AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 3rd Test: ಆರ್. ಅಶ್ವಿನ್​ನಿಂದ ನಡೆಯಿತು ದೊಡ್ಡ ತಪ್ಪು: ಬ್ಯಾಟಿಂಗ್ ಬರುವ ಮುನ್ನವೇ ಇಂಗ್ಲೆಂಡ್​ಗೆ 5 ರನ್

England five penalty runs: ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್‌ನ ಎರಡನೇ ದಿನವು ಅಪರೂಪದ ಘಟನೆಗೆ ಸಾಕ್ಷಿಯಾಯಿತು. ಭಾರತದ ಬ್ಯಾಟ್ಸ್‌ಮನ್ ಆರ್. ಅಶ್ವಿನ್ ಪಿಚ್‌ನ ಮಧ್ಯದಲ್ಲಿ ಓಡಾಡಿದ್ದನ್ನು ಕಂಡು ಅಂಪೈರ್ ಜೋಯಲ್ ವಿಲ್ಸನ್ ಐದು ಪೆನಾಲ್ಟಿ ರನ್‌ಗಳನ್ನು ನೀಡಿದರು.

IND vs ENG 3rd Test: ಆರ್. ಅಶ್ವಿನ್​ನಿಂದ ನಡೆಯಿತು ದೊಡ್ಡ ತಪ್ಪು: ಬ್ಯಾಟಿಂಗ್ ಬರುವ ಮುನ್ನವೇ ಇಂಗ್ಲೆಂಡ್​ಗೆ 5 ರನ್
R Ashwin Penalty Runs
Vinay Bhat
|

Updated on: Feb 16, 2024 | 12:17 PM

Share

ರಾಜ್ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ (India vs England) ನಡುವಣ ಮೂರನೇ ಟೆಸ್ಟ್ ಪಂದ್ಯ ಕುತೂಹಲ ಕೆರಳಿಸಿದೆ. ಟೀಮ್ ಇಂಡಿಯಾ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ. ಇದರ ನಡುವೆ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನ ರವಿಚಂದ್ರನ್ ಅಶ್ವಿನ್ ದೊಡ್ಡ ತಪ್ಪು ಮಾಡಿದ್ದಾರೆ. ಇವರು ಮಾಡಿದ ತಪ್ಪಿನಿಂದಾಗಿ ಇಂಗ್ಲೆಂಡ್‌ಗೆ ಭಾರಿ ಲಾಭವಾಗಿದೆ. ಅಶ್ವಿನ್ ಕಾರಣದಿಂದ ಇಂಗ್ಲೆಂಡ್ ಬ್ಯಾಟಿಂಗ್ ಶುರು ಮಾಡುವ ಮುನ್ನವೇ ಖಾತೆ ತೆರೆದಿದೆ. ಈಗ ಇಂಗ್ಲೆಂಡ್‌ನ ಬ್ಯಾಟಿಂಗ್ 0 ಬದಲು 5 ರನ್‌ಗಳಿಂದ ಆರಂಭವಾಗಲಿದೆ.

ಟೀಮ್ ಇಂಡಿಯಾ ಬ್ಯಾಟಿಂಗ್ ಇನಿಂಗ್ಸ್​ನ 102ನೇ ಓವರ್​ನಲ್ಲಿ ಆರ್. ಅಶ್ವಿನ್ ದೊಡ್ಡ ತಪ್ಪು ಮಾಡಿದರು. ಇದರಿಂದಾಗಿ ಭಾರತ ತಂಡ ಇಂಗ್ಲೆಂಡ್​ಗೆ 5 ರನ್‌ಗಳನ್ನು ಬಿಟ್ಟುಕೊಡಬೇಕಾಯಿತು. ರೆಹಾನ್ ಅಹ್ಮದ್ 102 ನೇ ಓವರ್ ಬೌಲ್ ಮಾಡಲು ಬಂದರು. ರೆಹಾನ್ ಅವರ ನಾಲ್ಕನೇ ಎಸೆತದಲ್ಲಿ ಅಶ್ವಿನ್ ಒಂದು ರನ್ ಗಳಿಸಿದರು. ಈ ಸಂದರ್ಭ ಅಶ್ವಿನ್ ಪಿಚ್‌ನ ಮಧ್ಯದಲ್ಲಿ ಓಡಿಕೊಂಡು ಹೋಗಿದ್ದಾರೆ.

ಮೊದಲ ಪಂದ್ಯದಲ್ಲೇ ಅರ್ಧಶತಕ ಸಿಡಿಸಿದಾಗ ಸರ್ಫರಾಜ್ ಪತ್ನಿ ಏನು ಮಾಡಿದ್ರು ಗೊತ್ತೇ?

ನಿಯಮಗಳ ಪ್ರಕಾರ, ಪಿಚ್‌ನ ಮಧ್ಯದಲ್ಲಿ ಓಡುವಂತಿಲ್ಲ. ಇದರಿಂದಾಗಿ ಪಿಚ್ ಹಾಳಾಗುತ್ತದೆ. ಮೊದಲ ದಿನ ರವೀಂದ್ರ ಜಡೇಜಾ ಕೂಡ ಇದೇ ರೀತಿಯ ತಪ್ಪು ಮಾಡಿದ್ದಾರೆ. ಆಗ ಅಂಪೈರ್ ಜಡೇಜಾಗೆ ಎಚ್ಚರಿಕೆ ನೀಡಿದ್ದರು. ಆ ಬಳಿಕ ಅಶ್ವಿನ್ ಮಾಡಿದ ಅದೇ ತಪ್ಪಿನಿಂದಾಗಿ ಅಂಪೈರ್ 5 ರನ್ ಗಳ ದಂಡ ವಿಧಿಸಿದ್ದಾರೆ. ಹೀಗಾಗಿ ಅಂಪೈರ್ ಜೋಯೆಲ್ ವಿಲ್ಸನ್ ಟೀಮ್ ಇಂಡಿಯಾಕ್ಕೆ 5 ಪೆನಾಲ್ಟಿ ರನ್ ವಿಧಿಸಿದರು. ಇದೀಗ ಇಂಗ್ಲೆಂಡ್ ಖಾತೆಗೆ 5 ರನ್‌ಗಳು ಸೇರ್ಪಡೆಯಾಗಿದೆ.

ಮೇರಿಲ್ಬೋನ್ ಕ್ರಿಕೆಟ್ ಕ್ಲಬ್‌ನ ಕಾನೂನು 41 ರ ಅಡಿಯಲ್ಲಿ 2017 ರಿಂದ ಆಟಗಾರರ ನಡವಳಿಕೆಗಾಗಿ ಕಾನೂನು 42 ರ ಪ್ರಕಾರ ದಂಡವನ್ನು ನೀಡಲಾಗುತ್ತದೆ. ಬ್ಯಾಟಿಂಗ್ ತಂಡವು ಈರೀತಿಯ ತಪ್ಪು ಮಾಡಿ ಎಚ್ಚರಿಕೆ ನೀಡಿದ ನಂತರವೂ ಮುಂದುವರೆಸಿದರೆ ಫೀಲ್ಡಿಂಗ್ ತಂಡಕ್ಕೆ ಐದು ಪೆನಾಲ್ಟಿ ರನ್​ಗಳನ್ನು ನೀಡಲಾಗುತ್ತದೆ. ಪಿಚ್‌ನಲ್ಲಿ ಓಡುವುದನ್ನು ಅಥವಾ ಪಿಚ್‌ಗೆ ಹಾನಿ ಮಾಡುವ ಮಾರ್ಗವೆಂದು ಇದನ್ನು ಪರಿಗಣಿಸಲಾಗುತ್ತದೆ. ಪಿಚ್‌ನಲ್ಲಿ ಓಡುವುದನ್ನು ಲೆವೆಲ್ 1 ಅಪರಾಧವಾಗಿದೆ.

ರನೌಟ್ ಮಾಡಿದ ಜಡೇಜಾ ಬಗ್ಗೆ ಪಂದ್ಯದ ಬಳಿಕ ಸರ್ಫರಾಜ್ ಖಾನ್ ಏನು ಹೇಳಿದ್ರು ಗೊತ್ತೇ?

2016 ರಲ್ಲೂ ನಡೆದಿತ್ತು:

2016ರ ಭಾರತ ಹಾಗೂ ನ್ಯೂಝಿಲೆಂಡ್ ನಡುವಿನ ಇಂದೋರ್ ಟೆಸ್ಟ್‌ನಲ್ಲಿ, ರವೀಂದ್ರ ಜಡೇಜಾ ಮಾಡಿದ ತಪ್ಪಿಗೆ ಕಿವೀಸ್​ಗೆ 5 ರನ್ ನೀಡಲಾಗಿತ್ತು. ಈ ಪಂದ್ಯದ್ಲಿ ಭಾರತ ತನ್ನ ಇನ್ನಿಂಗ್ಸ್ ಅನ್ನು 557/5 ಕ್ಕೆ ಡಿಕ್ಲೇರ್ ಮಾಡಿದ ನಂತರ, ನ್ಯೂಝಿಲೆಂಡ್ ತನ್ನ ಇನ್ನಿಂಗ್ಸ್ ಅನ್ನು 5/0 ಯಿಂದ ಪ್ರಾರಂಭಿಸಿತು. ಅಂತಿಮವಾಗಿ, ಭಾರತವು ಆ ಟೆಸ್ಟ್ ಅನ್ನು 321 ರನ್‌ಗಳಿಂದ ಗೆದ್ದುಕೊಂಡಿತು, ಅಶ್ವಿನ್ 13 ವಿಕೆಟ್‌ಗಳನ್ನು ಪಡೆದರು. ಆತಿಥೇಯರು 3-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ