Updated on: Jan 26, 2022 | 10:26 PM

Share

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕೂಲ್ ಕ್ಯಾಪ್ಟನ್ ಎಂದೇ ಫೇಮಸ್. ಇದೀಗ ಧೋನಿಯನ್ನು ತುಂಬಾ ಹತ್ತಿರದಿಂದ ಬಲ್ಲವರಾಗಿರುವ ಭಾರತ ತಂಡದ ಮಾಜಿ ಕೋಚ್ ರವಿ ಶಾಸ್ತ್ರಿಯವರು ಟೀಮ್ ಇಂಡಿಯಾ ಮಾಜಿ ನಾಯಕನನ್ನು ಹೊಗಳಿದ್ದಾರೆ. ಎಂಎಸ್​ಡಿ ಅವರ ಶಾಂತ ಸ್ವಭಾವವನ್ನು ಉಲ್ಲೇಖಿಸಿ ಮಾತನಾಡಿರುವ ರವಿ ಶಾಸ್ತ್ರಿ ಧೋನಿಯಂತಹ ವ್ಯಕ್ತಿಯನ್ನು ನಾನು ನೋಡಿಲ್ಲ. ನಾನು ಕೂಡ ಕೆಲ ಆಟಗಾರರೊಂದಿಗೆ ಕೋಪಗೊಂಡಿದ್ದೆ. ಆದರೆ ಎಂದಿಗೂ ಧೋನಿ ಅವರೊಂದಿಗೆ ಸಿಟ್ಟು ಮಾಡಿಕೊಳ್ಳುವಂತಹ ಸನ್ನಿವೇಶವೇ ಬಂದಿರಲಿಲ್ಲ ಎಂದು ಹೇಳಿದರು.

ಲೆಜೆಂಡ್ಸ್ ಕ್ರಿಕೆಟ್ ಲೀಗ್ ಕಮಿಷನರ್ ಆಗಿರುವ ರವಿಶಾಸ್ತ್ರಿ ಶೋಯೆಬ್ ಅಖ್ತರ್ ಅವರೊಂದಿಗೆ ಮಾತುಕತೆ ವೇಳೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಅಸಾಧಾರಣ ವ್ಯಕ್ತಿ. ಅಂತಹ ವ್ಯಕ್ತಿಯನ್ನು ನಾನು ಎಲ್ಲೂ ನೋಡಿಲ್ಲ. ನಾನು ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಆಟಗಾರರನ್ನು ತುಂಬಾ ಹತ್ತಿರದಿಂದ ನೋಡಿದ್ದೇನೆ. ಆದರೆ ಮಹೇಂದ್ರ ಸಿಂಗ್ ಧೋನಿಯಂತಹ ವ್ಯಕ್ತಿತ್ವ ಯಾರಲ್ಲೂ ನೋಡಿಲ್ಲ. ಸಚಿನ್ ಅದ್ಬುತ ಸ್ವಭಾವ ಹೊಂದಿದ್ದರೂ ಸಿಟ್ಟು ಮಾಡಿಕೊಳ್ಳುತ್ತಿದ್ದರು. ಆದರೆ ಮಹೇಂದ್ರ ಸಿಂಗ್ ಧೋನಿಗೆ ಹೇಗೆ ಕೋಪ ಮಾಡಿಕೊಳ್ಳಬೇಕೆಂದೇ ಗೊತ್ತಿರಲಿಲ್ಲ ಎಂದು ಟೀಮ್ ಇಂಡಿಯಾ ಮಾಜಿ ನಾಯಕನ ಗುಣದ ಬಗ್ಗೆ ರವಿ ಶಾಸ್ತ್ರಿ ಹೊಗಳಿದ್ದಾರೆ.

ಸದ್ಯ ರವಿ ಶಾಸ್ತ್ರಿ ಲೆಜೆಂಡ್ಸ್​ ಲೀಗ್​ನ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಶೋಯೆಬ್ ಅಖ್ತರ್ ಏಷ್ಯಾ ಲಯನ್ಸ್ ಪರ ಆಡುತ್ತಿದ್ದಾರೆ. ಈ ವೇಳೆ ರವಿ ಶಾಸ್ತ್ರಿಯನ್ನು ಸಂದರ್ಶನ ನಡೆಸಿದ ಅಖ್ತರ್, ಧೋನಿಯ ಕುರಿತಾದ ಕೆಲ ವಿಷಯಗಳನ್ನು ಪ್ರಸ್ತಾಪಿಸಿದ್ದರು. ಇದೇ ವೇಳೆ ರವಿ ಶಾಸ್ತ್ರಿ ಕೂಡ ಧೋನಿ ಜೊತೆಗಿನ ಒಡನಾಟದ ಬಗ್ಗೆ ಮತ್ತು ಅವರ ನಡವಳಿಕೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು.

ಮಹೇಂದ್ರ ಸಿಂಗ್ ಧೋನಿ ಇದ್ದಕ್ಕಿದ್ದಂತೆ 2020 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇದರ ಬೆನ್ನಲ್ಲೇ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದರು. ಇದಾಗ್ಯೂ ಧೋನಿ ಹಾಗೂ ಸುರೇಶ್ ರೈನಾ ಐಪಿಎಲ್​ನಲ್ಲಿ ಕ್ರಿಕೆಟ್ ಮುಂದುವರೆಸಿದ್ದಾರೆ. ಈ ಬಾರಿ ಕೂಡ ಧೋನಿ ಸಿಎಸ್​ಕೆ ತಂಡದಲ್ಲಿ ರಿಟೈನ್ ಆಗಿದ್ದು, ಸುರೇಶ್ ರೈನಾ ತಂಡದಿಂದ ಹೊರಬಿದ್ದಿದ್ದಾರೆ. ಅಲ್ಲದೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿರುವ ರೈನಾ ಅವರನ್ನು ಯಾವ ತಂಡ ಖರೀದಿಸಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

(ravi shastri reaction about ms dhoni calmness)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ