AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಕಂಟಕವಾದ ಜಡೇಜಾ ಇಂಜುರಿ: ಮೊದಲ ಏಕದಿನಕ್ಕೆ ಭಾರತದ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ

India Playing XI vs WI, 1st ODI: ಮೂರೂ ಏಕದಿನ ಪಂದ್ಯದಿಂದ ರವೀಂದ್ರ ಜಡೇಜಾ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಹಾಗಾದ್ರೆ ಇಂದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ (India Playing XI) ಹೇಗಿರಬಹುದು?.

IND vs WI: ಕಂಟಕವಾದ ಜಡೇಜಾ ಇಂಜುರಿ: ಮೊದಲ ಏಕದಿನಕ್ಕೆ ಭಾರತದ ಪ್ಲೇಯಿಂಗ್ XI ನಲ್ಲಿ ದೊಡ್ಡ ಬದಲಾವಣೆ
India Playing XI vs WI 1st ODI
TV9 Web
| Updated By: Vinay Bhat|

Updated on: Jul 22, 2022 | 11:17 AM

Share

ಭಾರತದ ಕೆರಿಬಿಯನ್ (IND vs WI) ಪ್ರವಾಸ ಇಂದಿನಿಂದ ಆರಂಭಗೊಳ್ಳಲಿದೆ. ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದ್ದು ಸಾಕಷ್ಟು ರೋಚಕತೆ ಸೃಷ್ಟಿಸಿದೆ. ಆದರೆ, ಪಂದ್ಯ ಆರಂಭಕ್ಕೂ ಮುನ್ನವೇ ಭಾರತಕ್ಕೆ ದೊಡ್ಡ ಆಘಾತ ಉಂಟಾಗಿದೆ. ಕೊಹ್ಲಿ, ರೋಹಿತ್, ಬುಮ್ರಾ, ಪಂತ್, ಹಾರ್ದಿಕ್ ಹೀಗೆ ಸ್ಟಾರ್ ಆಟಗಾರರು ವಿಶ್ರಾಂತಿ ಪಡೆದುಕೊಂಡ ಕಾರಣ ಯುವ ಆಟಗಾರರಿಗೆ ಅವಕಾಶ ನೀಡಿಲಾಗಿದೆ. ಆದರೆ, ತಂಡ ಇದೀಗ ಇಂಜುರಿ ಸಮಸ್ಯೆಯಿಂದ ಬಳಲುತ್ತಿದೆ. ಉಪ ನಾಯಕನಾಗಿರುವ ರವೀಂದ್ರ ಜಡೇಜಾ (Ravindra Jadeja) ಮೊಣ ಕಾಲಿಗೆ ಗಾಯಮಾಡಿಕೊಂಡಿದ್ದು, ಮೂರೂ ಏಕದಿನ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಇವರ ಜೊತೆಗೆ ಅರ್ಶ್​ದೀಪ್ ಸಿಂಗ್ ಕೂಡ ಗಾಯಕ್ಕೆ ತುತ್ತಾಗಿದ್ದು ಪಂದ್ಯಕ್ಕೆ ಲಭ್ಯವಿರುವುದು ಅನುಮಾನ. ಹಾಗಾದ್ರೆ ಇಂದಿನ ಪಂದ್ಯಕ್ಕೆ ಭಾರತದ ಪ್ಲೇಯಿಂಗ್ ಇಲೆವೆನ್ (India Playing XI) ಹೇಗಿರಬಹುದು?.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಮೊಹಮ್ಮದ್ ಶಮಿ, ಜಸ್‌ಪ್ರೀತ್ ಬೂಮ್ರಾ, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಯುವ ಪಡೆಯಿಂದ ಕೂಡಿರುವ ಭಾರತದ ಆಡುವ ಬಳಗ ಹೇಗಿರಲಿದೆ ಎಂಬುದು ಕುತೂಹಲ. ಧವನ್ ಜೊತೆ ಇಶಾನ್ ಕಿಶನ್, ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಆವೇಶ್ ಖಾನ್, ಪ್ರಸಿದ್ಧ ಕೃಷ್ಣ ಮತ್ತು ಆರ್ಷದೀಪ್ ಸಿಂಗ್ ಅವರಿಗೆ ಈ ಸರಣಿ ಅಗ್ನಿಪರೀಕ್ಷೆ ಎನ್ನಬಹುದು. ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್ ಅವರಿಗೂ ಅಂತಿಮ ಹನ್ನೊಂದರಲ್ಲಿ ಕಣಕ್ಕಿಳಿಯುವ ಅವಕಾಶ ಸಿಗುವ ಸಾಧ್ಯತೆ ಇದೆ.

ಟೀಮ್ ಇಂಡಿಯಾ ಪರ ಓಪನರ್​ಗಳಾಗಿ ಶಿಖರ್ ಧವನ್ ಹಾಗೂ ರುತುರಾಜ್ ಗಾಯಕ್ವಾಡ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಮೂರನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್​ಗಳಾದ ಇಶಾನ್ ಕಿಶನ್ ಅಥವಾ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಬಹುದು. ಸ್ಯಾಮ್ಸನ್​ಗೆ ಹೆಚ್ಚು ಅನುಭವ ಇರುವ ಕಾರಣ ಇವರೇ ಮೊದಲ ಆಯ್ಕೆ ಆಗಿರಬಹುದು. ನಂತರದ ಎರಡು ಸ್ಥಾನಕ್ಕೆ ದೀಪಕ್ ಹೂಡ, ಸೂರ್ಯಕುಮಾರ್ ಯಾದವ್ ಹಾಗೂ ಶ್ರೇಯಸ್ ಅಯ್ಯರ್ ಹೀಗೆ ಮೂವರ ನಡುವೆ ಪೈಪೋಟಿ ನಡೆಯಲಿದೆ. ಇವರಲ್ಲಿ ಸೂರ್ಯ ಹಾಗೂ ಅಯ್ಯರ್​ಗೆ ಸ್ಥಾನ ಸಿಗಬಹುದು.

ಇದನ್ನೂ ಓದಿ
Image
IND vs WI: ಮೊದಲ ಏಕದಿನಕ್ಕೆ ಭಾರತ ರೆಡಿ: ಧವನ್ ಪಡೆಯಿಂದ ಭರ್ಜರಿ ಅಭ್ಯಾಸ
Image
Ravindra Jadeja: ಭಾರತಕ್ಕೆ ಶಾಕ್ ಮೇಲೆ ಶಾಕ್: ರಾಹುಲ್ ಬಳಿಕ ಮತ್ತೊಬ್ಬ ಸ್ಟಾರ್ ಪ್ಲೇಯರ್ ಔಟ್?
Image
IND vs WI ODI: ಇಂದು ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಏಕದಿನ: ಭಾರತದ ಆಡುವ ಬಳಗವೇ ರೋಚಕ
Image
Neeraj Chopra: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್​ಶಿಪ್ ಫೈನಲ್​​ಗೆ ನೀರಜ್ ಚೋಪ್ರಾ: ಇತಿಹಾಸ ನಿರ್ಮಿಸುತ್ತಾರ ಚಿನ್ನದ ಹುಡುಗ

ಜಡೇಜಾ ಅಲಭ್ಯರಾದರೆ ಅನುಭವಿ ಆಲ್ರೌಂಡರ್​ನ ಕೊರತೆ ತಂಡದಲ್ಲಿ ಎದ್ದು ಕಾಣಲಿದೆ. ಅಕ್ಷರ್ ಪಟೇಲ್ ಅವರು ಜಡೇಜಾ ಸ್ಥಾನ ತುಂಬಬೇಕಿದೆ. ಶಾರ್ದೂಲ್ ಠಾಕೂರ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು. ಇವರ ಜೊತೆಗೆ ಯುಜ್ವೇಂದ್ರ ಚಹಲ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್ ಹಾಗೂ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಲಿದ್ದಾರೆ.

ಭಾರತ ಸಂಭಾವ್ಯ ಪ್ಲೇಯಿಂಗ್ XI: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಲ್, ಪ್ರಸಿದ್ಧ ಕೃಷ್ಣ, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ