AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ನನ್ನೊಳಗೆ ಆ ಆಟಗಾರ ಬಂದಿದ್ದ: ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಅಶ್ವಿನ್​ರಿಂದ ಶಾಕಿಂಗ್ ಹೇಳಿಕೆ

RR vs CSK: ಚೆನ್ನೈ ವಿರುದ್ಧದ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಅಶ್ವಿನ್ ತಂಡ ಜಯ ಸಾಧಿಸುತ್ತಿದ್ದಂತೆ ವಿಶೇಷವಾಗಿ ಸಂಭ್ರಮಾಚರಣೆ ಮಾಡಿದರು. ಇದರ ವಿಡಿಯೋ ಸಾಮಾಜಿಕ ತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಸೆಲೆಬ್ರೇಷನ್ ಮಾಡಿದ್ದಕ್ಕೆ ಅಶ್ವಿನ್ ಕಾರಣ ಕೂಡ ತಿಳಿಸಿದ್ದಾರೆ.

R Ashwin: ನನ್ನೊಳಗೆ ಆ ಆಟಗಾರ ಬಂದಿದ್ದ: ವಿಚಿತ್ರ ಸೆಲೆಬ್ರೇಷನ್ ಬಗ್ಗೆ ಅಶ್ವಿನ್​ರಿಂದ ಶಾಕಿಂಗ್ ಹೇಳಿಕೆ
R Ashwin Celebration RR vs CSK
TV9 Web
| Edited By: |

Updated on: May 21, 2022 | 9:32 AM

Share

ಐಪಿಎಲ್ 2022ರ (IPL 2022) 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಜಸ್ಥಾನ್ ರಾಯಲ್ಸ್ (RR vs CSK) ತಂಡ ಪ್ಲೇ ಆಫ್​ಗೆ ಕ್ವಾಲಿಫೈ ಆಗಿದ್ದು ಎರಡನೇ ಸ್ಥಾನ ಅಲಂಕರಿಸಿದೆ. ಯಶಸ್ವಿ ಜೈಸ್ವಾಲ್ ಹಾಗೂ ಆಲ್ರೌಂಡರ್ ರವಿಚಂದ್ರನ್ ಅಶ್ವಿನ್ (R Ashwin) ಅವರ ಬೊಂಬಾಟ್ ಬ್ಯಾಟಿಂಗ್ ನೆರವಿನಿಂದ ಆರ್​ಆರ್​ 5 ವಿಕೆಟ್​ಗಳ ಗೆಲುವು ತನ್ನದಾಗಿಸಿತು. ಜೈಸ್ವಾಲ್ 44 ಎಸೆತಗಳಲ್ಲಿ 59 ರನ್ ಬಾರಿಸಿದರೆ, ಅಶ್ವಿನ್ 23 ಎಸೆತಗಳಲ್ಲಿ ಅಜೇಯ 40 ರನ್ ಸಿಡಿಸಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ 35 ವರ್ಷದ ಅಶ್ವಿನ್ ತಂಡ ಜಯ ಸಾಧಿಸುತ್ತಿದ್ದಂತೆ ವಿಶೇಷವಾಗಿ ಸಂಭ್ರಮಾಚರಣೆ ಮಾಡಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಸೆಲೆಬ್ರೇಷನ್ ಮಾಡಿದ್ದಕ್ಕೆ ಅಶ್ವಿನ್ ಕಾರಣ ಕೂಡ ತಿಳಿಸಿದ್ದಾರೆ.

ಹೌದು, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ ಮತ್ತು ಶಿಮ್ರೋನ್ ಹೆಟ್ಮೇರ್ ದೊಡ್ಡ ಮೊತ್ತ ಕಲೆಹಾಕಲು ಸಾಧ್ಯವಾಗದೇ ಇದ್ದಾಗ ಕಣಕ್ಕಿಳಿದ ಆರ್. ಅಶ್ವಿನ್ ಕೇವಲ 23 ಎಸೆತಗಳಲ್ಲಿ ಎರಡು ಫೋರ್ ಮತ್ತು ಮೂರು ಅಮೋಘ ಸಿಕ್ಸರ್ ಸಿಡಿಸಿ ಅಜೇಯ 40 ರನ್​ನೊಂದಿಗೆ ಗೆಲುವಿಗೆ ಕಾರಣರಾದರು. ಕೊನೆಯ ಓವರ್​ನಲ್ಲಿ ಆರ್ ಆರ್ ಗೆಲುವಿಗೆ 7 ರನ್​ಗಳ ಅವಶ್ಯಕತೆಯಿತ್ತು. ಎರಡನೇ ಎಸೆತದಲ್ಲಿ ಅಶ್ವಿನ್ ಬೌಂಡರಿ ಬಾರಿಸಿ ತಂಡದ ಗೆಲುವನ್ನು ಖಚಿತ ಪಡಿಸಿದರು. ಈ ಶಾಟ್ ಹೊಡೆಯುತ್ತಿದ್ದಂತೆ ಅಶ್ವಿನ್ ಎದೆಗೆ ಕೈ ತೋರಿಸಿ ಸಂಭ್ರಮಿಸಿದರು. ಇದರ ಬಗ್ಗೆ ಪಂದ್ಯ ಮುಗಿದ ಬಳಿಕ ಮಾತನಾಡಿದ ಅವರು, ನನ್ನೊಳಗೆ ಡೇವಿಡ್ ವಾರ್ನರ್ ಬಂದಿದ್ದರು ಎಂದು ತಮಾಷೆಯಾಗಿ ಉತ್ತರಿಸಿದ್ದಾರೆ.

ಇದನ್ನೂ ಓದಿ
Image
IPL 2022: ಐಪಿಎಲ್ 15ನೇ ಆವೃತಿಯ ಆಟಗಾರರು ಕ್ಯಾಮರಾ ಕಣ್ಣಿಗೆ ಸೆರೆಯಾದ ದೃಶ್ಯಗಳು
Image
RR vs CSK Highlights, IPL 2022: ಜೈಸ್ವಾಲ್ ಅರ್ಧಶತಕ; ಚೆನ್ನೈ ಮಣಿಸಿ 2ನೇ ಸ್ಥಾನಕ್ಕೇರಿದ ರಾಜಸ್ಥಾನ
Image
MI vs DC Prediction Playing XI: ಕೊನೆಯ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್​ಗೆ ಅವಕಾಶ? ತಂಡಗಳ ಸಂಭಾವ್ಯ 11
Image
IPL 2022: ಆರ್​ಸಿಬಿ ಪರ 7000 ರನ್ ಸಿಡಿಸಿ ದಾಖಲೆ ಬರೆದ ಕಿಂಗ್ ಕೊಹ್ಲಿ..!

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡವು ಅಗ್ರ ಕ್ರಮಾಂಕದ ಬ್ಯಾಟರ್ ಮೊಯಿನ್ ಅಲಿ ಭರ್ಜರಿ ಬ್ಯಾಟಿಂಗ್ (93 ರನ್, 57 ಎಸೆತ, 13 ಬೌಂಡರಿ, 3 ಸಿಕ್ಸರ್) ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು. ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ರುತುರಾಜ್ ಗಾಯಕ್ವಾಡ್ (2 ರನ್) ವಿಕೆಟನ್ನು ಕಳೆದುಕೊಂಡ ಚೆನ್ನೈ ಕಳಪೆ ಆರಂಭ ಪಡೆಯಿತು. ಆಗ 2ನೇ ವಿಕೆಟ್‌ಗೆ 83 ರನ್ ಜೊತೆಯಾಟ ನಡೆಸಿದ ಮೊಯಿನ್ ಅಲಿ ಹಾಗೂ ಡೆವೊನ್ ಕಾನ್ವೆ (16 ರನ್) ನೆರವಾದರು. ಆದರೆ ಈ ಇಬ್ಬರು ಬೇರ್ಪಟ್ಟ ಬಳಿಕ ಚೆನ್ನೈ ದಿಢೀರ್ ಕುಸಿತ ಕಂಡಿತು. ಕಾನ್ವೆ, ನಾರಾಯಣ್ ಜಗದೀಶನ್ (1 ರನ್) ಅಂಬಟಿ ರಾಯುಡು (3 ರನ್) ಬೆನ್ನುಬೆನ್ನಿಗೆ ವಿಕೆಟ್ ಒಪ್ಪಿಸಿದರು. ಬಳಿಕ ಅಲಿಯೊಂದಿಗೆ ಜೊತೆಯಾದ ನಾಯಕ ಎಂ.ಎಸ್. ಧೋನಿ (26 ರನ್, 28 ಎಸೆತ, 1 ಬೌಂಡರಿ, 1 ಸಿಕ್ಸರ್) 5ನೇ ವಿಕೆಟ್‌ಗೆ 51 ರನ್ ಸೇರಿಸಿದರು.

RCB: ಆರ್​ಸಿಬಿ ಪ್ಲೇ ಆಫ್ ಭವಿಷ್ಯ ಇಂದು ನಿರ್ಧಾರ: ಮುಂಬೈ-ಡೆಲ್ಲಿ ಪಂದ್ಯಕ್ಕೆ ಕಾದು ಕುಳಿತ ಆರ್​ಸಿಬಿ ಫ್ಯಾನ್ಸ್

93 ರನ್ ಗಳಿಸಿ ಶತಕದತ್ತ ಮುನ್ನುಗ್ಗುತ್ತಿದ್ದ ಅಲಿ ಕೊನೆಯ ಓವರ್‌ನ ಮೊದಲ ಎಸೆತದಲ್ಲಿ ಒಬೆಡ್ ಮೆಕಾಯ್‌ಗೆ ವಿಕೆಟ್ ಒಪ್ಪಿಸಿದರು. ರಾಜಸ್ಥಾನದ ಪರ ಮೆಕಾಯ್ (2-20) ಹಾಗೂ ಯುಜ್ವೇಂದ್ರ ಚಹಾಲ್ (2-26) ತಲಾ ಎರಡು ವಿಕೆಟ್ ಪಡೆದರು. 151 ರನ್‌ಗಳ ಟಾರ್ಗೆಟ್‌ ಚೇಸ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ಸಹ ಬ್ಯಾಟಿಂಗ್‌ ವೈಫಲ್ಯ ಕಂಡಿತು. ಆದರೆ ಜವಾಬ್ದಾರಿಯ ಆಟವಾಡಿದ ಯಶಸ್ವಿ ಜೈಸ್ವಾಲ್‌ (59) ಆಕರ್ಷಕ ಅರ್ಧಶತಕ ಸಿಡಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಆರ್.‌ ಅಶ್ವಿನ್‌ ಉತ್ತಮ ಆಟವಾಡಿದರು. ಪರಿಣಾಮ ಆರ್​​ಆರ್​ 19.5 ಓವರ್​​ನಲ್ಲಿ ಜಯ ಕಂಡಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ