AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿಗಾಗಿ ಕಾದು ಕುಳಿತಿದ್ದ ಫ್ಯಾನ್ಸ್​ಗೆ ಚಮಕ್ ಕೊಟ್ಟ ಜಡೇಜಾ; ನಂತರ ಆಗಿದ್ದೇನು ನೋಡಿ..

ಧೋನಿ ಫೀಲ್ಡ್​ಗೆ ಇಳಿಯಲಿ ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದರು. ಎಲ್ಲರೂ ಧೋನಿ ಧೋನಿ ಎಂದು ಕೂಗೋಕೆ ಆರಂಭಿಸಿದರು. ಆದರೆ ಬ್ಯಾಟ್ ಹಿಡಿದು ರವೀಂದ್ರ ಜಡೇಜಾ ಫೀಲ್ಡ್​ಗೆ ಇಳಿಯೋಕೆ ಹೊರಟರು. ಇದನ್ನು ನೋಡಿ ಧೋನಿ ಫ್ಯಾನ್ಸ್ ಬೇಸರಗೊಂಡರು.

ಧೋನಿಗಾಗಿ ಕಾದು ಕುಳಿತಿದ್ದ ಫ್ಯಾನ್ಸ್​ಗೆ ಚಮಕ್ ಕೊಟ್ಟ ಜಡೇಜಾ; ನಂತರ ಆಗಿದ್ದೇನು ನೋಡಿ..
ಧೋನಿ
ರಾಜೇಶ್ ದುಗ್ಗುಮನೆ
|

Updated on:Apr 09, 2024 | 10:53 AM

Share

ಚೆನ್ನೈ ಸೂಪರ್ ಕಿಂಗ್ಸ್  (CSK) ಹಾಗೂ ಕೆಕೆಆರ್​ ಪಂದ್ಯದಲ್ಲಿ ಸಿಎಸ್​​ಕೆ ತಂಡ ಗೆದ್ದು ಬೀಗಿದೆ. ಹೋಂ ಗ್ರೌಂಡ್​ನಲ್ಲಿ ಸಿಎಸ್​ಕೆ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ನಡೆದ ಒಂದು ಘಟನೆ ಗಮನ ಸೆಳೆದಿದೆ. ಈ ಪಂದ್ಯದಲ್ಲಿ ಧೋನಿಗಾಗಿ ಫ್ಯಾನ್ಸ್ ಕಾದಿದ್ದರು. ಈ ವೇಳೆ ಜಡೇಜಾ ಅವರು ಧೋನಿ ಫ್ಯಾನ್ಸ್​ಗೆ ಚಮಕ್ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು ಸಿಎಸ್​ಕೆ ತಂಡ. ಈ ತಂತ್ರ ಸಹಕಾರಿ ಆಗಿತ್ತು. ಕೇವಲ 137 ರನ್​ಗೆ ಕೆಕೆಆರ್​ ತಂಡವನ್ನು ಚೆನ್ನೈ ಕಟ್ಟಿ ಹಾಕಿತು. ಆ ಬಳಿಕ ಚೆನ್ನೈ ಸುಲಭ ಮೊತ್ತದ ಬೆನ್ನು ಹತ್ತಿತ್ತು. ಕೇವಲ 15 ರನ್​ಗೆ ರಚಿನ್ ರವೀಂದ್ರ ಅವರು ವಿಕೆಟ್ ಒಪ್ಪಿಸಿದರು. ನಂತರ ರುತುರಾಜ್​ ಗಾಯಕ್​ವಾಡ್ ಹಾಗೂ ಮಿಚೆಲ್ ಉತ್ತಮ ಆಟ ಆಡಿದರು. 25 ರನ್​ಗೆ ಮಿಚೆಲ್ ಔಟ್ ಆದ ಬಳಿಕ ಶಿವಮ್ ದೂಬೆ ಕಣಕ್ಕೆ ಇಳಿದರು. ಅವರು 18 ಬಾಲ್​ಗೆ 28 ರನ್ ಹೊಡೆದು ಔಟ್ ಆದರು. 135 ರನ್​ಗಳಿಗೆ ಚೆನ್ನೈ ಮೂರು ವಿಕೆಟ್ ಕಳೆದುಕೊಂಡಿತ್ತು. ಗೆಲುವಿಗೆ ಬೇಕಾಗಿದ್ದು ಕೇವಲ 3 ರನ್ ಆಗಿತ್ತು.

ಆಗ ಧೋನಿ ಫೀಲ್ಡ್​ಗೆ ಇಳಿಯಲಿ ಎಂದು ಎಲ್ಲರೂ ಅಂದುಕೊಳ್ಳುತ್ತಿದ್ದರು. ಎಲ್ಲರೂ ಧೋನಿ ಧೋನಿ ಎಂದು ಕೂಗೋಕೆ ಆರಂಭಿಸಿದರು. ಆದರೆ ಬ್ಯಾಟ್ ಹಿಡಿದು ರವೀಂದ್ರ ಜಡೇಜಾ ಫೀಲ್ಡ್​ಗೆ ಇಳಿಯೋಕೆ ಹೊರಟರು. ಇದನ್ನು ನೋಡಿ ಧೋನಿ ಫ್ಯಾನ್ಸ್ ಬೇಸರಗೊಂಡರು. ನಂತರ ಅವರು ಮರಳಿ ಡ್ರೆಸ್ಸಿಂಗ್ ರೂಂಗೆ ಹೋದರು. ನಂತರ ಧೋನಿ ಫೀಲ್ಡ್​ಗೆ ಬಂದರು. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟರು. ಧೋನಿ ವಿನ್ನಿಂಗ್ ರನ್ ಬಾರಿಸಿದರು. ಇದನ್ನು ನೋಡಿ ಫ್ಯಾನ್ಸ್ ಖುಷಿಪಟ್ಟರು.

ಇದನ್ನೂ ಓದಿ: MS Dhoni: ಧೋನಿನ ಪ್ರೀತಿಯಿಂದ ಹಗ್ ಮಾಡಿದ ಗೌತಮ್ ಗಂಭೀರ್; ವಿಡಿಯೋ ವೈರಲ್

ಚೆನ್ನೈ ಸೈಪರ್ ಕಿಂಗ್ಸ್ ತಂಡ ಪಾಯಿಂಟ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿ ಇದೆ. ಐದು ಪಂದ್ಯಗಳಲ್ಲಿ ಇದು ಅವರ ಮೂರನೇ ಜಯ. ದೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಜೊತೆ ಇವರು ಸೋತಿದ್ದಾರೆ. ಕೆಕೆಆರ್ ತಂಡ ಈ ಸೀಸನ್​ನ ಮೊದಲ ಸೋಲು ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Tue, 9 April 24

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ