AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಸಿಎಸ್​ಕೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್​ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ ಜಡೇಜಾ

Ravindra Jadeja: ಭಾರತದ ಸ್ಟಾರ್ ಆಲ್​ರೌಂಡರ್ 2021 ಮತ್ತು 2022 ರಲ್ಲಿ ಸಿಎಸ್​ಕೆ ತಂಡಕ್ಕೆ ಸಂಬಂಧಿತ ಎಲ್ಲಾ ಪೋಸ್ಟ್‌ಗಳನ್ನು ಸೋಶಿಯಲ್​ ಮೀಡಿಯಾದಿಂದ ಡಿಲೀಟ್ ಮಾಡಿದ್ದಾರೆ.

Ravindra Jadeja: ಸಿಎಸ್​ಕೆಗೆ ಸಂಬಂಧಿಸಿದ ಎಲ್ಲಾ ಪೋಸ್ಟ್​ಗಳನ್ನು ಸೋಶಿಯಲ್ ಮೀಡಿಯಾದಿಂದ ಡಿಲೀಟ್ ಮಾಡಿದ ಜಡೇಜಾ
ಜಡೇಜಾ
TV9 Web
| Edited By: |

Updated on:Jul 08, 2022 | 9:52 PM

Share

ಈ ವರ್ಷದ ಐಪಿಎಲ್ ಆರಂಭಕ್ಕೂ ಮುನ್ನ ರವೀಂದ್ರ ಜಡೇಜಾ (Ravindra Jadeja) ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು. ಆದರೆ IPL-2022 ರ ಮಧ್ಯದಲ್ಲಿ ಗಾಯಗೊಂಡ ಕಾರಣ ಜಡೇಜಾ IPL ನಿಂದ ಹೊರಬಿದ್ದರು. ಜೊತೆಗೆ ಜಡೇಜಾ ಹಳದಿ ಬ್ರಿಗೇಡ್‌ನ ನಾಯಕತ್ವವನ್ನು ತ್ಯಜಿಸಿದರು. ಆಗ ಜಡ್ಡು ಗಾಯದ ಹೆಸರಲ್ಲಿ ಸಿಎಸ್​ಕೆ ಮ್ಯಾನೇಜ್​ಮೆಂಟ್ ಜತೆಗಿನ ಅಂತರವನ್ನು ಮುಚ್ಚಿಕೊಳ್ಳುವ ಯತ್ನ ನಡೆದಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಇದ್ದಕ್ಕಿದ್ದಂತೆ ಈ ಪ್ರಶ್ನೆ ಈಗ ಹೆಚ್ಚು ತೀವ್ರವಾಗಿದೆ. ಯಾಕೆಂದರೆ, ಭಾರತದ ಸ್ಟಾರ್ ಆಲ್​ರೌಂಡರ್ 2021 ಮತ್ತು 2022 ರಲ್ಲಿ ಸಿಎಸ್​ಕೆ ತಂಡಕ್ಕೆ ಸಂಬಂಧಿತ ಎಲ್ಲಾ ಪೋಸ್ಟ್‌ಗಳನ್ನು ಸೋಶಿಯಲ್​ ಮೀಡಿಯಾದಿಂದ ಡಿಲೀಟ್ ಮಾಡಿದ್ದಾರೆ. ಇದರ ಪರಿಣಾಮವಾಗಿ, ಜಡೇಜಾ ಚೆನ್ನೈನೊಂದಿಗಿನ ಎಲ್ಲಾ ಸಂಬಂಧವನ್ನು ಮುರಿದುಕೊಂಡಿದ್ದಾರೆ ಎಂಬುದು ಗೋಚರಿಸುತ್ತಿದೆ.

ಚೆನ್ನೈ ಸೂಪರ್ ಕಿಂಗ್ಸ್ ಜೊತೆ ಜಡೇಜಾ ಉತ್ತಮ ಬಾಂಧವ್ಯ ಹೊಂದಿದ್ದರು. 10 ವರ್ಷಗಳ ಕಾಲ ತಂಡದೊಂದಿಗೆ ಕಳೆದ ಕ್ಷಣಗಳನ್ನು ಜಡೇಜಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದರು. ಆದರೆ ಐಪಿಎಲ್ -15 ರ ಅಂತ್ಯದ ವೇಳೆಗೆ, ಸಿಎಸ್‌ಕೆ ಇನ್‌ಸ್ಟಾಗ್ರಾಮ್‌ನಲ್ಲಿ ಜಡೇಜಾ ಅವರನ್ನು ಅನ್‌ಫಾಲೋ ಮಾಡಿತ್ತು. ಆದರೆ, ತಂಡದ ಸಿಇಒ ಕಾಶಿ ಬಿಶ್ವನಾಥನ್ ಅವರು ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಆದರೆ, ಹೆಸರು ಬಹಿರಂಗಪಡಿಸಲು ಇಚ್ಛಿಸದ ಚೆನ್ನೈ ತಂಡದೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಯೊಬ್ಬರು ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಜಡೇಜಾಗೆ ಗಾಯವಾಗಿರುವುದರಲ್ಲಿ ಯಾವುದೇ ಅನುಮಾನವಿಲ್ಲ, ಅದೇ ಸಮಯದಲ್ಲಿ, ಟೀಮ್ ಮ್ಯಾನೇಜ್ಮೆಂಟ್ ಮತ್ತು ಜಡೇಜಾ ನಡುವಿನ ಸಂಬಂಧದಲ್ಲಿ ಬಿರುಕು ಬಿಟ್ಟಿದ್ದು ನಿಜ. ಜಡೇಜಾ ನಾಯಕನಾಗಿ ವಿಫಲವಾದಾಗಿನಿಂದ ಮ್ಯಾನೆಜ್​ಮೆಂಟ್ ಜೊತೆಗಿನ ಅವರ ಸಂಬಂಧ ಹದಗೆಡಲು ಪ್ರಾರಂಬಿಸಿತು ಎಂದಿದ್ದಾರೆ.

ಇದನ್ನೂ ಓದಿ
Image
IND vs ENG: 5 ತಿಂಗಳ ನಂತರ ಶಾರ್ಟ್ ಫಾರ್ಮ್ಯಾಟ್‌ಗೆ ಕೊಹ್ಲಿ ರೀ ಎಂಟ್ರಿ; ವಿಫಲವಾದರೆ ಸ್ಥಾನಕ್ಕೆ ಕುತ್ತು!
Image
IND vs ENG: ಯುವರಾಜ್ ದಾಖಲೆ ಮುರಿದ ಹಾರ್ದಿಕ್; ಮೊದಲ ಟಿ20ಯಲ್ಲಿ ಇತಿಹಾಸ ಸೃಷ್ಟಿಸಿದ ಆಲ್ ರೌಂಡರ್
Image
IND VS ENG 2nd T20 Match Live Streaming: 2ನೇ ಟಿ20 ಪಂದ್ಯಕ್ಕೆ ಸಮಯ ಬದಲಾವಣೆ; ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

IPL ನಲ್ಲಿ ಗಾಯಗೊಂಡ ನಂತರ, ವಿಶ್ರಾಂತಿ ಪಡೆದು ಗಾಯದಿಂದ ಚೇತರಿಸಿಕೊಂಡಿದ್ದ ಜಡೇಜಾ ಎಡ್ಜ್‌ಬಾಸ್ಟನ್ ಟೆಸ್ಟ್‌ ಮೂಲಕ ಮತ್ತೆ ಟೀಂ ಇಂಡಿಯಾಕ್ಕೆ ಮರಳಿದ್ದಾರೆ. ಆದರೆ ಭಾರತ ಈ ಟೆಸ್ಟ್​ನಲ್ಲಿ ಸೋತರೂ ಜಡೇಜಾ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಭರ್ಜರಿ ಶತಕ ಬಾರಿಸಿದ್ದರು. ಆದರೆ ಎಡ್ಜ್‌ಬಾಸ್ಟನ್ ಟೆಸ್ಟ್ ನಂತರ, ಇಂಗ್ಲೆಂಡ್ ವಿರುದ್ಧದ ಮೊದಲ T20 ಪಂದ್ಯಕ್ಕಾಗಿ ಜಡೇಜಾಗೆ ವಿಶ್ರಾಂತಿ ನೀಡಲಾಯಿತು. ಆದರೆ ಶನಿವಾರ ರಾತ್ರಿ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲ್ಲಿರುವ ಎರಡನೇ ಟಿ20 ಪಂದ್ಯದಲ್ಲಿ ಜಡೇಜಾ ಅಖಾಡಕ್ಕಿಳಿಯುವುದು ಖಚಿತವಾಗಿದೆ.

Published On - 9:52 pm, Fri, 8 July 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು