AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಸಿಎಸ್​ಕೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್​ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ ಜಡೇಜಾ

Ravindra Jadeja: ಭಾರತದ ಸ್ಟಾರ್ ಆಲ್​ರೌಂಡರ್ 2021 ಮತ್ತು 2022 ರಲ್ಲಿ ಸಿಎಸ್​ಕೆ ತಂಡಕ್ಕೆ ಸಂಬಂಧಿತ ಎಲ್ಲಾ ಪೋಸ್ಟ್‌ಗಳನ್ನು ಸೋಶಿಯಲ್​ ಮೀಡಿಯಾದಿಂದ ಡಿಲೀಟ್ ಮಾಡಿದ್ದಾರೆ.

Ravindra Jadeja: ಸಿಎಸ್​ಕೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್​ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ ಜಡೇಜಾ
ಜಡೇಜಾ
TV9 Web
| Updated By: ಪೃಥ್ವಿಶಂಕರ|

Updated on:Jul 08, 2022 | 9:52 PM

Share

ಈ ವರ್ಷದ ಐಪಿಎಲ್ ಆರಂಭಕ್ಕೂ ಮುನ್ನ ರವೀಂದ್ರ ಜಡೇಜಾ (Ravindra Jadeja) ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ IPL-2022 ರ ಮಧ್ಯದಲ್ಲಿ ಗಾಯಗೊಂಡ ಕಾರಣ ಜಡೇಜಾ IPL ನಿಂದ ಹೊರಬಿದ್ದರು. ಜೊತೆಗೆ ಜಡೇಜಾ ಹಳದಿ ಬ್ರಿಗೇಡ್‌ನ ನಾಯಕತ್ವವನ್ನು ತ್ಯಜಿಸಿದರು. ಆಗ ಜಡ್ಡು ಗಾಯದ ಹೆಸರಲ್ಲಿ ಸಿಎಸ್​ಕೆ ಮ್ಯಾನೇಜ್​ಮೆಂಟ್ ಜತೆಗಿನ ಅಂತರವನ್ನು ಮುಚ್ಚಿಕೊಳ್ಳುವ ಯತ್ನ ನಡೆದಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಇದ್ದಕ್ಕಿದ್ದಂತೆ ಈ ಪ್ರಶ್ನೆ ಈಗ ಹೆಚ್ಚು ತೀವ್ರವಾಗಿದೆ. ಯಾಕೆಂದರೆ, ಭಾರತದ ಸ್ಟಾರ್ ಆಲ್​ರೌಂಡರ್ 2021 ಮತ್ತು 2022 ರಲ್ಲಿ ಸಿಎಸ್​ಕೆ ತಂಡಕ್ಕೆ ಸಂಬಂಧಿತ ಎಲ್ಲಾ ಪೋಸ್ಟ್‌ಗಳನ್ನು ಸೋಶಿಯಲ್​ ಮೀಡಿಯಾದಿಂದ ಡಿಲೀಟ್ ಮಾಡಿದ್ದಾರೆ. ಇದರ ಪರಿಣಾಮವಾಗಿ, ಜಡೇಜಾ ಚೆನ್ನೈನೊಂದಿಗಿನ ಎಲ್ಲಾ ಸಂಬಂಧವನ್ನು ಮುರಿದುಕೊಂಡಿದ್ದಾರೆ ಎಂಬುದು ಗೋಚರಿಸುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಜಡೇಜಾ ಉತ್ತಮ ಬಾಂಧವ್ಯ ಹೊಂದಿದ್ದರು. 10 ವರ್ಷಗಳ ಕಾಲ ತಂಡದೊಂದಿಗೆ ಕಳೆದ ಕ್ಷಣಗಳನ್ನು ಜಡೇಜಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದರು. ಆದರೆ ಐಪಿಎಲ್ -15 ರ ಅಂತ್ಯದ ವೇಳೆಗೆ, ಸಿಎಸ್‌ಕೆ ಇನ್‌ಸ್ಟಾಗ್ರಾಮ್‌ನಲ್ಲಿ ಜಡೇಜಾ ಅವರನ್ನು ಅನ್‌ಫಾಲೋ ಮಾಡಿತ್ತು. ಆದರೆ, ತಂಡದ ಸಿಇಒ ಕಾಶಿ ಬಿಶ್ವನಾಥನ್ ಅವರು ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಆದರೆ, ಹೆಸರು ಬಹಿರಂಗಪಡಿಸಲು ಇಚ್ಛಿಸದ ಚೆನ್ನೈ ತಂಡದೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಯೊಬ್ಬರು ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಜಡೇಜಾಗೆ ಗಾಯವಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ, ಅದೇ ಸಮಯದಲ್ಲಿ, ಟೀಮ್ ಮ್ಯಾನೇಜ್ಮೆಂಟ್ ಮತ್ತು ಜಡೇಜಾ ನಡುವಿನ ಸಂಬಂಧದಲ್ಲಿ ಬಿರುಕು ಬಿಟ್ಟಿದ್ದು ನಿಜ. ಜಡೇಜಾ ನಾಯಕನಾಗಿ ವಿಫಲವಾದಾಗಿನಿಂದ ಮ್ಯಾನೆಜ್​ಮೆಂಟ್ ಜೊತೆಗಿನ ಅವರ ಸಂಬಂಧ ಹದಗೆಡಲು ಪ್ರಾರಂಬಿಸಿತು ಎಂದಿದ್ದಾರೆ.

ಇದನ್ನೂ ಓದಿ
Image
IND vs ENG: 5 ತಿಂಗಳ ನಂತರ ಶಾರ್ಟ್ ಫಾರ್ಮ್ಯಾಟ್‌ಗೆ ಕೊಹ್ಲಿ ರೀ ಎಂಟ್ರಿ; ವಿಫಲವಾದರೆ ಸ್ಥಾನಕ್ಕೆ ಕುತ್ತು!
Image
IND vs ENG: ಯುವರಾಜ್ ದಾಖಲೆ ಮುರಿದ ಹಾರ್ದಿಕ್; ಮೊದಲ ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಆಲ್ ರೌಂಡರ್
Image
IND VS ENG 2nd T20 Match Live Streaming: 2ನೇ ಟಿ20 ಪಂದ್ಯಕ್ಕೆ ಸಮಯ ಬದಲಾವಣೆ; ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

IPL ನಲ್ಲಿ ಗಾಯಗೊಂಡ ನಂತರ, ವಿಶ್ರಾಂತಿ ಪಡೆದು ಗಾಯದಿಂದ ಚೇತರಿಸಿಕೊಂಡಿದ್ದ ಜಡೇಜಾ ಎಡ್ಜ್‌ಬಾಸ್ಟನ್ ಟೆಸ್ಟ್‌ ಮೂಲಕ ಮತ್ತೆ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಭಾರತ ಈ ಟೆಸ್ಟ್​ನಲ್ಲಿ ಸೋತರೂ ಜಡೇಜಾ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಭರ್ಜರಿ ಶತಕ ಬಾರಿಸಿದ್ದರು. ಆದರೆ ಎಡ್ಜ್‌ಬಾಸ್ಟನ್ ಟೆಸ್ಟ್ ನಂತರ, ಇಂಗ್ಲೆಂಡ್ ವಿರುದ್ಧದ ಮೊದಲ T20 ಪಂದ್ಯಕ್ಕಾಗಿ ಜಡೇಜಾಗೆ ವಿಶ್ರಾಂತಿ ನೀಡಲಾಯಿತು. ಆದರೆ ಶನಿವಾರ ರಾತ್ರಿ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲ್ಲಿರುವ ಎರಡನೇ ಟಿ20 ಪಂದ್ಯದಲ್ಲಿ ಜಡೇಜಾ ಅಖಾಡಕ್ಕಿಳಿಯುವುದು ಖಚಿತವಾಗಿದೆ.

Published On - 9:52 pm, Fri, 8 July 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ