AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಅಫ್ಘಾನ್ ವಿರುದ್ಧ ನ್ಯೂಜಿಲೆಂಡ್ ಗೆದ್ದರೆ ಏನು ಗತಿ?: ಜಡೇಜಾ ಕೊಟ್ಟ ಉತ್ತರ ನೀವು ಕೇಳಲೇ ಬೇಕು

Ravindra Jadeja said We will pack our bags and leave: ಸ್ಕಾಟ್ಲೆಂಡ್ ವಿರುದ್ಧ ಗೆದ್ದು ಭಾರತ ತನ್ನ ರೇಟ್​ರೇಟ್ ಹೆಚ್ಚಿಸಿಕೊಂಡಿದ್ದರೂ ನ್ಯೂಜಿಲೆಂಡ್-ಅಫ್ಘಾನಿಸ್ತಾನ ಪಂದ್ಯದ ಫಲಿತಾಂಶದ ಮೇಲೆ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಭವಿಷ್ಯ ನಿಂತಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ರವೀಂದ್ರ ಜಡೇಜಾ ಸಖತ್ ಆಗಿ ಉತ್ತರಿಸಿದ್ದಾರೆ.

Ravindra Jadeja: ಅಫ್ಘಾನ್ ವಿರುದ್ಧ ನ್ಯೂಜಿಲೆಂಡ್ ಗೆದ್ದರೆ ಏನು ಗತಿ?: ಜಡೇಜಾ ಕೊಟ್ಟ ಉತ್ತರ ನೀವು ಕೇಳಲೇ ಬೇಕು
ravindra jadeja press conference
TV9 Web
| Updated By: Vinay Bhat|

Updated on: Nov 06, 2021 | 12:44 PM

Share

ಟಿ20 ವಿಶ್ವಕಪ್​ನ (T20 World Cup) ಆರಂಭದ ಎರಡು ಪಂದ್ಯಗಳಲ್ಲಿ ಅನುಭವಿಸಿದ ಸೋಲಿಗೆ ಭಾರತ (India) ಈಗಲೂ ಪಶ್ಚಾತಾಪ ಪಡುತ್ತಿದೆ. ಅಫ್ಘಾನಿಸ್ತಾನ ಮತ್ತು ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ರನ್​ರೇಟ್​ನೊಂದಿಗೆ ಗೆದ್ದಿದ್ದು ಈ ಮೂಲಕ ಟೀಮ್ ಇಂಡಿಯಾ (Team India) ಸೆಮಿ ಫೈನಲ್​ಗೇರಲು ಎಲ್ಲಿಲ್ಲದ ಸಾಹಸ ನಡೆಸುತ್ತಿದೆ. ಆದರೂ ವಿರಾಟ್ ಕೊಹ್ಲಿ (Virat Kohli) ಪಡೆಯ ಸ್ಥಿತಿ ತೂಗುಯ್ಯಾಲೆಯಲ್ಲಿದೆ. ಭಾರತದ ಮುಂದಿನ ಹಾದಿ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ (New Zealand vs Afghanistan) ಪಂದ್ಯದ ಮೇಲೆ ನಿಂತಿದೆ. ಈ ಮ್ಯಾಚ್​ನಲ್ಲಿ ಅಫ್ಘಾನ್ ಕೇನ್ ವಿಲಿಯಮ್ಸನ್ (Kane Williamson) ಪಡೆಯನ್ನು ಸೋಲಿಸಿದರೆ ಮಾತ್ರ ಟೀಮ್ ಇಂಡಿಯಾಕ್ಕೆ ಸೆಮೀಸ್ ಬಾಗಿಲು ತೆರೆಯಲಿದೆ. ನ್ಯೂಜಿಲೆಂಡ್ ಗೆದ್ದರೆ ಭಾರತ ಟೂರ್ನಿಯಿಂದ ಔಟ್. ಇದಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಪತ್ರಕರ್ತರೊಬ್ಬರು ರವೀಂದ್ರ ಜಡೇಜಾ (Ravindra Jadeja) ಬಳಿಕ ಕೇಳಿದಾಗ ಅವರು ಕೊಟ್ಟ ಉತ್ತರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಸ್ಕಾಟ್ಲೆಂಡ್ ವಿರುದ್ಧದ ಪಂದ್ಯ ಕೂಡ ಭಾರತಕ್ಕೆ ಮಹತ್ವದ್ದಾಗಿತ್ತು. ಅದೃಷ್ಟ ಎಂಬಂತೆ ವಿರಾಟ್ ಕೊಹ್ಲಿ ಟಾಸ್ ಗೆದ್ದರು, ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೂವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಿ ಎದುರಾಳಿಯನ್ನು ಆದಷ್ಟು ಬೇಗ ಆಲೌಟ್ ಮಾಡುವ ಪ್ಲಾನ್ ಭಾರತದ್ದಾಗಿತ್ತು. ಅದರಲ್ಲೂ ಯಶಸ್ಸು ಸಾಧಿಸಿದರು. ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಸ್ಕಾಟ್ಲೆಂಡ್ 85 ರನ್​ಗೆ ಸರ್ವಪತನ ಕಂಡಿತು. ಜಡೇಜಾ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಶ್ರೇಷ್ಠ ಪ್ರದರ್ಶನ ನೀಡಿದರು.

ಆದರೆ, ಸವಾಲು ಇದ್ದಿದ್ದು ಬ್ಯಾಟಿಂಗ್​ನಲ್ಲಿ. ಅಫ್ಘಾನಿಸ್ತಾನ ತಂಡವನ್ನು ಹಿಂದಿಕ್ಕಿ ರನ್​ರೇಟ್​ನಲ್ಲಿ ಮೇಲುಗೈ ಸಾಧಿಸಲು ಭಾರತ 86 ರನ್​ಗಳ ಟಾರ್ಗೆಟ್ ಅನ್ನು ಕೇವಲ 7.1 ಓವರ್​ನಲ್ಲಿ ಮುಗಿಸಬೇಕಿತ್ತು. ಈ ಸವಾಲನ್ನು ಸ್ವೀಕರಿಸಿದವರು ಕೆ. ಎಲ್ ರಾಹುಲ್ ಹಾಗೂ ರೋಹಿತ್ ಶರ್ಮಾ. ಕೇವಲ 5 ಓವರ್​ನಲ್ಲಿ ಇವರಿಬ್ಬರು 70 ರನ್ ಸೇರಿಸಿದರು. ರಾಹುಲ್ 19 ಬಾಲ್​ನಲ್ಲಿ ದಾಖಲೆಯ 50 ರನ್ ಗಳಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಭಾರತ ತನ್ನ ಕಡೆಯಿಂದ ಶೇ. 100 ರಷ್ಟು ಪ್ರಯತ್ನಿಸಿ ಯಶಸ್ಸು ಸಾಧಿಸಿದೆ. ಆದರೂ ಭಾರತ ಸೆಮೀಸ್ ತಲುಪಲು ನ್ಯೂಜಿಲೆಂಡ್ ವಿರುದ್ಧ ಅಫ್ಘಾನಿಸ್ತಾನ ಗೆಲ್ಲಲೇ ಬೇಕಿದೆ. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯ ಗೆದ್ದ ಬಳಿಕ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ರವೀಂದ್ರ ಜಡೇಜಾ ಈ ಕುರಿತ ಪ್ರಶ್ನೆಗೆ ಸಖತ್ ಆಗಿ ಉತ್ತರಿಸಿದ್ದಾರೆ.

ಜಡೇಜಾ ಬಳಿಕ ಪತ್ರಕತ್ರರೊಬ್ಬರು, ‘ಭಾನುವಾರದ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಅಫ್ಘಾನಿಸ್ತಾನ ಗೆಲುವು ಸಾಧಿಸಲು ಸಾಧ್ಯವಾಗದೆ ಹೋದರೆ ಭಾರತ ತಂಡ ಏನು ಮಾಡುತ್ತದೆ?’ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಜಡೇಜಾ, ‘ನಾವು ನಮ್ಮ ಲಗೇಜ್ ಅನ್ನು ಪ್ಯಾಕ್ ಮಾಡುತ್ತೇವೆ ಮತ್ತು ತವರಿಗೆ ಹಿಂದಿರುಗುತ್ತೇ’ ಎಂದು ತಮಾಷೆಯಾಗಿ ಉತ್ತರಿಸಿದ್ದಾರೆ. ಸದ್ಯ ಈ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ.

KL Rahul and Athiya Shetty: ಕೆಎಲ್ ರಾಹುಲ್ ಸ್ಫೋಟಕ ಫಿಫ್ಟಿ ಸಿಡಿಸಿದಾಗ ಗರ್ಲ್​ ಫ್ರೆಂಡ್ ಅತಿಯಾ ಶೆಟ್ಟಿ ಮಾಡಿದ್ದೇನು ನೋಡಿ

Scotland Dressing Room: ಸ್ಕಾಟ್ಲೆಂಡ್ ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಎದುರಾಳಿ ನಾಯಕನ ಕನಸು ನನಸು ಮಾಡಿದ ವಿರಾಟ್ ಕೊಹ್ಲಿ

(Ravindra Jadeja came up with a blunt answer In Press Conference afetr india vs scotland Match)

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ