AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧೋನಿ ವಿರುದ್ದ KKR ಮಾಸ್ಟರ್​ ಸ್ಟ್ರೋಕ್: ಬರೀ ಶೋಆಫ್ ಎಂದ ರವೀಂದ್ರ ಜಡೇಜಾ

Ravindra jadeja: ಪ್ಯಾಟ್ ಕಮಿನ್ಸ್ ನಿಲ್ಲಿಸಿದ ಫೀಲ್ಡಿಂಗ್​ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಫೋಟೋವನ್ನು ಮೀರಿಸುವಂತಹ ಮತ್ತೊಂದು ಚಿತ್ರವನ್ನು ಕೊಲ್ಕತ್ತಾ ನೈಟ್​ ರೈಡರ್ಸ್ ಹಂಚಿಕೊಂಡಿದೆ.

ಧೋನಿ ವಿರುದ್ದ KKR ಮಾಸ್ಟರ್​ ಸ್ಟ್ರೋಕ್: ಬರೀ ಶೋಆಫ್ ಎಂದ ರವೀಂದ್ರ ಜಡೇಜಾ
Ravindra jadeja
TV9 Web
| Updated By: ಝಾಹಿರ್ ಯೂಸುಫ್|

Updated on:Jan 09, 2022 | 7:28 PM

Share

ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್​… ಸಿಡ್ನಿ ಮೈದಾನದಲ್ಲಿ ನಡೆದ ಅಂತಿಮ ಮೂರು ಓವರ್​ಗಳಲ್ಲಿ ಆಸ್ಟ್ರೇಲಿಯಾಗೆ ಗೆಲ್ಲಲು ಕೇವಲ 1 ವಿಕೆಟ್​ನ ಅವಶ್ಯಕತೆಯಿತ್ತು. ಕ್ರೀಸ್​ನಲ್ಲಿ ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆಂಡರ್ಸನ್ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಪ್ರಯತ್ನದಲ್ಲಿದ್ದರು. ರಣ ರೋಚಕ ಪಂದ್ಯವು ಅಂತಿಮ ಓವರ್​ನತ್ತ ಸಾಗಿತು. ಆಸ್ಟ್ರೇಲಿಯಾ ತಂಡದ ನಾಯಕಪ್ಯಾಟ್ ಕಮ್ಮಿನ್ಸ್ ಚೆಂಡನ್ನು ಸ್ಟೀವ್ ಸ್ಮಿತ್‌ಗೆ ಹಸ್ತಾಂತರಿಸಿದರು. ಅಷ್ಟೇ ಅಲ್ಲದೆ ಫೀಲ್ಡಿಂಗ್ ಸೆಟ್ಟಿಂಗ್ ಬದಲಿಸಿದರು. ಒಂದು ವಿಕೆಟ್​ ಪಡೆಯಲು ಆಸ್ಟ್ರೇಲಿಯಾ ಆಟಗಾರರ ಪಿಚ್ ಭಾಗದಲ್ಲೇ ಫೀಲ್ಡಿಂಗ್​ನಲ್ಲಿ ನಿಂತರು. ಇದಾಗ್ಯೂ ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆಂಡರ್ಸನ್ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಪ್ಯಾಟ್ ಕಮಿನ್ಸ್ ನಿಲ್ಲಿಸಿದ ಫೀಲ್ಡಿಂಗ್​ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಫೋಟೋವನ್ನು ಮೀರಿಸುವಂತಹ ಮತ್ತೊಂದು ಚಿತ್ರವನ್ನು ಕೊಲ್ಕತ್ತಾ ನೈಟ್​ ರೈಡರ್ಸ್ ಹಂಚಿಕೊಂಡಿದೆ. ಈ ಮೂಲಕ ನಾವು ಟಿ20 ಕ್ರಿಕೆಟ್​ನಲ್ಲೇ ಇಂತಹ ಫೀಲ್ಡಿಂಗ್ ಸೆಟ್ ಮಾಡಿದ್ದೆವು ಎಂಬುದನ್ನು ಸಾರಿದ್ದಾರೆ.

ಈ ಫೋಟೋದಲ್ಲಿ ಪುಣೆ ಸೂಪರ್ ಜೈಂಟ್ಸ್​ ನಡುವಣ ಪಂದ್ಯದಲ್ಲಿ KKR ಆಟಗಾರರು ಸ್ಟ್ರೈಕ್​ನಲ್ಲಿದ್ದ ಧೋನಿ ಸುತ್ತಲೂ ನಿಂತಿದ್ದರು. ಪಿಯೂಷ್ ಚಾವ್ಲಾ ಅವರ ಬೌಲಿಂಗ್‌ ನಾಲ್ವರು ಆಟಗಾರರು ಕ್ರೀಸ್ ಪಕ್ಕದಲ್ಲೇ ಫೀಲ್ಡ್ ಮಾಡಿದ್ದರು. ಈ ಫೋಟೋವನ್ನು ಹಂಚಿಕೊಂಡಿರುವ ಕೆಕೆಆರ್ ಇದು​ ಟೆಸ್ಟ್ ಕ್ರಿಕೆಟ್‌ನ ಶ್ರೇಷ್ಠ ತಂತ್ರವಾಗಿದ್ದರೆ, ನಮ್ಮ T20 ಮಾಸ್ಟರ್ ಸ್ಟ್ರೋಕ್ ಅನ್ನು ನೆನಪಿಸುತ್ತಿದೆ’ ಎಂದು ಬರೆದುಕೊಂಡಿದ್ದರು.

ಕೆಕೆಆರ್​ ತಂಡ ಈ ಪೋಸ್ಟ್ ನೋಡಿರುವ ಸಿಎಸ್​ಕೆ ತಂಡದ ಆಲ್​ರೌಂಡರ್ ರವೀಂದ್ರ ಜಡೇಜಾ ಪ್ರತಿಕ್ರಿಯಿಸಿದ್ದಾರೆ. ಇದು ಮಾಸ್ಟರ್​ ಸ್ಟ್ರೋಕ್ ಏನಲ್ಲ, ಸುಮ್ಮನೆ ಶೋಆಫ್ ಎಂದು ಜಡೇಜಾ ಕೆಕೆಆರ್ ಪೋಸ್ಟ್​ ಅನ್ನು ಟ್ರೋಲ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಸಿಎಸ್​ಕೆ ಅಭಿಮಾನಿಗಳು ಕೂಡ ಕೆಕೆಆರ್​ ಪೋಸ್ಟ್ ಅನ್ನು ಕಿಚಾಯಿಸಿದ್ದಾರೆ. ಅದರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಯೊಬ್ಬರು 2017 ರಲ್ಲಿ ಕೆಕೆಆರ್ ಮಾಲೀಕ ಶಾರೂಖ್ ಖಾನ್ ನೀಡಿರುವ ಹೇಳಿಕೆಯನ್ನೇ ಮುಂದಿಟ್ಟು ಟ್ರೋಲ್ ಮಾಡಿದ್ದಾರೆ. 2017 ರ ಹರಾಜಿನ ವೇಳೆ ಶಾರೂಖ್ ಖಾನ್ ನಾನು ನನ್ನ ಪೈಜಾಮಾವನ್ನು ಮಾರಾಟ ಮಾಡಿಯಾದರೂ ಧೋನಿಯನ್ನು ಖರೀದಿಸಲು ಬಯಸಿದ್ದೆ ಎಂಬ ಹೇಳಿಕೆ ನೀಡಿದ್ದರು. ಇದನ್ನೆ ಮುಂದಿಟ್ಟು ಇದೀಗ ಸಿಎಸ್​ಕೆ ಅಭಿಮಾನಿಗಳ ಕೆಕೆಆರ್​ ಪೋಸ್ಟ್ ಅನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: IPL 2022: ಮತ್ತೆ RCB ಪರ ಆಡಬೇಕೆಂದ ಸ್ಟಾರ್ ಬೌಲರ್

ಇದನ್ನೂ ಓದಿ:  Sachin Tendulkar: ಆಲ್‌ ಟೈಮ್ ಬೆಸ್ಟ್‌ 11 ಹೆಸರಿಸಿದ ಸಚಿನ್: ಪ್ರಮುಖ ಆಟಗಾರರಿಗಿಲ್ಲ ಸ್ಥಾನ

ಇದನ್ನೂ ಓದಿ: Steve Smith: 11 ಶತಕ, 11 ಅರ್ಧಶತಕ: ವಿಶೇಷ ದಾಖಲೆ ಬರೆದ ಸ್ಟೀವ್ ಸ್ಮಿತ್

ಇದನ್ನೂ ಓದಿ: IPL 2022: ಅಹಮದಾಬಾದ್ ತಂಡಕ್ಕೆ ಟೀಮ್ ಇಂಡಿಯಾ ಮಾಜಿ ಆಟಗಾರ ಕೋಚ್..!

(Ravindra jadeja trolls kolkata knight riders ms dhoni tweet)

Published On - 7:27 pm, Sun, 9 January 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ