Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ಫೈನಲ್ ಪಂದ್ಯದ ಬಳಿಕ ರವೀಂದ್ರ ಜಡೇಜಾ ನಿವೃತ್ತಿ? ಕೊಹ್ಲಿ ಅಪ್ಪುಗೆಯ ಹಿಂದಿನ ಮರ್ಮವೇನು?

Ravindra Jadeja Retirement: ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಅದ್ಭುತ ಬೌಲಿಂಗ್ ನಂತರ ವಿರಾಟ್ ಕೊಹ್ಲಿ ಅವರನ್ನು ಅಪ್ಪಿಕೊಂಡ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಜಡೇಜಾ ಅವರು ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಹೊಂದಬಹುದು ಎಂಬ ಊಹಾಪೋಹಗಳು ಹಬ್ಬಿವೆ.ಆದರೆ ಈ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

IND vs NZ: ಫೈನಲ್ ಪಂದ್ಯದ ಬಳಿಕ ರವೀಂದ್ರ ಜಡೇಜಾ ನಿವೃತ್ತಿ? ಕೊಹ್ಲಿ ಅಪ್ಪುಗೆಯ ಹಿಂದಿನ ಮರ್ಮವೇನು?
Ravindra Jadeja
Follow us
ಪೃಥ್ವಿಶಂಕರ
|

Updated on:Mar 09, 2025 | 7:35 PM

2025 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್ (Champions Trophy 2025) ಪಂದ್ಯದ ಫೋಟೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು, ಭಾರತ ಕ್ರಿಕೆಟ್​ನಲ್ಲಿ ಸಂಚಲನ ಸೃಷ್ಟಿಸಿದೆ. ವಾಸ್ತವವಾಗಿ, ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ, ವಿರಾಟ್ ಕೊಹ್ಲಿ ತಂಡದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಅಪ್ಪಿಕೊಂಡರು. ಅಂದಿನಿಂದ ಈ ಪಂದ್ಯದ ಬಳಿಕ ರವೀಂದ್ರ ಜಡೇಜಾ (Ravindra Jadeja) ಏಕದಿನ ಮಾದರಿಗೆ ನಿವೃತ್ತಿ ಘೋಷಿಸಬಹುದು ಎಂದು ಹೇಳಲಾಗುತ್ತಿದೆ. ಇವರಿಬ್ಬರ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದರೊಂದಿಗೆ ನಿವೃತ್ತಿಯ ಬಗ್ಗೆಯೂ ಸಾಕಷ್ಟು ಚರ್ಚೆಯಾಗುತ್ತಿದೆ.

ಈ ನಿವೃತ್ತಿಯ ಬಗ್ಗೆ ಇಷ್ಟೊಂದು ಚರ್ಚೆ ನಡೆಯಲು ಪ್ರಮುಖ ಕಾರಣ, ಜಡೇಜಾ ಅವರ ಬೌಲಿಂಗ್ ಖೋಟಾ ಮುಗಿದ ಕೂಡಲೇ ಕೊಹ್ಲಿ, ಜಡೇಜಾರನ್ನು ಅಪ್ಪಿಕೊಂಡರು. ಅದಕ್ಕಾಗಿಯೇ ಜಡೇಜಾ ನಿವೃತ್ತಿ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಅಲ್ಲದೆ ಜಡೇಜಾ ಇನ್ನು ಮುಂದೆ ಟೀಂ ಇಂಡಿಯಾ ಪರ ಆಡುವುದಿಲ್ಲ ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಆದಾಗ್ಯೂ, ಈ ವಿಷಯಗಳಲ್ಲಿ ಎಷ್ಟು ಸತ್ಯವಿದೆ ಎಂಬುದನ್ನು ಕಾಲವೇ ಹೇಳಬೇಕು, ಏಕೆಂದರೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.

ಇದನ್ನೂ ಓದಿ
Image
ಐಸಿಸಿ ಟೂರ್ನಿಗಳಲ್ಲಿ 12 ವರ್ಷಗಳ ಬರ ನೀಗಿಸಿಕೊಂಡ ಜಡೇಜಾ
Image
ಸೋಲಿಗೆ ನೀನೇ ಕಾರಣ ಎಂದವರಿಗೆ ಗೆಲುವಿನ ಉತ್ತರ ನೀಡಿದ ರಾಹುಲ್
Image
ರಣರೋಚಕ ಪಂದ್ಯದಲ್ಲಿ ಕಾಂಗರೂಗಳನ್ನು ಮಣಿಸಿ ಫೈನಲ್​ಗೇರಿದ ಭಾರತ
Image
ಐಸಿಸಿ ನಿಯಮ ಮುರಿದ ಜಡೇಜಾಗೆ ಎದುರಾಗುತ್ತಾ ಗಂಡಾಂತರ?

‘ಧನ್ಯವಾದಗಳು’ ಎಂದ ಫ್ಯಾನ್ಸ್

ರವೀಂದ್ರ ಜಡೇಜಾ ನಿವೃತ್ತರಾಗುತ್ತಾರೋ ಇಲ್ಲವೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಅಭಿಮಾನಿಗಳು ಇದು ಅವರ ಕೊನೆಯ ಪಂದ್ಯ ಎಂದು ಒಪ್ಪಿಕೊಂಡಿದ್ದಾರೆ. ಅನೇಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಟೀಂ ಇಂಡಿಯಾ ಪರ ಇಷ್ಟು ದಿನ ಆಡಿದ್ದಕ್ಕಾಗಿ ಮತ್ತು ಉತ್ತಮ ಪ್ರದರ್ಶನ ನೀಡಿದ್ದಕ್ಕಾಗಿ ಜಡೇಜಾಗೆ ಧನ್ಯವಾದ ಅರ್ಪಿಸಿದ್ದಾರೆ. ಜಡೇಜಾ ಅವರ ನಿವೃತ್ತಿಗೆ ಅಭಿಮಾನಿಗಳು ಈಗಾಗಲೇ ಶುಭ ಹಾರೈಸಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: IND vs AUS: ಲಬುಶೇನ್ ರನ್ ಓಡದಂತೆ ತಡೆದ ಜಡೇಜಾ; ಐಸಿಸಿಯಿಂದ ಬೀಳುತ್ತಾ ದಂಡ? ವಿಡಿಯೋ

ಫೈನಲ್‌ನಲ್ಲಿ ಅದ್ಭುತ ಬೌಲಿಂಗ್

ರವೀಂದ್ರ ಜಡೇಜಾ ಪ್ರತಿಯೊಂದು ಪ್ರಮುಖ ಸಂದರ್ಭದಲ್ಲೂ ಅದ್ಭುತ ಪ್ರದರ್ಶನ ನೀಡುವಲ್ಲಿ ಹೆಸರುವಾಸಿಯಾಗಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲೂ ಅವರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದರು. ಜಡೇಜಾ ಕಿವೀಸ್ ಬ್ಯಾಟ್ಸ್‌ಮನ್‌ಗಳಿಗೆ ರನ್ ಗಳಿಸಲು ಯಾವುದೇ ಅವಕಾಶ ನೀಡಲಿಲ್ಲ. ಪಂದ್ಯದುದ್ದಕ್ಕೂ ಕೇವಲ 3 ರನ್‌ಗಳ ಎಕಾನಮಿಯಲ್ಲಿ 10 ಓವರ್‌ ಬೌಲ್ ಮಾಡಿದ ಜಡೇಜಾ 30 ರನ್‌ಗಳನ್ನು ನೀಡಿದರು. ಇದರ ಜೊತೆಗೆ ಜಡೇಜಾ ಟಾಮ್ ಲ್ಯಾಥಮ್ ಅವರ ಪ್ರಮುಖ ವಿಕೆಟ್ ಅನ್ನು ಸಹ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:34 pm, Sun, 9 March 25

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್