AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja Injury: ಸೋಲಿನ ಬೆನ್ನಲ್ಲೇ ಭಾರತಕ್ಕೆ ಕೆಟ್ಟ ಸುದ್ದಿ: ರೋಹಿತ್ ಪಡೆಗೆ ಮತ್ತೊಂದು ಶಾಕ್

India vs England Test: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಸೋಲಿನ ನಡುವೆ ಟೀಮ್ ಇಂಡಿಯಾ ಮತ್ತೊಂದು ಹಿನ್ನಡೆ ಅನುಭವಿಸಿದೆ. ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಇಂಜುರಿಗೆ ತುತ್ತಾಗಿದ್ದು, ಇಂಡೋ-ಇಂಗ್ಲೆಂಡ್ ಎರಡನೇ ಟೆಸ್ಟ್​ನಲ್ಲಿ ಆಡುವುದು ಅನುಮಾನವಾಗಿದೆ.

Ravindra Jadeja Injury: ಸೋಲಿನ ಬೆನ್ನಲ್ಲೇ ಭಾರತಕ್ಕೆ ಕೆಟ್ಟ ಸುದ್ದಿ: ರೋಹಿತ್ ಪಡೆಗೆ ಮತ್ತೊಂದು ಶಾಕ್
IND vs ENG Test
Vinay Bhat
|

Updated on: Jan 29, 2024 | 7:33 AM

Share

ಹೈದರಾಬಾದ್​ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ (India vs England) ಸೋಲು ಕಾಣುತ್ತೆ ಎಂದು ಯಾರುಕೂಡ ಊಹಿಸಿರಲಿಲ್ಲ. ಸುಲಭ ಟಾರ್ಗೆಟ್ ಅನ್ನು ಕೂಡ ಬೆನ್ನಟ್ಟಲು ಸಾಧ್ಯವಾಗದೆ ಟೀಮ್ ಇಂಡಿಯಾ 28 ರನ್‌ಗಳಿಂದ ಸೋಲು ಕಂಡಿದೆ. ಇದರೊಂದಿಗೆ ಸರಣಿಯಲ್ಲಿ 0-1 ರಿಂದ ಹಿನ್ನಡೆಯಾಯಿತು. ಈ ಸೋಲಿನ ನಡುವೆ ಟೀಮ್ ಇಂಡಿಯಾ ಮತ್ತೊಂದು ಹಿನ್ನಡೆ ಅನುಭವಿಸಿದೆ. ಇದರ ಪರಿಣಾಮ ಮುಂದಿನ ಟೆಸ್ಟ್​ನಲ್ಲಿ ಎದ್ದು ಕಾಣುವುದು ಖಚಿತ. ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಇಂಜುರಿಗೆ ತುತ್ತಾಗಿದ್ದು, ಮುಂದಿನ ಟೆಸ್ಟ್​ನಲ್ಲಿ ಆಡುವುದು ಅನುಮಾನವಾಗಿದೆ.

ಮೊದಲ ಟೆಸ್ಟ್​ನಲ್ಲಿ ಭಾರತ ತಂಡಕ್ಕೆ ಗೆಲ್ಲಲು 231 ರನ್‌ಗಳ ಅಗತ್ಯವಿತ್ತು. ಆದರೆ ಪಂದ್ಯದ ನಾಲ್ಕನೇ ದಿನದಂದು ಎರಡು ಸೆಷನ್‌ಗಳಲ್ಲಿ ಭಾರತದ ಎಲ್ಲಾ 10 ವಿಕೆಟ್‌ಗಳು ಪತನಗೊಂಡವು. ಕೇವಲ 202 ರನ್ ಗಳಿಸಲು ಸಾಧ್ಯವಾಯಿತು. ಟೀಮ್ ಇಂಡಿಯಾದ ಬ್ಯಾಟರ್​ಗಳು ವಿಕೆಟ್ ಕಳೆದುಕೊಳ್ಳುತ್ತಿರುವ ಸಂದರ್ಭದಲ್ಲಿ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್ ಟೆನ್ಷನ್ ಹೆಚ್ಚಿಸಿದ್ದು ಜಡೇಜಾ ಇಂಜುರಿ.

CCL 2024: ಸಿಸಿಎಲ್​ನಲ್ಲಿ ಅಬ್ಬರಿಸಲು ಸಜ್ಜಾದ ಪಂಜಾಬ್ ದಿ ಶೇರ್; ಮೊದಲ ಪಂದ್ಯ ಯಾವಾಗ ಗೊತ್ತಾ?

ಇದನ್ನೂ ಓದಿ
Image
IND vs ENG: ಭಾರತ-ಇಂಗ್ಲೆಂಡ್ 2ನೇ ಟೆಸ್ಟ್ ಯಾವಾಗ ಶುರು? ಇಲ್ಲಿದೆ ಮಾಹಿತಿ
Image
ಅಮೇರಿಕಾ ವಿರುದ್ಧ 201 ರನ್​ಗಳಿಂದ ಗೆದ್ದ ಭಾರತ..!
Image
IND vs ENG: ತಂಡದ ಹೀನಾಯ ಸೋಲಿಗೆ ನಾಯಕ ರೋಹಿತ್ ದೂರಿದ್ದು ಯಾರನ್ನ?
Image
ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಐತಿಹಾಸಿಕ ಸಾಧನೆ ಮಾಡಿದ ಟಾಮ್ ಹಾರ್ಟ್ಲಿ

ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಜಡೇಜಾ ಗಾಯಗೊಂಡರು. ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವಾಗ, ಜಡೇಜಾ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಅದು ಯಶಸ್ವಿಯಾಗಲಿಲ್ಲ ಮತ್ತು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್, ಅತ್ಯುತ್ತಮ ಫೀಲ್ಡಿಂಗ್​ನಿಂದಾಗಿ ರನೌಟ್ ಆದರು. ಜಡೇಜಾ ರನೌಟ್ ಟೀಮ್ ಇಂಡಿಯಾಕ್ಕೆ ದೊಡ್ಡ ಹೊಡೆತವಾಯಿತು. ಏಕೆಂದರೆ ಇಲ್ಲಿಂದ ಮುಂದೆ ಗೆಲ್ಲುವ ಸಾಧ್ಯತೆಗಳು ಕಡಿಮೆಯಾಗುತ್ತಾ ಬಂದವು ಮತ್ತು ಅಂತಿಮವಾಗಿ ಸೋಲನ್ನು ಎದುರಿಸಬೇಕಾಯಿತು.

ಜಡೇಜಾ ಔಟಾಗಿ ಪೆವಿಲಿಯನ್​ನತ್ತ ಸಾಗುತ್ತಿರುವಾಗ ಕಾಲು ನೋವಿರುವುದು ಕಂಡುಬಂದಿದೆ. ಜಡೇಜಾ ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಪಂದ್ಯದ ನಂತರ ಕೋಚ್ ರಾಹುಲ್ ದ್ರಾವಿಡ್ ಕೂಡ ಈ ವಿಚಾರದಲ್ಲಿ ಸ್ಪಷ್ಟ ಉತ್ತರ ನೀಡಲಿಲ್ಲ. ಪಿಟಿಐ ವರದಿಯ ಪ್ರಕಾರ, ದ್ರಾವಿಡ್ ಈ ಬಗ್ಗೆ ತಂಡದ ಫಿಸಿಯೋ ಜೊತೆ ಇನ್ನೂ ಮಾತನಾಡಿಲ್ಲ ಮತ್ತು ಇದು ಎಷ್ಟು ಗಂಭೀರವಾಗಿದೆ ಎಂದು ಏನನ್ನೂ ಹೇಳಲಾಗುವುದಿಲ್ಲ ಎಂದು ಹೇಳಿದರು.

ವರದಿಯ ಪ್ರಕಾರ, ಮಂಡಿರಜ್ಜು ಗಾಯವು ಎಷ್ಟು ಗಂಭೀರವಾಗಿದೆ ಎಂಬುದರ ಮೇಲೆ ಜಡೇಜಾ ಯಾವಾಗ ಮತ್ತು ಎಷ್ಟು ಸರಣಿಯಲ್ಲಿ ಆಡಲು ಸಾಧ್ಯವಾಗುತ್ತದೆ ಎಂಬುದನ್ನು ನಿರ್ಧರಿಸುತ್ತದೆ. ಗಾಯವು ಚಿಕ್ಕದಾಗಿದೆ ಎಂದು ಸಾಬೀತಾದರೂ, ಸಂಪೂರ್ಣವಾಗಿ ಗುಣಮುಖರಾಗಲು ಸಾಮಾನ್ಯವಾಗಿ ಒಂದು ವಾರದ ವಿಶ್ರಾಂತಿ ನೀಡಲಾಗುತ್ತದೆ. ಮುಂದಿನ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಜಡೇಜಾ ಎರಡನೇ ಟೆಸ್ಟ್​ನಿಂದ ಹೊರಗುಳಿಯಬಹುದು. ಜಡ್ಡು ಮೊದಲ ಇನ್ನಿಂಗ್ಸ್‌ನಲ್ಲಿ 87 ರನ್ ಗಳಿಸಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 2 ರನ್ ಗಳಿಸಿದರು. ಅಲ್ಲದೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟು 5 ವಿಕೆಟ್‌ಗಳನ್ನು ಪಡೆದುಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು