AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

R. Ashwin: ಆರ್. ಅಶ್ವಿನ್​ಗೆ ಕೋವಿಡ್-19 ಪಾಸಿಟಿವ್: ಇಂಗ್ಲೆಂಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್

Ravichandran Ashwin Test COVID-19 Positive: ಜುಲೈ 1 ರಿಂದ ಭಾರತ- ಇಂಗ್ಲೆಂಡ್ ನಡುವೆ ಐದನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಆದರೆ, ಇದಕ್ಕೂ ಮುನ್ನವೇ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ಪ್ರಮುಖ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ.

R. Ashwin: ಆರ್. ಅಶ್ವಿನ್​ಗೆ ಕೋವಿಡ್-19 ಪಾಸಿಟಿವ್: ಇಂಗ್ಲೆಂಡ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶಾಕ್
Ravichandran Ashwin
TV9 Web
| Updated By: Vinay Bhat|

Updated on:Jun 21, 2022 | 7:46 AM

Share

ಭಾರತ ಕ್ರಿಕೆಟ್ ತಂಡ (Indian Cricket Team) ಸದ್ಯ ಆಂಗ್ಲರ ನಾಡಿಗೆ ತೆರಳಿದ್ದು ಬಾಕಿ ಇರುವ ಒಂದು ಟೆಸ್ಟ್ ಪಂದ್ಯವನ್ನು ಆಡಲು ತಯಾರಿ ನಡೆಸುತ್ತಿದೆ. ಕಳೆದ ವರ್ಷ ಇಂಗ್ಲೆಂಡ್ (ENG vs IND) ಪ್ರವಾಸ ಬೆಳೆಸಿದ್ದಾಗ 5 ಪಂದ್ಯಗಳ ಟೆಸ್ಟ್​​ ಸರಣಿಯ ಪೈಕಿ ನಾಲ್ಕನ್ನು ಮಾತ್ರ ಆಡಿತ್ತು. ಇದೀಗ ಉಳಿದಿರುವ ಒಂದು ಪಂದ್ಯವನ್ನು ಈ ಪ್ರವಾಸದಲ್ಲಿ ಆಡಲಿದೆ. ಭಾರತ ಈ ಟೆಸ್ಟ್ ಸರಣಿಯಲ್ಲಿ 2-1 ಅಂತರದ ಮುನ್ನಡೆ ಪಡೆದುಕೊಂಡಿದೆ. ಜುಲೈ 1 ರಿಂದ ಬರ್ಮಿಂಗ್​ಹ್ಯಾಮ್​ನಲ್ಲಿ ಐದನೇ ಟೆಸ್ಟ್ ಕದನ ಶುರುವಾಗಲಿದೆ. ಆದರೆ, ಇದಕ್ಕೂ ಮುನ್ನವೇ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಪ್ರಮುಖ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ (Ravichandran Ashwin) ಅವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಇವರು ಇಂಗ್ಲೆಂಡ್ ಪ್ರವಾಸಕ್ಕೆ ಕೂಡ ತೆರಳದೆ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಈ ಬಗ್ಗೆ ಬಿಸಿಸಿಐ ಮೂಲಗಳು ಪಿಟಿಐಗೆ ಮಾಹಿತಿ ನೀಡಿದ್ದು, “ಕೋವಿಡ್-19 ಪಾಸಿಟಿವ್ ಬಂದ ಕಾರಣ ಭಾರತ ತಂಡದ ಆಟಗಾರರ ಜೊತೆ ಆರ್. ಅಶ್ವಿನ್ ಇಂಗ್ಲೆಂಡ್​ಗೆ ತೆರಳಿಲ್ಲ. ಅವರು ಸದ್ಯ ಕಠಿಣ ಕ್ವಾರಂಟೈನ್​ನಲ್ಲಿದ್ದಾರೆ. ವರದಿ ನೆಗೆಟಿವ್ ಬಂದ ಬಳಿಕ ಎಲ್ಲ ನಿಯಮವನ್ನು ಪಾಲಿಸಿ ತಂಡ ಸೇರಿಕೊಳ್ಳಲಿದ್ದಾರೆ. ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಅವರು ಗುಣಮುಖರಾಗುವ ನಂಬಿಕೆ ಇದೆ,” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೂನ್ 24 ರಿಂದ 27 ರವರೆಗೆ ಭಾರತ ತಂಡ ಲೀಸೆಸ್ಟರ್‌ಶೈರ್ ಕೌಂಟಿ ತಂಡದ ವಿರುದ್ಧ 4 ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದರಿಂದ ಅಶ್ವಿನ್ ಹೊರಗುಳಿಯಲಿದ್ದಾರೆ.

IND vs IRE: ಐರ್ಲೆಂಡ್‌ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರಿಗೆ ಸಿಹಿ ಸುದ್ದಿ ನೀಡಿದ ಬಿಸಿಸಿಐ

ಇದನ್ನೂ ಓದಿ
Image
Virat Test Debut: ಟೆಸ್ಟ್ ಬದುಕಿಗೆ 11ರ ಸಂಭ್ರಮ; ವಿಶೇಷ ವಿಡಿಯೋ ಹಂಚಿಕೊಂಡ ಕಿಂಗ್ ಕೊಹ್ಲಿ
Image
Shabaash Mithu Trailer: ಶಭಾಷ್ ಮಿಥು ಸಿನಿಮಾದ ಟ್ರೇಲರ್ ಬಿಡುಗಡೆ; ಮಿಥಾಲಿ ರಾಜ್ ಬಯೋಪಿಕ್​ನಲ್ಲಿ ಮಿಂಚಿದ ತಾಪ್ಸಿ
Image
Virat Test Debut: ವಿರಾಟ್ ಟೆಸ್ಟ್ ಬದುಕಿಗೆ ಭರ್ತಿ 11 ವರ್ಷ! ಟೆಸ್ಟ್ ಕ್ರಿಕೆಟ್​ನಲ್ಲಿ ಕೊಹ್ಲಿಯ ಅವಿಸ್ಮರಣೀಯ ಇನ್ನಿಂಗ್ಸ್​ಗಳಿವು
Image
Jehan Daruvala: ಫಾರ್ಮುಲಾ-1 ಟೆಸ್ಟ್ ಡ್ರೈವ್​ಗೆ ಆಯ್ಕೆಯಾದ ಭಾರತೀಯ ಯುವ ರೇಸರ್

ಇಂಗ್ಲೆಂಡ್ ತಲುಪಿದ ಪಂತ್-ಅಯ್ಯರ್:

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಮುಗಿದ ಬೆನ್ನಲ್ಲೇ ಭಾರತದ ಟೆಸ್ಟ್‌ ತಂಡದ ಸದಸ್ಯರಾದ ರಿಷಭ್‌ ಪಂತ್‌ ಮತ್ತು ಶ್ರೇಯಸ್‌ ಅಯ್ಯರ್‌ ಇಂಗ್ಲೆಂಡ್‌ನ‌ತ್ತ ಪ್ರಯಾಣ ಬೆಳೆಸಿದರು. ಇವರಿಬ್ಬರಿಗೂ ಈ ಟೆಸ್ಟ್ ಮಖ್ಯವಾಗಿದೆ. ಕಳಪೆ ಫಾರ್ಮ್​ನಿಂದ ತತ್ತರಿಸಿರುವ ಇವರು ದೊಡ್ಡ ರನ್ ಕಲೆಹಾಕಬೇಕಾದ ಒತ್ತಡದಲ್ಲಿದ್ದಾರೆ. ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅಯ್ಯರ್- ಪಂತ್ ಇಬ್ಬರೂ ಸಂಪೂರ್ಣ ವೈಫಲ್ಯ ಅನುಭವಿಸಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು.

ನೆಟ್​​ನಲ್ಲಿ ಭರ್ಜರಿ ಅಭ್ಯಾಸ:

ಇನ್ನು ಬಹುನಿರೀಕ್ಷಿತ ಟೆಸ್ಟ್ ಪಂದ್ಯವನ್ನು ಮುನ್ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ ಮತ್ತು ಸಹ ಓಪನರ್ ಶುಭ್ಮನ್ ಗಿಲ್ ತಮ್ಮ ಮೊದಲ ನೆಟ್ ಸೆಷನ್‌ನಲ್ಲಿ ಭರ್ಜರಿ ಅಭ್ಯಾಸ ಮಾಡುತ್ತಿರುವುದು ಕಂಡುಬಂತು. ರೋಹಿತ್ ಮತ್ತು ಗಿಲ್ ಸಾಮಾಜಿಕ ಮಾಧ್ಯಮದಲ್ಲಿ ಬಿಸಿಸಿಐ ಹಂಚಿಕೊಂಡ ಕಿರು ಕ್ಲಿಪ್‌ನ ಮುಂಭಾಗದ ಪಾದದ ರಕ್ಷಣೆಯ ಮೇಲೆ ಕೇಂದ್ರೀಕರಿಸಿದ್ದಾರೆ. ಅದರಲ್ಲೂ ಹಿಟ್​ಮ್ಯಾನ್ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು. ರೋಹಿತ್ ಅವರೊಂದಿಗೆ ಗಿಲ್ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ. ಏಕೆಂದರೆ ಕೆಎಲ್ ರಾಹುಲ್ ಗಾಯದ ಕಾರಣದಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ.

ಭಾರತ ತಂಡ: ರೋಹಿತ್‌ ಶರ್ಮ (ನಾಯಕ), ಶುಭ್ಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ಚೇತೇಶ್ವರ್‌ ಪೂಜಾರ, ರಿಷಭ್‌ ಪಂತ್‌, ಕೆಎಸ್‌. ಭರತ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಶಾರ್ದೂಲ್‌ ಠಾಕೂರ್‌, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಉಮೇಶ್‌ ಯಾದವ್‌, ಪ್ರಸಿದ್ಧ್ ಕೃಷ್ಣ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:46 am, Tue, 21 June 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ