AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಅಕ್ಷಯ್ ಕುಮಾರ್ ಸಿನಿಮಾದ ರೀಲ್​ಗೆ ಅಶ್ವಿನ್-ಜಡೇಜಾ ಸಖತ್ ರೀಲ್: ವೈರಲ್ ಆಗುತ್ತಿದೆ ವಿಡಿಯೋ

Ravindra Jadeja: ಭಾರತ- ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಪಂದ್ಯ ಮುಗಿದು ಅಶ್ವಿನ್ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಜಡೇಜಾ ಜೊತೆ ಹಂಚಿಕೊಂಡ ನಂತರ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಒಂದು ಹಂಚಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ.

R Ashwin: ಅಕ್ಷಯ್ ಕುಮಾರ್ ಸಿನಿಮಾದ ರೀಲ್​ಗೆ ಅಶ್ವಿನ್-ಜಡೇಜಾ ಸಖತ್ ರೀಲ್: ವೈರಲ್ ಆಗುತ್ತಿದೆ ವಿಡಿಯೋ
Ravindra Jadeja and R Ashwin
Vinay Bhat
|

Updated on:Mar 14, 2023 | 12:01 PM

Share

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟ್ರೋಫಿಯ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಳ್ಳುವ ಮೂಲಕ ಭಾರತ (India vs Australia) ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಸೋಮವಾರ (ಮಾ. 13) ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ನಾಲ್ಕನೇ ಟೆಸ್ಟ್ ಡ್ರಾನಲ್ಲಿ ಅಂತ್ಯ ಕಂಡ ಪರಿಣಾಮ ಟೀಮ್ ಇಂಡಿಯಾ ಮುನ್ನಡೆ ಸಾಧಿಸಿತು. ಇಡೀ ಟೆಸ್ಟ್ ಸರಣಿಯಲ್ಲಿ ಭಾರತೀಯ ಸ್ಪಿನ್ನರ್​ಗಳು ಪರಾಕ್ರಮ ಮೆರೆದರು. ಅದರಲ್ಲೂ ರವಿಚಂದ್ರನ್ ಅಶ್ವಿನ್ (R Ashwin) ಮತ್ತು ರವೀಂದ್ರ ಜಡೇಜಾ (Ravindra Jadeja) ಜೋಡಿ ಈ ಟೆಸ್ಟ್ ಸರಣಿಯನ್ನು ಭಾರತ ವಶಪಡಿಸಿಕೊಳ್ಳಲು ಪ್ರಮುಖ ಪಾತ್ರವಹಿಸಿದರು. ಸೋಮವಾರ ಇಬ್ಬರೂ ಸರಣಿಶ್ರೇಷ್ಠ ಪ್ರಶಸ್ತಿ ಹಂಚಿಕೊಂಡ ನಂತರ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಒಂದು ಹಂಚಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ.

ಬಾಲಿವುಡ್​ನಲ್ಲಿ 2005 ರಲ್ಲಿ ಬಿಡುಗಡೆ ಆದ ಅಕ್ಷಯ್ ಕುಮಾರ್ ಹಾಗೂ ಸುನಿಲ್ ಶೆಟ್ಟಿ ನಟನೆಯ ”ದೀವಾನೆ ಹುಯೇ ಪಾಗಲ್” ಸಿನಿಮಾದ ‘ದೋ ತೇರಾ, ದೋ ಮೇರಾ’ ಫೇಮಸ್ ಕಾಮಿಡಿ ಸೀನ್​ಗೆ ರೀಲ್ಸ್ ಮಾಡಿ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಈ ವಿಡಿಯೋವನ್ನು ಅಶ್ವಿನ್ ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಹಾರ್ದಿಕ್ ಪಾಮಡ್ಯ, ಸೂರ್ಯಕುಮಾರ್ ಯಾದವ್ ಸೇರಿದಂತೆ ಅನೇಕರು ಕಾಮೆಂಟ್ ಮಾಡಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ 4 ಪಂದ್ಯಗಳಲ್ಲಿ ಅಶ್ವಿನ್ 25 ವಿಕೆಟ್ ಕಿತ್ತರೆ, ಜಡೇಜಾ 22 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ
Image
‘ಕ್ರಿಕೆಟರ್​ಗಳ ಕ್ರಶ್​ ಆಗಿದ್ದೀರಿ’; ಶುಬ್​ಮನ್ ಗಿಲ್ ಬಗ್ಗೆ ಹೇಳಿದ್ದಕ್ಕೆ ರಶ್ಮಿಕಾ ಮಂದಣ್ಣ ರಿಯಾಕ್ಷನ್ ಹೇಗಿತ್ತು?
Image
Virat Kohli: ಪಂದ್ಯ ಮುಗಿದ ಬಳಿಕ ಆಸ್ಟ್ರೇಲಿಯಾದ ಇಬ್ಬರು ಪ್ಲೇಯರ್ಸ್​ಗೆ ಮರೆಯಲಾಗದ ಗಿಫ್ಟ್ ಕೊಟ್ಟ ವಿರಾಟ್ ಕೊಹ್ಲಿ
Image
Smriti Mandhana: ಸೋಲಿಗೆ ಆರ್​ಸಿಬಿ ನಾಯಕಿ ಸ್ಮೃತಿ ಮಂಧಾನ ನೀಡಿದ ಕಾರಣವೇನು ನೋಡಿ
Image
Virat Kohli: ಪ್ರಶಸ್ತಿಗಳ ವಿಷಯದಲ್ಲೂ ವಿಶ್ವ ದಾಖಲೆ ಬರೆದ ಕಿಂಗ್ ಕೊಹ್ಲಿ

India vs Australia: ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ: ಉಭಯ ತಂಡಗಳು ಹೀಗಿವೆ

View this post on Instagram

A post shared by Ashwin (@rashwin99)

ಪಂದ್ಯ ಮುಗಿದ ಬಳಿಕ ಅಶ್ವಿನ್ ಬಗ್ಗೆ ಮಾತನಾಡಿದ ಜಡೇಜಾ, ”ಆರ್. ಅಶ್ವಿನ್ ಜೊತೆ ಬೌಲಿಂಗ್ ಮಾಡಲು ಖುಷಿ ಆಗುತ್ತದೆ. ಅವರು ಸಾಕಷ್ಟು ಟಿಪ್ಸ್ ನೀಡುತ್ತಾರೆ. ಯಾವರೀತಿ ಫೀಲ್ಡ್ ಸೆಟ್ ಮಾಡಬೇಕು ಅಥವಾ ಯಾವ ಬ್ಯಾಟರ್​ಗೆ ಹೇಗೆ ಬೌಲಿಂಗ್ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡುತ್ತಾರೆ,” ಎಂದು ಜಡೇಜಾ ಹೇಳಿದ್ದರೆ. ಅಶ್ವಿನ್ ಕೂಡ ಜಡ್ಡು ಬಗ್ಗೆ ಮಾತನಡಿದ್ದು, ”ನಮ್ಮದು ಅದ್ಭುತ ಪಯಣ. ನಾವು ಸಾಕಷ್ಟು ಸಮಯದಿಂದ ಒಟ್ಟಿಗೆ ಇದ್ದೇವೆ. ನನಗೆ ಬೌಲಿಂಗ್ ಮಾಡಲು ಜಡೇಜಾ ಅನೇಕ ಬಾರಿ ಅವಕಾಶ ನೀಡಿದ್ದಾರೆ. ಅವರಿಗೆ ಧನ್ಯವಾದ ಹೇಳಬೇಕು. ದೆಹಲಿ ಟೆಸ್ಟ್​ನಲ್ಲಿ ಜಡೇಜಾ ಅದ್ಭುತ ಬೌಲಿಂಗ್ ಪ್ರದರ್ಶಿಸಿದರು. ಹೀಗಾಗಿ ನಾವಿಂದು ಟೆಸ್ಟ್ ಸರಣಿ ಗೆದ್ದಿದ್ದೇವೆ,” ಎಂದು ಹೇಳಿದ್ದಾರೆ.

ನಾಲ್ಕನೇ ಟೆಸ್ಟ್ ಪಂದ್ಯ ಹೇಗಿತ್ತು?:

ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ಬೃಹತ್​ ರನ್​ ಕಲೆಹಾಕುವಲ್ಲಿ ಯಶಸ್ವಿಯಾಗಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಕಾಂಗರೂ ಪಡೆ ಉಸ್ಮಾನ್ ಖವಾಜಾ ಅವರ 180 ರನ್ ಮತ್ತು ಕ್ಯಾಮೆರಾನ್​ ಗ್ರೀನ್ ಅವರ 114 ರನ್ ನೆರವಿನಿಂದ 480 ರನ್​ ಕಲೆಹಾಕಿತ್ತು. ಇದಕ್ಕುತ್ತರವಾಗಿ ಭಾರತ ಶುಭ್​ಮನ್ ಗಿಲ್​ ಅವರ 128, ವಿರಾಟ್​ ಕೊಹ್ಲಿ 186 ಮತ್ತು ಅಕ್ಷರ್​ ಪಟೇಲ್​ ಅವರ 79 ರನ್​ಗಳ ನೆರವಿನಿಂದ 91 ರನ್​ಗಳ ಮುನ್ನಡೆ ಪಡೆದು 571 ರನ್​ಗೆ ಆಲೌಟ್ ಆಯಿತು. ಕೊನೆಯ ದಿನ ಆಸ್ಟ್ರೇಲಿಯಾ ತನ್ನ ಎಡರಡನೇ ಇನ್ನಿಂಗ್ಸ್​ನಲ್ಲಿ 78.1 ಓವರ್​ನಲ್ಲಿ 175 ರನ್​ಗೆ 2 ವಿಕೆಟ್ ಕಳೆದುಕೊಂಡಿದ್ದಾಗ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು. ಅಶ್ವಿನ್-ಜಡೇಜಾ ಸರಣಿಶ್ರೇಷ್ಠ ಬಾಚಿಕೊಂಡರೆ, ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ತಮ್ಮದಾಗಿಸಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:53 am, Tue, 14 March 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!