AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ಮಾಸ್ಟರ್ ಪ್ಲ್ಯಾನ್​ಗೆ ತಣ್ಣೀರೆರಚಿದ ಭಾರತದ ಯುವ ಸ್ಪಿನ್ನರ್

Ravichandran Ashwin: ಅಶ್ವಿನ್ ಅವರ ಆಫ್ ಸ್ಪಿನ್​ ಅನ್ನು ಎದುರಿಸಲು ಆಸ್ಟ್ರೇಲಿಯಾ ಬ್ಯಾಟರ್​ಗಳು ಮಹೇಶ್ ಪಿಥಿಯಾ ಮೂಲಕ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಈ ಬಾರಿ ಕೂಡ ವಿಶ್ವಕಪ್​ಗೂ ಮುನ್ನ ಪಿಥಿಯಾ ಅವರನ್ನು ಕರೆಸಿಕೊಳ್ಳಲು ಆಸೀಸ್ ಪಡೆ ಮುಂದಾಗಿತ್ತು. ಆದರೀಗ ಆಸ್ಟ್ರೇಲಿಯಾ ತಂಡ ನೀಡಿದ ಆಫರ್ ಅನ್ನು ಮಹೇಶ್ ಫಿಥಿಯಾ ತಿರಸ್ಕರಿಸಿದ್ದಾರೆ.

ಆಸ್ಟ್ರೇಲಿಯಾದ ಮಾಸ್ಟರ್ ಪ್ಲ್ಯಾನ್​ಗೆ ತಣ್ಣೀರೆರಚಿದ ಭಾರತದ ಯುವ ಸ್ಪಿನ್ನರ್
Mahesh - Ashwin
TV9 Web
| Edited By: |

Updated on: Oct 01, 2023 | 10:08 PM

Share

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ಮುಖಾಮುಖಿಯಾದರೆ, ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ರಣತಂತ್ರ ಹೂಡಲು ಆಸ್ಟ್ರೇಲಿಯಾ ತಂಡ ಸಜ್ಜಾಗಿತ್ತು. ಆದರೆ ಈ ಪ್ರಿಪ್ಲ್ಯಾನ್​ಗೆ ಭಾರತದ ಯುವ ಸ್ಪಿನ್ನರ್ ಮಹೇಶ್ ಪಿಥಿಯಾ ತಣ್ಣೀರೆರಚಿದ್ದಾರೆ.

ಏಕದಿನ ವಿಶ್ವಕಪ್​ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡವು ಮಹೇಶ್ ಪಿಥಿಯಾ ಅವರನ್ನು ನೆಟ್ ಬೌಲರ್​ ಆಗಿ ನೇಮಿಸಿಕೊಳ್ಳಲು ಮುಂದಾಗಿತ್ತು. ಏಕೆಂದರೆ ಮಹೇಶ್ ಅವರ ಬೌಲಿಂಗ್ ಶೈಲಿಯು ಥೇಟ್ ಅಶ್ವಿನ್ ಅವರ ಬೌಲಿಂಗ್ ಅನ್ನು ಹೋಲುತ್ತದೆ. ಹೀಗಾಗಿಯೇ ಕಳೆದ ಬಾರಿ ಭಾರತದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ವೇಳೆ ಆಸ್ಟ್ರೇಲಿಯನ್ ತಂಡದ ನೆಟ್ ಸೆಷನ್‌ಗಳಲ್ಲಿ ಮಹೇಶ್ ಪಿಥಿಯಾ ಕಾಣಿಸಿಕೊಂಡಿದ್ದರು.

ಇತ್ತ ಅಶ್ವಿನ್ ಅವರ ಆಫ್ ಸ್ಪಿನ್​ ಅನ್ನು ಎದುರಿಸಲು ಆಸ್ಟ್ರೇಲಿಯಾ ಬ್ಯಾಟರ್​ಗಳು ಮಹೇಶ್ ಪಿಥಿಯಾ ಮೂಲಕ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಈ ಬಾರಿ ಕೂಡ ವಿಶ್ವಕಪ್​ಗೂ ಮುನ್ನ ಪಿಥಿಯಾ ಅವರನ್ನು ಕರೆಸಿಕೊಳ್ಳಲು ಆಸೀಸ್ ಪಡೆ ಮುಂದಾಗಿತ್ತು. ಆದರೀಗ ಆಸ್ಟ್ರೇಲಿಯಾ ತಂಡ ನೀಡಿದ ಆಫರ್ ಅನ್ನು ಮಹೇಶ್ ಫಿಥಿಯಾ ತಿರಸ್ಕರಿಸಿದ್ದಾರೆ.

21 ವರ್ಷದ ಮಹೇಶ್ ಪಿಥಿಯಾ ಅಶ್ವಿನ್ ಅವರನ್ನು ತಮ್ಮ ರೋಲ್ ಮಾಡೆಲ್ ಎಂದು ಪರಿಗಣಿಸುತ್ತಾರೆ. ಇದೀಗ ಭಾರತೀಯ ಬೌಲರ್​ ವಿರುದ್ಧ ರಣತಂತ್ರ ಹೆಣೆಯಲು ಮತ್ತೊಮ್ಮೆ ಫಿಥಿಯಾ ಅವರ ಮೊರೆ ಹೋಗಲು ನಿರ್ಧರಿಸಿದ್ದ ಆಸ್ಟ್ರೇಲಿಯಾ ಪಡೆಗೆ ನಿರಾಸೆಯಾಗಿದೆ.

ಈ ಬಗ್ಗೆ ಮಾತನಾಡಿದ ಮಹೇಶ್ ಫಿಥಿಯಾ, ನನಗೆ ಗೊತ್ತು ಇದು ಅತ್ಯುತ್ತಮ ಅವಕಾಶವಾಗಿತ್ತು. ಏಕೆಂದರೆ ರಾಷ್ಟ್ರೀಯ ತಂಡದ ಬ್ಯಾಟರ್​ಗಳಿಗೆ ಬೌಲಿಂಗ್ ಮಾಡುವುದರಿಂದ ಉತ್ತಮ ಅನುಭವ ಸಿಗುತ್ತದೆ. ಆದರೆ ನಾನು ಈ ಬಾರಿಯ ದೇಶೀಯ ಟೂರ್ನಿಯಲ್ಲಿ ನಾನು ಬರೋಡಾ ಪರ ಆಡಲು ನಿರ್ಧರಿಸಿದ್ದೇನೆ. ಹೀಗಾಗಿ ಆಸ್ಟ್ರೇಲಿಯಾ ತಂಡದ ಆಫರ್​ ಅನ್ನು ನಿರಾಕರಿಸಿದೆ ಎಂದು ತಿಳಿಸಿದ್ದಾರೆ.

ಇತ್ತ ಮಹೇಶ್ ಪಿಥಿಯಾ ಅವರ ಈ ನಿರ್ಧಾರ ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಬಹುದು. ಏಕೆಂದರೆ ಭಾರತ ತಂಡವು ಆಸ್ಟ್ರೇಲಿಯಾವನ್ನು ಚೆನ್ನೈನ ಚೆಪಾಕ್ ಮೈದಾನದಲ್ಲಿ ಎದುರಿಸಲಿದೆ. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ ಅತ್ಯಂತ ಯಶಸ್ವಿ ನಾಯಕ ಯಾರು ಗೊತ್ತಾ?

ಹೀಗಾಗಿಯೇ ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ವಿರುದ್ಧ ರಣತಂತ್ರ ಹೆಣೆಯಲು ಪ್ಲ್ಯಾನ್ ರೂಪಿಸಿತ್ತು. ಆದರೀಗ ಆಸೀಸ್ ಪಡೆಯ ಆಫರ್ ಅನ್ನು ನಿರಾಕರಿಸುವ ಮೂಲಕ ಭಾರತೀಯ ಯುವ ಸ್ಪಿನ್ನರ್ ಬಿಗ್ ಶಾಕ್ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ