AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದ ಮಾಸ್ಟರ್ ಪ್ಲ್ಯಾನ್​ಗೆ ತಣ್ಣೀರೆರಚಿದ ಭಾರತದ ಯುವ ಸ್ಪಿನ್ನರ್

Ravichandran Ashwin: ಅಶ್ವಿನ್ ಅವರ ಆಫ್ ಸ್ಪಿನ್​ ಅನ್ನು ಎದುರಿಸಲು ಆಸ್ಟ್ರೇಲಿಯಾ ಬ್ಯಾಟರ್​ಗಳು ಮಹೇಶ್ ಪಿಥಿಯಾ ಮೂಲಕ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಈ ಬಾರಿ ಕೂಡ ವಿಶ್ವಕಪ್​ಗೂ ಮುನ್ನ ಪಿಥಿಯಾ ಅವರನ್ನು ಕರೆಸಿಕೊಳ್ಳಲು ಆಸೀಸ್ ಪಡೆ ಮುಂದಾಗಿತ್ತು. ಆದರೀಗ ಆಸ್ಟ್ರೇಲಿಯಾ ತಂಡ ನೀಡಿದ ಆಫರ್ ಅನ್ನು ಮಹೇಶ್ ಫಿಥಿಯಾ ತಿರಸ್ಕರಿಸಿದ್ದಾರೆ.

ಆಸ್ಟ್ರೇಲಿಯಾದ ಮಾಸ್ಟರ್ ಪ್ಲ್ಯಾನ್​ಗೆ ತಣ್ಣೀರೆರಚಿದ ಭಾರತದ ಯುವ ಸ್ಪಿನ್ನರ್
Mahesh - Ashwin
TV9 Web
| Edited By: |

Updated on: Oct 01, 2023 | 10:08 PM

Share

ಏಕದಿನ ವಿಶ್ವಕಪ್​ ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಅಕ್ಟೋಬರ್ 5 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ಮುಖಾಮುಖಿಯಾದರೆ, ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ರಣತಂತ್ರ ಹೂಡಲು ಆಸ್ಟ್ರೇಲಿಯಾ ತಂಡ ಸಜ್ಜಾಗಿತ್ತು. ಆದರೆ ಈ ಪ್ರಿಪ್ಲ್ಯಾನ್​ಗೆ ಭಾರತದ ಯುವ ಸ್ಪಿನ್ನರ್ ಮಹೇಶ್ ಪಿಥಿಯಾ ತಣ್ಣೀರೆರಚಿದ್ದಾರೆ.

ಏಕದಿನ ವಿಶ್ವಕಪ್​ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡವು ಮಹೇಶ್ ಪಿಥಿಯಾ ಅವರನ್ನು ನೆಟ್ ಬೌಲರ್​ ಆಗಿ ನೇಮಿಸಿಕೊಳ್ಳಲು ಮುಂದಾಗಿತ್ತು. ಏಕೆಂದರೆ ಮಹೇಶ್ ಅವರ ಬೌಲಿಂಗ್ ಶೈಲಿಯು ಥೇಟ್ ಅಶ್ವಿನ್ ಅವರ ಬೌಲಿಂಗ್ ಅನ್ನು ಹೋಲುತ್ತದೆ. ಹೀಗಾಗಿಯೇ ಕಳೆದ ಬಾರಿ ಭಾರತದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ವೇಳೆ ಆಸ್ಟ್ರೇಲಿಯನ್ ತಂಡದ ನೆಟ್ ಸೆಷನ್‌ಗಳಲ್ಲಿ ಮಹೇಶ್ ಪಿಥಿಯಾ ಕಾಣಿಸಿಕೊಂಡಿದ್ದರು.

ಇತ್ತ ಅಶ್ವಿನ್ ಅವರ ಆಫ್ ಸ್ಪಿನ್​ ಅನ್ನು ಎದುರಿಸಲು ಆಸ್ಟ್ರೇಲಿಯಾ ಬ್ಯಾಟರ್​ಗಳು ಮಹೇಶ್ ಪಿಥಿಯಾ ಮೂಲಕ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದರು. ಈ ಬಾರಿ ಕೂಡ ವಿಶ್ವಕಪ್​ಗೂ ಮುನ್ನ ಪಿಥಿಯಾ ಅವರನ್ನು ಕರೆಸಿಕೊಳ್ಳಲು ಆಸೀಸ್ ಪಡೆ ಮುಂದಾಗಿತ್ತು. ಆದರೀಗ ಆಸ್ಟ್ರೇಲಿಯಾ ತಂಡ ನೀಡಿದ ಆಫರ್ ಅನ್ನು ಮಹೇಶ್ ಫಿಥಿಯಾ ತಿರಸ್ಕರಿಸಿದ್ದಾರೆ.

21 ವರ್ಷದ ಮಹೇಶ್ ಪಿಥಿಯಾ ಅಶ್ವಿನ್ ಅವರನ್ನು ತಮ್ಮ ರೋಲ್ ಮಾಡೆಲ್ ಎಂದು ಪರಿಗಣಿಸುತ್ತಾರೆ. ಇದೀಗ ಭಾರತೀಯ ಬೌಲರ್​ ವಿರುದ್ಧ ರಣತಂತ್ರ ಹೆಣೆಯಲು ಮತ್ತೊಮ್ಮೆ ಫಿಥಿಯಾ ಅವರ ಮೊರೆ ಹೋಗಲು ನಿರ್ಧರಿಸಿದ್ದ ಆಸ್ಟ್ರೇಲಿಯಾ ಪಡೆಗೆ ನಿರಾಸೆಯಾಗಿದೆ.

ಈ ಬಗ್ಗೆ ಮಾತನಾಡಿದ ಮಹೇಶ್ ಫಿಥಿಯಾ, ನನಗೆ ಗೊತ್ತು ಇದು ಅತ್ಯುತ್ತಮ ಅವಕಾಶವಾಗಿತ್ತು. ಏಕೆಂದರೆ ರಾಷ್ಟ್ರೀಯ ತಂಡದ ಬ್ಯಾಟರ್​ಗಳಿಗೆ ಬೌಲಿಂಗ್ ಮಾಡುವುದರಿಂದ ಉತ್ತಮ ಅನುಭವ ಸಿಗುತ್ತದೆ. ಆದರೆ ನಾನು ಈ ಬಾರಿಯ ದೇಶೀಯ ಟೂರ್ನಿಯಲ್ಲಿ ನಾನು ಬರೋಡಾ ಪರ ಆಡಲು ನಿರ್ಧರಿಸಿದ್ದೇನೆ. ಹೀಗಾಗಿ ಆಸ್ಟ್ರೇಲಿಯಾ ತಂಡದ ಆಫರ್​ ಅನ್ನು ನಿರಾಕರಿಸಿದೆ ಎಂದು ತಿಳಿಸಿದ್ದಾರೆ.

ಇತ್ತ ಮಹೇಶ್ ಪಿಥಿಯಾ ಅವರ ಈ ನಿರ್ಧಾರ ಟೀಮ್ ಇಂಡಿಯಾ ಪಾಲಿಗೆ ಪ್ಲಸ್ ಪಾಯಿಂಟ್ ಆಗಬಹುದು. ಏಕೆಂದರೆ ಭಾರತ ತಂಡವು ಆಸ್ಟ್ರೇಲಿಯಾವನ್ನು ಚೆನ್ನೈನ ಚೆಪಾಕ್ ಮೈದಾನದಲ್ಲಿ ಎದುರಿಸಲಿದೆ. ಈ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: ಏಕದಿನ ವಿಶ್ವಕಪ್​ನ ಅತ್ಯಂತ ಯಶಸ್ವಿ ನಾಯಕ ಯಾರು ಗೊತ್ತಾ?

ಹೀಗಾಗಿಯೇ ಈ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ವಿರುದ್ಧ ರಣತಂತ್ರ ಹೆಣೆಯಲು ಪ್ಲ್ಯಾನ್ ರೂಪಿಸಿತ್ತು. ಆದರೀಗ ಆಸೀಸ್ ಪಡೆಯ ಆಫರ್ ಅನ್ನು ನಿರಾಕರಿಸುವ ಮೂಲಕ ಭಾರತೀಯ ಯುವ ಸ್ಪಿನ್ನರ್ ಬಿಗ್ ಶಾಕ್ ನೀಡಿದ್ದಾರೆ.

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ