AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಚೆನ್ನೈನಲ್ಲಿ ಅಖಾಡಕ್ಕಿಳಿಯಲಿದ್ದಾರೆ ರವೀಂದ್ರ ಜಡೇಜಾ

Ravindra Jadeja: ಬರೋಬ್ಬರಿ 4 ತಿಂಗಳ ನಂತರ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ಕ್ರಿಕೆಟ್ ಮೈದಾನಕ್ಕೆ ಮರಳುವುದು ಖಚಿತವಾಗಿದೆ. ನಿರೀಕ್ಷೆಯಂತೆ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ 17 ಸದಸ್ಯರ ಟೆಸ್ಟ್ ತಂಡದಲ್ಲಿ ಆಯ್ಕೆಯಾಗಿದ್ದಾರೆ.

Ravindra Jadeja: ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಚೆನ್ನೈನಲ್ಲಿ ಅಖಾಡಕ್ಕಿಳಿಯಲಿದ್ದಾರೆ ರವೀಂದ್ರ ಜಡೇಜಾ
ರವೀಂದ್ರ ಜಡೇಜಾ
Follow us
TV9 Web
| Updated By: ಪೃಥ್ವಿಶಂಕರ

Updated on:Jan 15, 2023 | 10:27 AM

ಬರೋಬ್ಬರಿ 4 ತಿಂಗಳ ನಂತರ ಟೀಂ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಕ್ರಿಕೆಟ್ ಮೈದಾನಕ್ಕೆ ಮರಳುವುದು ಖಚಿತವಾಗಿದೆ. ನಿರೀಕ್ಷೆಯಂತೆ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ 17 ಸದಸ್ಯರ ಟೆಸ್ಟ್ ತಂಡದಲ್ಲಿ (India Vs Australia) ಆಯ್ಕೆಯಾಗಿದ್ದಾರೆ. ಆದರೆ ಅದಕ್ಕೂ ಮುನ್ನ ಚೆನ್ನೈನಲ್ಲಿ ರಣಜಿ (Ranji Trophy) ಪಂದ್ಯ ಆಡಲಿದ್ದಾರೆ ಎಂಬ ಸುದ್ದಿ ಈಗಷ್ಟೆ ಹೊರಬಿದ್ದಿದೆ. ನಿಗದಿಯಂತೆ ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಜನವರಿ 24 ರಿಂದ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ದೇಶಿ ಪಂದ್ಯ ಆಡಲಿದ್ದಾರೆ. ರವೀಂದ್ರ ಜಡೇಜಾ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಇಂಜುರಿಯಿಂದಾಗಿ ಜಡೇಜಾ ಏಷ್ಯಾಕಪ್ ಜೊತೆಗೆ ಟಿ20 ವಿಶ್ವಕಪ್ ಕೂಡ ಆಡಲಿಲ್ಲ. ಬಳಿಕ ಬಲ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಜಡೇಜಾ, ಇದರಿಂದಾಗಿ ಕ್ರಿಕೆಟ್‌ನಿಂದ ಸಾಕಷ್ಟು ತಿಂಗಳು ದೂರ ಉಳಿಯಬೇಕಾಯಿತು.

ತಮಿಳುನಾಡು ವಿರುದ್ಧ ಆಡಬಹುದು

ಆದರೆ, ಈಗ ಜಡೇಜಾ ಆಸ್ಟ್ರೇಲಿಯಾ ವಿರುದ್ಧದ 17 ಸದಸ್ಯರ ಟೆಸ್ಟ್ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಅದಕ್ಕೂ ಮೊದಲು ಅವರು ರಣಜಿ ಟ್ರೋಫಿಯಲ್ಲಿ ಪಂದ್ಯವನ್ನು ಆಡುವುದನ್ನು ನಾವು ಕಾಣಬಹುದಾಗಿದೆ. ವರದಿಯಾಗಿರುಂತೆ ರಣಜಿ ಟ್ರೋಫಿಯ ಅಂತಿಮ ಸುತ್ತಿನಲ್ಲಿ ಸೌರಾಷ್ಟ್ರ ಪರ ಜಡೇಜಾ ಕಣಕ್ಕಿಳಿಯಲಿದ್ದು ಈ ಪಂದ್ಯ ಚೆನ್ನೈ ಮೈದಾನದಲ್ಲಿ ತಮಿಳುನಾಡು ವಿರುದ್ಧ ನಡೆಯಲಿದೆ.

IND vs BAN: ಜಡೇಜಾ, ಶಮಿ ಬದಲು ಯುವ ದೇಶೀ ಪ್ರತಿಭೆಗಳಿಗೆ ಮಣೆ ಹಾಕಿದ ಬಿಸಿಸಿಐ

ಫಿಟ್ನೆಸ್ ಪುರಾವೆಗಾಗಿ ಈ ಪಂದ್ಯ

ಎನ್​ಸಿಎ ಕ್ಲೀನ್ ಚಿಟ್ ನೀಡಿದ ನಂತರ ಭಾರತದ ಆಯ್ಕೆಗಾರರು ರವೀಂದ್ರ ಜಡೇಜಾ ಅವರನ್ನು ಆಸೀಸ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿದ್ದಾರೆ. ಆದರೆ ಆಯ್ಕೆಗಾರರ ಪ್ರಕಾರ, ಅವರು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಪ್ರವೇಶಿಸಲು ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಭಾರತೀಯ ಆಲ್‌ರೌಂಡರ್ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿರುವುದನ್ನು ಗಮನದಲ್ಲಿಟ್ಟುಕೊಂಡು, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಫೀಲ್ಡಿಂಗ್ ಮಾಡುವ ಮೊದಲು ಜಡೇಜಾ ರಣಜಿ ಪಂದ್ಯಗಳನ್ನು ಆಡಬೇಕೆಂದು ಆಯ್ಕೆಗಾರರು ಮತ್ತು NCA ನಿರ್ಧರಿಸಿದೆ.

ಟೆಸ್ಟ್‌ನಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಜಡೇಜಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿ ಫೆಬ್ರವರಿ 9 ರಿಂದ ಆರಂಭವಾಗಲಿದೆ. ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯಲಿದೆ. ಎರಡನೆಯದು ದೆಹಲಿ, ಹಾಗೂ ಮೂರನೇ ಟೆಸ್ಟ್ ಧರ್ಮಶಾಲಾದಲ್ಲಿ ಮತ್ತು ನಾಲ್ಕನೇ ಟೆಸ್ಟ್ ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ರಿಷಬ್ ಪಂತ್ ಟೀಂ ಇಂಡಿಯಾದ ಭಾಗವಾಗಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ರವೀಂದ್ರ ಜಡೇಜಾ ಮಧ್ಯಮ ಕ್ರಮಾಂಕದಲ್ಲಿ 5 ಅಥವಾ 6 ನೇ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಬಹುದು. ಎಡಗೈ ಆಲ್-ರೌಂಡರ್ ಜಡೇಜಾ, ಅಶ್ವಿನ್ ಜೊತೆಗೆ ಸ್ಪಿನ್ನರ್ ವಿಭಾಗದಲ್ಲಿ ಪರಿಣಾಮಕಾರಿಯಾಗಬಹುದು. ಇದಲ್ಲದೆ, ಅವರ ಪಾತ್ರವೂ ಪ್ರಮುಖವಾಗಿರುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Sun, 15 January 23

ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್