AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ravindra Jadeja: ಸಿಕ್ಸ್, ಫೋರ್ ಸಿಡಿಸಿ ಪತಿ ಪಂದ್ಯ ಗೆಲ್ಲಿಸುತ್ತಿದ್ದಂತೆ ಕಣ್ಣೀರಿಟ್ಟ ರವೀಂದ್ರ ಜಡೇಜಾ ಪತ್ನಿ: ವಿಡಿಯೋ

IPL 2023 Final, CSK vs GT: ಗುಜರಾತ್ ವಿರುದ್ಧ ಚೆನ್ನೈ ಗೆಲ್ಲುತ್ತಿದ್ದಂತೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಅದರಲ್ಲೂ ಪಂದ್ಯ ವೀಕ್ಷಿಸಲು ಬಂದಿದ್ದ ರವೀಂದ್ರ ಜಡೇಜಾ ಅವರ ಪತ್ನಿ ರವೀಬಾ ಜಡೇಜಾ ಖುಷಿಯಿಂದ ಕಣ್ಣೀರಿಟ್ಟರು.

Ravindra Jadeja: ಸಿಕ್ಸ್, ಫೋರ್ ಸಿಡಿಸಿ ಪತಿ ಪಂದ್ಯ ಗೆಲ್ಲಿಸುತ್ತಿದ್ದಂತೆ ಕಣ್ಣೀರಿಟ್ಟ ರವೀಂದ್ರ ಜಡೇಜಾ ಪತ್ನಿ: ವಿಡಿಯೋ
Ravindra Jadeja wife Rivaba Jadeja
Follow us
Vinay Bhat
|

Updated on:May 30, 2023 | 11:38 AM

ಯಾರೂ ಊಹಿಸಲಾಗದ ರೀತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023 Final) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮಳೆಯ ನಡುವೆ ನಡೆದ ಪಂದ್ಯದಲ್ಲಿ ಸಿಎಸ್​ಕೆ ಡಕ್ವರ್ತ್ ಲುಯಿಸ್ ನಿಯಮದ ಪ್ರಕಾರ 5 ವಿಕೆಟ್​ಗಳ ಜಯ ಸಾಧಿಸಿ ಟ್ರೋಫಿ ಎತ್ತಿ ಹಿಡಿಯಿತು. ಈ ಮೂಲಕ ಚೆನ್ನೈ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಆಗಿದ್ದ ಮುಂಬೈ ಇಂಡಿಯನ್ಸ್ ದಾಖಲೆಯನ್ನು ಸರಿಗಟ್ಟಿದೆ. ಸಿಎಸ್​ಕೆ ಗೆಲ್ಲಲು ಮುಖ್ಯ ಕಾರಣ ರವೀಂದ್ರ ಜಡೇಜಾ (Ravindra Jadeja). ಅಂತಿಮ ಹಂತದಲ್ಲಿ ಕ್ರೀಸ್​ಗೆ ಬಂದು ಪಂದ್ಯವನ್ನು ಗೆಲ್ಲಿಸಿ ಹೀರೋ ಆದರು.

ಕೊನೆಯ ಓವರ್​ನಲ್ಲಿ ಚೆನ್ನೈ ಗೆಲುವಿಗೆ 13 ರನ್​ ಬೇಕಿತ್ತು. ರವೀಂದ್ರ ಜಡೇಜಾ, ಶಿವಂ ದುಬೆ ಕ್ರೀಸ್​ನಲ್ಲಿದ್ದರು. ಮೋಹಿತ್​ ಶರ್ಮಾ ಬೌಲರ್ ಆಗಿದ್ದರು. ಮೊದಲ ಎಸೆತ ಡಾಟ್​ ಆದರೆ, ಮುಂದಿನ ಮೂರು ಎಸೆತದಲ್ಲಿ ಬಂದಿದ್ದು ತಲಾ ಒಂದೊಂದು ರನ್ ಮಾತ್ರ. ಹೀಗಾಗಿ ಕೊನೆಯ ಎರಡು ಎಸೆತಗಳಲ್ಲಿ ತಂಡದ ಗೆಲುವಿಗೆ 10 ರನ್​ಗಳು ಬೇಕಾಗಿದ್ದವು. ಇದು ತಂಡದ ಮೇಲೆ ಒತ್ತಡ ಹೆಚ್ಚಿಸಿತು. ಅಲ್ಲದೆ ಈ ಪಂದ್ಯವನ್ನು ಸಿಎಸ್​ಕೆ ಕಳೆದುಕೊಂಡಿತು ಎಂದೇ ಎಲ್ಲರು ನಂಬಿದ್ದರು. ಆದರೆ, ಆಲ್​ರೌಂಡರ್ ರವೀಂದ್ರ ಜಡೇಜಾ ಜಾದೂ ಮಾಡಿದಂತೆ 5ನೇ ಎಸೆತವನ್ನು ಸಿಕ್ಸರ್​ ಬಾರಿಸಿದರೆ, ಕೊನೆಯ ಎಸೆತವನ್ನು ಬೌಂಡರಿ ಬಾರಿಸಿ ರೋಚಕ ಜಯ ತಂದುಕೊಟ್ಟರು.

ಇದನ್ನೂ ಓದಿ
Image
MS Dhoni Tears: ಸಿಎಸ್​ಕೆ ಗೆಲ್ಲುತ್ತಿದ್ದಂತೆ ಜಡೇಜಾರನ್ನು ಅಪ್ಪಿ ಮೈದಾನದಲ್ಲೇ ಕಣ್ಣೀರಿಟ್ಟ ಎಂಎಸ್ ಧೋನಿ
Image
MS Dhoni IPL 2023 Final: ನಿವೃತ್ತಿ ಹೇಳಲು ಇದು ಸರಿಯಾದ ಸಮಯ, ಆದರೆ: ಪಂದ್ಯದ ಬಳಿಕ ಧೋನಿಯಿಂದ ಶಾಕಿಂಗ್ ಹೇಳಿಕೆ
Image
IPL 2023 Prize Money: ಸಿಎಸ್​ಕೆಗೆ ಸಿಕ್ತು ಬರೋಬ್ಬರಿ 20 ಕೋಟಿ: ರಹಾನೆ, ಗಿಲ್, ಶಮಿಗೂ ಸಿಕ್ತು ಲಕ್ಷ ಲಕ್ಷ ಹಣ: ಇಲ್ಲಿದೆ ಸಂಪೂರ್ಣ ಮಾಹಿತಿ
Image
IPL 2023 Car Winner: RCB ಆಟಗಾರನ ಪಾಲಾದ ಟಾಟಾ ಕಾರ್

IPL 2023: ಯಾರಿಗೆ ಯಾವ ಪ್ರಶಸ್ತಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಇತ್ತ ಚೆನ್ನೈ ಗೆಲ್ಲುತ್ತಿದ್ದಂತೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಅದರಲ್ಲೂ ಪಂದ್ಯ ವೀಕ್ಷಿಸಲು ಬಂದಿದ್ದ ರವೀಂದ್ರ ಜಡೇಜಾ ಅವರ ಪತ್ನಿ ರವೀಬಾ ಜಡೇಜಾ ಖುಷಿಯಿಂದ ಕಣ್ಣೀರಿಟ್ಟರು. ಪಂದ್ಯ ಮುಗಿದ ಬಳಿಕ ಮೈದಾನಕ್ಕೆ ಬಂದು ಜಡೇಜಾ ಅವರನ್ನು ಅಪ್ಪಿಕೊಂಡು ಸಂಭ್ರಮಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಖುಷಿಯಲ್ಲಿ ಜಡೇಜಾ ಮಗಳು ಕೂಡ ಪಾಲ್ಗೊಂಡಿದ್ದರು. ಇಲ್ಲಿದೆ ನೋಡಿ ಆ ವಿಡಿಯೋ.

ಪಂದ್ಯ ಮುಗಿದ ಬಳಿಕ ಮಾತನಾಡಿದ ಜಡೇಜಾ, “ಇದು ನನ್ನ ತವರೂರು, ಇಲ್ಲಿ ಪ್ರಶಸ್ತಿ ಜಯಿಸಿರುವುದು ತುಂಬಾ ಖುಷಿ ತಂದಿದೆ. ಮಳೆ ಬಂದರೂ ತಡರಾತ್ರಿವರೆಗೆ ಕಾದು ಪಂದ್ಯ ವೀಕ್ಷಿಸಿದ ಅಭಿಮಾನಿಗಳು ಅದ್ಭುತ. ಸಿಎಸ್​ಕೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು. ಈ ಗೆಲುವನ್ನು ಎಂ.ಎಸ್. ಧೋನಿಗೆ ಅರ್ಪಿಸುತ್ತೇನೆ. ಪಂದ್ಯದಲ್ಲಿ ನಾನು ಜವಾಬ್ದಾರಿ ಅರಿತು ಕಾದು ಆಟವಾಡಿದೆ. ಯಾವುದೇ ಕಟ್ಟ ಹೊಡೆತಕ್ಕೆ ಮಾರು ಹೋಗಲಿಲ್ಲ. ಮೋಹಿತ್​ ಶರ್ಮಾ ನಿಧಾನವಾಗಿ ಬೌಲಿಂಗ್​ ಮಾಡುತ್ತಿದ್ದುದನ್ನು ಗಮನಿಸಿದ್ದೆ. ಇದನ್ನು ಅರಿತು ನಾನು ಅಂತಿಮ ಹಂತದಲ್ಲಿ ಉತ್ತಮ ಹೊಡೆತ ಬಾರಿಸಲು ಸಾಧ್ಯವಾಯಿತು,” ಎಂದು ಹೇಳಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:37 am, Tue, 30 May 23

ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು