AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R. Ashwin: ಇದು ಕ್ರಿಕೆಟ್ ಅಥವಾ ಹಾಕಿ?: ಆರ್. ಅಶ್ವಿನ್ ವಿಚಿತ್ರ ಹೊಡೆತಕ್ಕೆ ಶಾಕ್ ಆದ ಕ್ರಿಕೆಟ್ ಜಗತ್ತು

RR vs DC, IPL 2022: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್. ಅಶ್ವಿನ್ ಐಪಿಎಲ್ ಇತಿಹಾಸದಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಉಪಯುಕ್ತ ಕಾಣಿಕೆ ನೀಡಿದರು. ಈ ಪಂದ್ಯದಲ್ಲಿ ಅಶ್ವಿನ್ ಅವರ ಬ್ಯಾಟಿಂಗ್ ವೈಖರಿ ವಿಶೇಷವಾಗಿತ್ತು. ಕುಲ್ದೀಪ್ ಯಾದವ್ ಬೌಲಿಂಗ್​ನಲ್ಲಿ ಇವರು ಹೊಡೆಯಲು ಯತ್ನಿಸಿದ ವೈಖರಿ ಸಖತ್ ವೈರಲ್ ಆಗುತ್ತಿದೆ.

R. Ashwin: ಇದು ಕ್ರಿಕೆಟ್ ಅಥವಾ ಹಾಕಿ?: ಆರ್. ಅಶ್ವಿನ್ ವಿಚಿತ್ರ ಹೊಡೆತಕ್ಕೆ ಶಾಕ್ ಆದ ಕ್ರಿಕೆಟ್ ಜಗತ್ತು
Ravichandran Ashwin RR vs DC IPL 2022
TV9 Web
| Edited By: |

Updated on:May 12, 2022 | 11:26 AM

Share

ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ (RR vs DC) ತಂಡ ಐಪಿಎಲ್ 2022 (IPL 2022) ರಲ್ಲಿ ಆರನೇ ಜಯ ತನ್ನದಾಗಿಸಿತು. 161 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ಇನ್ನೂ 11 ಎಸೆತ ಬಾಕಿಯಿರುವಂತೆಯೆ ಜಯ ಸಾಧಿಸಿತು. ಕಳೆದುಕೊಂಡಿದ್ದು ಕೇವಲ ಎರಡು ವಿಕೆಟ್​ಗಳನ್ನಷ್ಟೆ. ಮಿಚೆಲ್ ಮಾರ್ಶ್ (89) ಹಾಗೂ ಡೇವಿಡ್ ವಾರ್ನರ್ (52*) ಬೊಂಬಾಟ್ ಜೊತೆಯಾಟ ಆಡಿದರು. ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ಬೇಗನೆ ಜೋಸ್ ಬಟ್ಲರ್ ವಿಕೆಟ್ ಕಳೆದುಕೊಂಡಿತು. ಬಟ್ಲರ್ ನಿರ್ಗಮನದ ಬೆನ್ನಲ್ಲೆ ಅಂದುಕೊಂಡಂತೆ ರವಿಚಂದ್ರನ್ ಅಶ್ವಿನ್ (Ravichandran Ashwin) ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದರು. ಈ ಬಾರಿ ಯಶಸ್ವಿ ಕೂಡ ಆದರು. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. 38 ಎಸೆತಗಳನ್ನು ಎದುರಿಸಿದ ಅಶ್ವಿನ್ ನಾಲ್ಕು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ ಅರ್ಧಶತಕ ಸಿಡಿಸಿದ ಬೆನ್ನಲ್ಲೇ ಔಟ್ ಕೂಡ ಆದರು.

ಈ ಪಂದ್ಯದಲ್ಲಿ ಅಶ್ವಿನ್ ಅವರ ಬ್ಯಾಟಿಂಗ್ ವೈಖರಿ ವಿಶೇಷವಾಗಿತ್ತು. ಕೆಲ ಅಮೋಘ ಹೊಡೆತಗಳ ಮೂಲಕ ಗಮನ ಸೆಳೆದರು. ಆದರೆ, ಕುಲ್ದೀಪ್ ಯಾದವ್ ಅವರ ಬೌಲಿಂಗ್​ನಲ್ಲಿ ಇವರು ಹೊಡೆಯಲು ಯತ್ನಿಸಿದ ವೈಖರಿ ಸಖತ್ ವೈರಲ್ ಆಗುತ್ತಿದೆ. ಹಾಕಿಯಲ್ಲಿ ಚೆಂಡನ್ನು ನೆಟ್​​ನೊಳಗೆ ಅಟ್ಟಲು ಕುಳಿತುಕುಳ್ಳುವ ರೀತಿಯಲ್ಲಿ ಬ್ಯಾಟ್ ಅನ್ನೂ ಕೂಡ ಅದೇರೀತಿ ಹಿಡಿದಿರುವ ಇವರ ಪೋಸ್ ಸಖತ್ ಟ್ರೋಲ್ ಆಗುತ್ತಿದೆ. ಇದು ಕ್ರಿಕೆಟ್ ಪಂದ್ಯವೋ ಅಥವಾ ಹಾಕಿ ಪಂದ್ಯವೋ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
David Warner: ನೋ ಬಾಲ್ ಅಲ್ಲ: ವಿಕೆಟ್​ಗೆ ಚೆಂಡು ತಾಗಿದರೂ ನಾಟೌಟ್ ಆದ ಡೇವಿಡ್ ವಾರ್ನರ್: ವಿಡಿಯೋ
Image
CSK vs MI: ಸೋತರೆ ಟೂರ್ನಿಯಿಂದ ಔಟ್: ಗೆಲ್ಲಲು ಧೋನಿ ಮಾಡಿರುವ ಆ ಮಾಸ್ಟರ್ ಪ್ಲಾನ್ ಏನು?
Image
RR vs DC: ರಾಜಸ್ಥಾನ್ ವಿರುದ್ಧ ಡೆಲ್ಲಿ ಗೆಲ್ಲುತ್ತಿದ್ದಂತೆ ಆರ್​​ಸಿಬಿ ತಂಡಕ್ಕೆ ಫುಲ್ ಖುಷ್: ಯಾಕೆ ಗೊತ್ತೇ?
Image
IPL 2022: ಸಚಿನ್​ರ 13 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಗಿಲ್

ಈ ಪಂದ್ಯದಲ್ಲಿ ಮೊದಲು ರಾಜಸ್ಥಾನ್ ರಾಯಲ್ಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ಜಾಸ್ ಬಟ್ಲರ್ ಮೊದಲ ವಿಕೆಟ್‌ಗೆ ಉತ್ತಮ ಮೊತ್ತ ಕಲೆ ಹಾಕುವಲ್ಲಿ ಎಡವಿದರು. 2.5 ಓವರ್‌ಗಳಾಗಿದ್ದಾಗ ಜಾಸ್ ಬಟ್ಲರ್ 11 ಎಸೆತಗಳಲ್ಲಿ 7 ರನ್ ಬಾರಿಸಿ ಔಟಾದರು. ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ಆರ್. ಅಶ್ವಿನ್ 38 ಎಸೆತಗಳಲ್ಲಿ 50 ರನ್ ಕಲೆ ಹಾಕಿ ಔಟಾದರು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 19 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ತಂಡದ ನಾಯಕ ಸಂಜು ಸ್ಯಾಮ್ಸನ್ 6 ರನ್ ಗಳಿಸಿ ಔಟಾದರೆ, ರಿಯಾನ್ ಪರಾಗ್ 5 ಎಸೆತಗಳಲ್ಲಿ 9 ರನ್ ಗಳಿಸಿ ಚೇತನ್ ಸಕರಿಯಾಗೆ ವಿಕೆಟ್ ಒಪ್ಪಿಸಿದರು. ದೇವದತ್ ಪಡಿಕ್ಕಲ್ 30 ಎಸೆತಗಳಲ್ಲಿ 48 ರನ್ ಗಳಿಸಿ ಔಟಾದರೆ, ರಸ್ಸೆ ವಾನ್ ಡೆರ್ ಡಸ್ಸೆನ್ 10 ಎಸೆತಗಳಲ್ಲಿ 12 ರನ್ ಗಳಿಸಿ ಅಜೇಯರಾಗುಳಿದರು. ಡೆಲ್ಲಿ ಪರ ಅನ್ರಿಚ್ ನಾರ್ಟ್ಜೆ, ಚೇತನ್ ಸಕರಿಯಾ, ಮಿಚೆಲ್ ಮಾರ್ಷ್ ತಲಾ ಎರಡು ವಿಕೆಟ್ ಪಡೆದರು.

ಟಾರ್ಗೆಟ್‌ ಬೆನ್ನತ್ತಿದ ಡೆಲ್ಲಿ ಆರಂಭದಲ್ಲೇ ಶ್ರೀಕರ್‌ ಭರತ್(0)‌ ವಿಕೆಟ್‌ ಕಳೆದುಕೊಂಡಿತು. ಎರಡನೇ ವಿಕೆಟ್​ಗೆ ಜೊತೆಯಾದ ಡೇವಿಡ್‌ ವಾರ್ನರ್‌ 52* ರನ್‌(41 ಬಾಲ್‌, 5 ಬೌಂಡರಿ, 1 ಸಿಕ್ಸ್‌) ಹಾಗೂ ಮಿಚೆಲ್‌ ಮಾರ್ಷ್‌ 89 ರನ್‌(62 ಬಾಲ್‌, 5 ಬೌಂಡರಿ, 7 ಸಿಕ್ಸ್‌) ಅಬ್ಬರ ಬ್ಯಾಟಿಂಗ್‌ ಪ್ರದರ್ಶಿಸಿದರು. ರಾಜಸ್ಥಾನ ಲೆಕ್ಕಾಚಾರವನ್ನೇ ತಲೆಕೆಳಗೆ ಮಾಡಿದ ಈ ಜೋಡಿ 143 ರನ್‌ಗಳ ಅದ್ಭುತ ಜೊತೆಯಾಟದಿಂದ ತಂಡದ ಗೆಲುವಿನ ಹಾದಿಯನ್ನ ಸುಗಮಗೊಳಿಸಿದರು. ಸ್ಪೋಟಕ ಆಟವಾಡಿದ ಮಾರ್ಷ್‌, 89 ರನ್‌ಗಳಿಸಿ ಔಟಾದರು. ನಂತರ ಬಂದ ರಿಷಭ್‌ ಪಂತ್‌(13*) ತಂಡವನ್ನು 18.1 ಓವರ್​ನಲ್ಲೇ ಗೆಲುವಿನ ದಡಸೇರಿದರು. ಈ ಮೂಲಕ 8 ವಿಕೆಟ್​ಗಳ ಜಯ ಸಾಧಿಸಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:26 am, Thu, 12 May 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?